ಬೆಂಗಳೂರಿನಿಂದ ವಯನಾಡಿಗೆ ಬಸ್ಸು ಸಂಚಾರ ಆರಂಭ

Public TV
1 Min Read
Bus services resume in flood hit Wayanad Chooralmala Mundakkai Meppadi news LandSlide

ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ (Satellite Bus Stand) ಪ್ರವಾಹ ಪೀಡಿತ ವಯನಾಡಿಗೆ (Wayanad LandSlide) ಬಸ್ ಸಂಚಾರ (Bus Service) ಗುರುವಾರ ರಾತ್ರಿಯಿಂದ ಆರಂಭವಾಗಿದೆ.

ಕೇರಳ ರಾಜ್ಯ ರಸ್ತೆ ಸಾರಿಗೆಯ 5 ಬಸ್ಸುಗಳ ಸಂಚಾರ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಪ್ರತಿ ಗಂಟೆಗೆ ಒಂದು ಬಸ್ಸು ಹೊರಡುತ್ತಿದೆ. ಒಟ್ಟು 23 ಬಸ್ಸುಗಳು ಕಾರ್ಯಾಚರಣೆ ಮಾಡಲಿದೆ.  ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

 

ಮೈಸೂರು-ಸುಲ್ತಾನ್ ಬತ್ತೇರಿ ಮಾರ್ಗ ಮತ್ತು ಮೈಸೂರು – ಮಾನಂದವಾಡಿ ಮಾರ್ಗದ ಮೂಲಕ ಬಸ್ಸುಗಳು ವಯನಾಡಿಗೆ ತೆರಳುತ್ತಿವೆ. ಇಂದು ಮತ್ತು ನಾಳೆ ಕಾರ್ಯಾಚರಣೆ ಮಾಡಲಿರುವ ಬಸ್ಸುಗಳ ಎಲ್ಲಾ ಸೀಟ್‌ಗಳು ಬುಕ್‌ ಆಗಿವೆ. ಇದನ್ನೂ ಓದಿ: 206 ಮಂದಿ ನಾಪತ್ತೆ – ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಶೋಧ ಕಾರ್ಯ

Share This Article