Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇಸ್ರೇಲ್‌ v/s ಹಿಜ್ಬುಲ್ಲಾ; ಇಬ್ಬರ ನಡುವೆ ಕಿತ್ತಾಟ ಯಾಕೆ? – ಭಾರತೀಯರಿಗೆ ಎಚ್ಚರಿಕೆ!

Public TV
Last updated: August 4, 2024 9:25 am
Public TV
Share
4 Min Read
Israel Hezbollah conflict
SHARE

ವಿಶ್ವದಲ್ಲಿ ಎತ್ತ ನೋಡಿದರೂ ಯುದ್ಧಗಳದ್ದೇ ಸುದ್ದಿ. ಅತ್ತ ರಷ್ಯಾ-ಉಕ್ರೇನ್ ವಾರ್, ಇತ್ತ ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ. ಮೇಲ್ನೋಟಕ್ಕೆ ಇದು ಎರಡು ದೇಶಗಳ ನಡುವಿನ ಸಂಘರ್ಷವಾದರೂ ಜಗತ್ತಿನ ಇತರೆ ರಾಷ್ಟ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧಕ್ಕೆ ಹಮಾಸ್ ಬಂಡುಕೋರರ ಗುಂಪು ಕಾರಣ. ಸಂದಿಗ್ಧ ಸನ್ನಿವೇಶದ ಹೊತ್ತಿನಲ್ಲೇ ಮತ್ತೊಂದು ಯುದ್ಧದ ಭೀತಿ ಎದುರಾಗಿದೆ. ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಸಂಘರ್ಷ ಶುರುವಾಗಿದೆ. ಈ ಸಂಘರ್ಷ ಮತ್ತಷ್ಟು ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ.

ಅಷ್ಟಕ್ಕೂ ಏನಿದು ಇಸ್ರೇಲ್-ಹಿಜ್ಬುಲ್ಲಾ (Israel vs Hezbollah Conflict) ಸಂಘರ್ಷ? ಇಬ್ಬರ ನಡುವೆ ತಿಕ್ಕಾಟ ಯಾಕೆ? ಇದರಿಂದ ಆಗಬಹುದಾದ ಪರಿಣಾಮ ಏನು? ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ – 32 ಮಂದಿ ಸಾವು

210 Killed In Gaza Camp From Where Israeli Hostages Were Rescued Hamas

ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್‌ನಲ್ಲಿ ವಾರದ ಹಿಂದೆ ಫೌದ್ ಶೂಕೂರ್ ರಾಕೆಟ್ ದಾಳಿ ನಡೆಸಿ, 12 ಯುವಕರ ಹತ್ಯೆ ಮಾಡಿದ್ದ. ಇದು ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಲೆಬನಾನಿನ ಗುಂಪು ಹಿಜ್ಬುಲ್ಲಾ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಹಿಜ್ಬುಲ್ಲಾ ಮೇಲೆ ತೀವ್ರವಾಗಿ ದಾಳಿ ನಡೆಸುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದೆ. ಕಳೆದ ವರ್ಷ ಹಮಾಸ್‌ನ ದಾಳಿಯು ಗಾಜಾದಲ್ಲಿ ಯುದ್ಧವನ್ನು ಹುಟ್ಟುಹಾಕಿತ್ತು. ಈಗ ಮತ್ತೊಂದು ಸಂಘರ್ಷದ ಸೂಚನೆ ಗೋಚರಿಸಿದೆ. ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಹಗೆತನ ಇಂದು ನಿನ್ನೆಯದ್ದಲ್ಲ.

ಸಂಘರ್ಷ ಯಾಕೆ?
ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ದಕ್ಷಿಣ ಇಸ್ರೇಲ್‌ನಲ್ಲಿ ದಾಳಿ ಮಾಡಿ ಗಾಜಾ ಯುದ್ಧಕ್ಕೆ ಕಾರಣವಾಯಿತು. ಅದಾದ ಒಂದು ದಿನದ ನಂತರ (ಅ.8) ಇಸ್ರೇಲ್-ಹಿಜ್ಬುಲ್ಲಾ ಗಡಿಯಲ್ಲಿ ಹಿಂಸಾಚಾರ ನಡೆಯಿತು. ಗಾಜಾದಲ್ಲಿ ಇಸ್ರೇಲಿ ಬಾಂಬ್ ದಾಳಿಗೆ ಒಳಗಾಗಿರುವ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸುತ್ತೇವೆ ಎಂದು ಆಗ ಹಮಾಸ್‌ನ ಮಿತ್ರ ಹಿಜ್ಬುಲ್ಲಾ ಹೇಳಿಕೊಂಡಿತ್ತು. ಇದನ್ನೂ ಓದಿ: ಇಸ್ರೇಲ್‌ ಮೇಲಿನ ದಾಳಿಯ ಮಾಸ್ಟರ್‌ಮೈಂಡ್‌ ಮೊಹಮ್ಮದ್‌ ಡೀಫ್‌ ಹತ್ಯೆ

ಹಿಜ್ಬುಲ್ಲಾವನ್ನು ಇರಾನ್ ಬೆಂಬಲಿತ ಅತ್ಯಂತ ಶಕ್ತಿಶಾಲಿ ಸದಸ್ಯ ಎಂದು ಪರಿಗಣಿಸಲಾಗಿದೆ. ಇದನ್ನು ಆಕ್ಸಿಸ್ ಆಫ್ ರೆಸಿಸ್ಟೆನ್ಸ್ ಎಂದು ಕರೆಯಲಾಗುತ್ತದೆ. ಗಾಜಾದಲ್ಲಿ ಕದನ ವಿರಾಮ ಜಾರಿಗೆ ಬರದ ಹೊರತು ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಹಿಜ್ಬುಲ್ಲಾ ತಿಳಿಸಿತ್ತು. ಅಷ್ಟೇ ಅಲ್ಲ, ಇಸ್ರೇಲ್ ಮತ್ತು ಹಿಜ್ಬುಲ್ಲಾ ಹಲವಾರು ಯುದ್ಧಗಳಿಗೆ ಸಾಕ್ಷಿಯಾಗಿವೆ. 2006ರಲ್ಲಿ ಕೊನೆ ಸಂಘರ್ಷ ಎದುರಿಸಿದ್ದವು.

Israel Hezbollah conflict 1

ಹಿಜ್ಬುಲ್ಲಾ ಹುಟ್ಟಿದ್ದು ಹೇಗೆ?
ತನ್ನ ಗಡಿಗೆ ಹಿಜ್ಬುಲ್ಲಾ ಯಾವಾಗಲೂ ದೊಡ್ಡ ಬೆದರಿಕೆ ಎಂದೇ ಇಸ್ರೇಲ್ ಪರಿಗಣಿಸಿದೆ. ಲೆಬನಾನ್ ಆಕ್ರಮಿಸಿದ ಇಸ್ರೇಲಿ ಪಡೆಗಳ ವಿರುದ್ಧ ಹೋರಾಡಲು 1982 ರಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಗಳು ಇದನ್ನು ಸ್ಥಾಪಿಸಿದರು. 2000 ರಲ್ಲಿ ಇಸ್ರೇಲ್ ದಕ್ಷಿಣ ಲೆಬನಾನ್‌ನಿಂದ ಹಿಂದೆ ಸರಿಯುವಂತೆ ಮಾಡಲು ಗೆರಿಲ್ಲಾ ಯುದ್ಧವನ್ನು ನಡೆಸಿದ್ದರು. ಪ್ಯಾಲೆಸ್ತೀನಿಯನ್ ಭೂಮಿಯಲ್ಲಿ ಸ್ಥಾಪಿಸಿದ ನ್ಯಾಯಸಮ್ಮತವಲ್ಲದ ರಾಜ್ಯ ಇಸ್ರೇಲ್ ಎಂದು ಹಿಜ್ಬುಲ್ಲಾ ಪರಿಗಣಿಸಿದೆ. ಪ್ಯಾಲೆಸ್ತೀನ್ ಭೂಮಿಯಿಂದ ಇಸ್ರೇಲ್ ಹೊರಹೋಗಬೇಕು ಎಂದು ಈ ಗುಂಪು ಕೂಡ ಬಯಸುತ್ತದೆ.

ಕಿತ್ತಾಟದ ಪರಿಣಾಮ ಏನು?
ಇಸ್ರೇಲ್-ಹಿಜ್ಬುಲ್ಲಾ ಕಿತ್ತಾಟದಿಂದ ಗಡಿಯ ಎರಡೂ ಬದಿಗಳಲ್ಲಿ ನೂರಾರು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಗಳು ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಚಟುವಟಿಕೆ ಇರುವ ಪ್ರದೇಶಗಳನ್ನು ಹೊಡೆದಿವೆ. ಸಿರಿಯನ್ ಗಡಿಯ ಸಮೀಪವಿರುವ ಬೆಕಾ ಕಣಿವೆ ಮೇಲೂ ದಾಳಿ ನಡೆದಿದೆ.

ದಕ್ಷಿಣ ಬೈರೂತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತ ಮಿಲಿಟರಿ ಕಮಾಂಡರ್ ಫೌದ್ ಶೂಕೂರ್ ಹತನಾಗಿದ್ದಾನೆಂದು ಇಸ್ರೇಲ್ ದೃಢಪಡಿಸಿದೆ. ಇಸ್ರೇಲಿ ದಾಳಿಗಳು ಲೆಬನಾನ್‌ನಲ್ಲಿ ಸುಮಾರು 300ಕ್ಕೂ ಹೆಚ್ಚು ಹಿಜ್ಬುಲ್ಲಾ ಹೋರಾಟಗಾರರು ಹಾಗೂ ವೈದ್ಯಾಧಿಕಾರಿಗಳು, ಮಕ್ಕಳು, ಪತ್ರಕರ್ತರು ಸೇರಿದಂತೆ 100 ಕ್ಕೂ ಹೆಚ್ಚು ನಾಗರಿಕರನ್ನು ಕೊಂದಿವೆ.

Israel Hezbollah Conflict 2

ಕಳೆದ ಶನಿವಾರದಂದು ಹಿಜ್ಬುಲ್ಲಾ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನ 17 ಸೈನಿಕರು ಸೇರಿ 23 ಮಂದಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿತ್ತು. ಆದರೆ ಈ ದಾಳಿ ಹೊಣೆ ಹೊತ್ತುಕೊಳ್ಳಲು ಹಿಜ್ಬುಲ್ಲಾ ನಿರಾಕರಿಸಿದೆ.

2006ರಲ್ಲಿ ಇಸ್ರೇಲ್ ನಡೆಸಿತ್ತು ದಾಳಿ?
ಇವರಿಬ್ಬರ ನಡುವಿನ ಈ ಹಿಂದೆ ನಡೆದ ಯುದ್ಧಗಳಿಂದ ಭಾರೀ ಹಾನಿಯುಂಟಾಗಿದೆ. 2006ರಲ್ಲಿ ಇಸ್ರೇಲಿ ದಾಳಿಗಳು ಬೈರುತ್‌ನ ಹಿಜ್ಬುಲ್ಲಾ ನಿಯಂತ್ರಿತ ದಕ್ಷಿಣದ ಉಪನಗರಗಳ ದೊಡ್ಡ ಪ್ರದೇಶಗಳನ್ನು ನೆಲಸಮಗೊಳಿಸಿದ್ದವು. ಬೈರುತ್ ವಿಮಾನ ನಿಲ್ದಾಣವನ್ನು ಹೊಡೆದುರುಳಿಸಲಾಗಿತ್ತು. ರಸ್ತೆಗಳು, ಸೇತುವೆಗಳು ಮತ್ತು ಇತರೆ ಮೂಲಸೌಕರ್ಯಗಳಿಗೆ ಹಾನಿಯಾಗಿತ್ತು. ಲೆಬನಾನ್‌ನಲ್ಲಿ ಸುಮಾರು 10 ಲಕ್ಷ ಜನರು ಮನೆಗಳನ್ನು ತೊರೆದಿದ್ದರು. ಇಸ್ರೇಲಿ ಪಡೆಗಳು ಈ ಹಿಂದೆ ಹಲವಾರು ಬಾರಿ ಲೆಬನಾನ್ ಮೇಲೆ ದಾಳಿ ಮಾಡಿದೆ. ಲೆಬನಾನ್ ಮೂಲದ ಪ್ಯಾಲೆಸ್ತೀನಿಯನ್ ಗೆರಿಲ್ಲಾಗಳನ್ನು ಹತ್ತಿಕ್ಕುವ ಗುರಿ ಹೊಂದಿದೆ. 1982ರಲ್ಲಿ ಬೈರುತ್ ವರೆಗೆ ದಾಳಿ ನಡೆಸಿತ್ತು. ಇದನ್ನೂ ಓದಿ: ಬರಿದಾಗ್ತಿದೆ ಆಮ್ಲಜನಕ.. ಜೀವಸಂಕುಲಕ್ಕೆ ಕಂಟಕ – ಭೂಮಿಯಲ್ಲಿ ಏನಾಗ್ತಿದೆ?

ಹಿಜ್ಬುಲ್ಲಾ ಕೂಡ ಇಸ್ರೇಲ್‌ಗೆ ಸೆಡ್ಡು ಹೊಡೆಯಲು ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಕಳೆದ ಅಕ್ಟೋಬರ್‌ನಿಂದ ಶಸ್ತ್ರಾಸ್ತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿದೆ. ಇಸ್ರೇಲಿ ಡ್ರೋನ್‌ಗಳನ್ನು ಹಿಜ್ಬುಲ್ಲಾ ಹೊಡೆದುರುಳಿಸಿದೆ. ಸ್ಫೋಟಕ ಡ್ರೋನ್‌ಗಳನ್ನು ಉಡಾಯಿಸಿ ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಹೆಚ್ಚು ಅತ್ಯಾಧುನಿಕ ಮಾರ್ಗದರ್ಶಿ ಕ್ಷಿಪಣಿಗಳನ್ನು ಹಾರಿಸಿದೆ.

ಸಂಘರ್ಷಕ್ಕೆ ಕೊನೆ ಇಲ್ಲವೇ?
ಗಾಜಾದಲ್ಲಿ ಏನಾಗುತ್ತದೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ. ಗಾಜಾದಲ್ಲಿ ಕದನ ವಿರಾಮದ ಪ್ರಯತ್ನ ಹಾಗೂ ಇಸ್ರೇಲಿ ಒತ್ತೆಯಾಳುಗಳ ವಾಪಸಾತಿಯು ವಿಫಲವಾಗಿದೆ. ಕದನ ವಿರಾಮವು ದಕ್ಷಿಣ ಲೆಬನಾನ್‌ನಲ್ಲಿ ತಲೆದೋರಿರುವ ಉದ್ವಿಗ್ನತೆಯನ್ನು ತ್ವರಿತವಾಗಿ ತಗ್ಗಿಸಲು ಸಹಾಯ ಮಾಡುತ್ತದೆ. ಹಿಜ್ಬುಲ್ಲಾವನ್ನು ಭಯೋತ್ಪಾದಕ ಗುಂಪು ಎಂದು ಯುನೈಟೆಡ್ ಸ್ಟೇಟ್ಸ್ ಪರಿಗಣಿಸಿದೆ. ಇಸ್ರೇಲ್-ಹಿಜ್ಬುಲ್ಲಾ ಸಂಘರ್ಷ ಕೊನೆಗಾಣಿಸಲು ರಾಜತಾಂತ್ರಿಕ ಪ್ರಯತ್ನ ಮಾಡುತ್ತಿದೆ. ಆದರೆ ಇಸ್ರೇಲ್, ಗಾಜಾದಲ್ಲಿ ಆಕ್ರಮಣ ನಿಲ್ಲಿಸುವವರೆಗೆ ಯಾವುದೇ ಮಾತುಕತೆಗೆ ಸಿದ್ಧವಿಲ್ಲ ಎಂದು ಹಿಜ್ಬುಲ್ಲಾ ಸ್ಪಷ್ಟಪಡಿಸಿದೆ.

ಭಾರತೀಯರಿಗೆ ಎಚ್ಚರಿಕೆ!
ಇಸ್ರೇಲ್-ಹಿಜ್ಬುಲ್‌ ನಡುವೆ ಉದ್ವಿಗ್ನತೆ ಪರಿಸ್ಥಿತಿ ಉಂಟಾಗಿರುವ ಕಾರಣ ಲೆಬನಾನ್‌ ತೊರೆಯುವಂತೆ ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ ನೀಡಿದೆ. ಮುಂದಿನ ಸೂಚನೆ ನೀಡುವವರೆಗೆ ಭಾರತೀಯರು ಲೆಬನಾನ್‌ಗೆ ಹೋಗಬಾರದು ಎಂದು ತಿಳಿಸಿದೆ.

TAGGED:HezbollahIsraelIsrael-Hezbollah conflictಇಸ್ರೇಲ್ಹಿಜ್ಬುಲ್ಲಾ
Share This Article
Facebook Whatsapp Whatsapp Telegram

Cinema Updates

honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
2 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
2 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
3 hours ago
Dhanshika vishal
ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್
4 hours ago

You Might Also Like

Rahul Gandhi
Latest

ರಾಹುಲ್ ಜೆಟ್‌ ಪ್ರಶ್ನೆಗೆ ಬಿಜೆಪಿ ಪಾಕ್ ಪೋಸ್ಟರ್ – ಬಿರಿಯಾನಿ ತಿಂದವರು ಯಾರು? ಅಂತ ಕಾಂಗ್ರೆಸ್ ಕೌಂಟರ್

Public TV
By Public TV
23 minutes ago
Mangaluru Professor Arrest
Latest

ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

Public TV
By Public TV
36 minutes ago
samur mutt sri guru swamiji demise
Chamarajanagar

ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

Public TV
By Public TV
40 minutes ago
Digvesh Rathi
Cricket

ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

Public TV
By Public TV
54 minutes ago
uttara kannada rainfall
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

Public TV
By Public TV
1 hour ago
BJP visit bengaluru Rain 4
Bengaluru City

ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?