Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

Districts

104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

Public TV
Last updated: August 4, 2024 7:44 am
Public TV
Share
2 Min Read
Kodagu Landslide 1
SHARE

ಮಡಿಕೇರಿ: ದೇವರನಾಡು ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಜಲಸ್ಫೋಟ-ಗುಡ್ಡ ಕುಸಿತದ (Wayanad Landslides) ನಂತರ ಕೊಡಗು (Kodagu) ಜಿಲ್ಲೆಯಲ್ಲೂ ಆತಂಕದ ಕರಿಛಾಯೆ ಆವರಿಸಿದೆ. 2018ರಲ್ಲಿ ಸಂಭವಿಸಿದ ದುರಂತಗಳು ಕಣ್ಣ ಮುಂದೆ ಬರುತ್ತಿವೆ. ‘ಗುಡ್ಡದ ಭೂತ’ದ ಭಯವೂ ಮೂಡಿದೆ. ಮುಂಗಾರು ಅಬ್ಬರಿಸಿ ಬೊಬ್ಬಿರಿಯುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಬೆಟ್ಟ-ಗುಡ್ಡ, ನದಿ ಅಂಚಿನಲ್ಲಿ ಸೇರಿದಂತೆ ಅಪಾಯದ ಸ್ಥಳದಲ್ಲಿ ನೆಲೆನಿಂತಿರುವವರ ಸ್ಥಳಾಂತರ ಒಂದೇ ಪರಿಹಾರ ಎಂಬ ಚರ್ಚೆಯೂ ಎದ್ದಿದೆ.

ಕಳೆದ ಜು.31 ರಂದು ಕಂದಾಯ ಸಚಿವ ಕೃಷ್ಣಬೈರೇಗೌಡ (krishna byre gowda) ಅವರು ನೀಡಿರುವ ನಿರ್ದೇಶನವನ್ನು ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಂಡಿದೆ. ವಿಜ್ಞಾನಿಗಳ ವರದಿ, ಈ ಹಿಂದೆ ಅಪಾಯ ಸಂಭವಿಸಿದ ಪ್ರದೇಶಗಳ ಆಧಾರದಲ್ಲಿ 104 ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ‘ಮ್ಯಾಪಿಂಗ್’ ಮಾಡಲಾಗಿದ್ದು, ಅಪಾಯದ ಸ್ಥಳದಲ್ಲಿರುವ 2,995 ಕುಟುಂಬಗಳು ಸ್ಥಳಾಂತರಕ್ಕೆಂದು ಗುರುತು ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಹೆಮ್ಮೆ – ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ ಹೊಸ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ

Kodagu Landslide 2

ಈಗಾಗಲೇ ಸುಮಾರು 313 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಸದ್ಯ 10 ಪರಿಹಾರ ಕೇಂದ್ರಗಳನ್ನು ಜಿಲ್ಲೆಯಲ್ಲಿ ತೆರೆಯಲಾಗಿದೆ. ಅಪಾಯದಲ್ಲಿರುವ ಕೆಲವರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನೂ ಹಲವರು ತಮ್ಮ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಇದನ್ನೂ ಓದಿ: Karnataka Rain Alert: ಮಳೆ ಕಡಿಮೆಯಾದ್ರೂ ನಿಲ್ಲದ ಅವಾಂತರ; ಕರಾವಳಿಯಲ್ಲಿ ಅಪಾಯದ ಮಟ್ಟ ಮೀರಿದ ನದಿಗಳು

ʻಆಗಸ್ಟ್ ಆಂತಕʼ
ಜಿಲ್ಲೆಯಲ್ಲಿ ವಾಡಿಕೆಗಿಂತ 24% ಹೆಚ್ಚಿನ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ‘ಆಗಸ್ಟ್ ಆತಂಕ’ವೂ ಹುಟ್ಟಿಕೊಂಡಿದೆ. ಆಗಸ್ಟ್ ಬಂತೆಂದರೆ ಜಿಲ್ಲೆಯ ಜನರಲ್ಲಿ ಆತಂಕ, ದುಗುಡ ಹೆಚ್ಚಾಗುತ್ತದೆ. ಬಿರುಸಿನ ಮಳೆ, ಮೈಕೊರೆಯುವ ಚಳಿಯಲ್ಲಿಯೂ ಬೆವರುವಂತಹ ಭಯ ಸೃಷ್ಟಿಯಾಗುತ್ತದೆ. 2018 ಆಗಸ್ಟ್ 16 ರಂದು ಜಿಲ್ಲೆಯಲ್ಲಿ ಹಿಂದೆಂದು ಕಾಣದಂತೆ ಸುರಿದ ಮಹಾಮಳೆ, ಸಂಭವಿಸಿದ ಪ್ರಾಕೃತಿಕ ವಿಕೋಪ ಇವೆಕ್ಕಲ್ಲ ಕಾರಣವಾಗಿವೆ. ಈ ವರ್ಷವೂ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅಪಾಯದಂಚಿನಲ್ಲಿರುವವರು ಮುಂದೇನು? ಎಂಬ ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿದ್ದಾರೆ.

Kodagu Landslide 3

ವಯನಾಡಿನಲ್ಲಿ ನಡೆದ ದುರ್ಘಟನೆಯ ನಂತರ ಗುಡ್ಡ, ನದಿಯಂಚಿನಲ್ಲಿ ವಾಸಿಸುತ್ತಿರುವವರನ್ನು ಮಳೆಗಾಲದ ಸಂದರ್ಭದಲ್ಲಿ ಸ್ಥಳಾಂತರಿಸಬೇಕೆಂಬ ಚರ್ಚೆ ಮುನ್ನಲೆಗೆ ಬಂದಿದೆ. ‘ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ’ ವಿಪತ್ತು ಸಂಭವನೀಯ ಪ್ರದೇಶಗಳ ಪಟ್ಟಿ ನೀಡಿದೆ. ಇದರೊಂದಿಗೆ ಈ ಹಿಂದೆ ಪ್ರಕೃತಿ ದುರಂತ ಸಂಭವಿಸಿದ ಪ್ರದೇಶಗಳನ್ನು ಸೇರಿಸಿ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿ ಅಂತಿಮಗೊಳಿಸಿರುವ ಜಿಲ್ಲಾಡಳಿತ ಸ್ಥಳಾಂತರ ಮಾಡಬೇಕಾದ ಕುಟುಂಬಗಳನ್ನು ಪಟ್ಟಿ ಮಾಡಿಕೊಂಡಿದೆ.

2,995 ಕುಟುಂಬಗಳ ಗುರುತು
104 ಸಂಭವನೀಯ ವಿಪತ್ತು ಪ್ರದೇಶಗಳ 2,995 ಕುಟುಂಬಗಳನ್ನು ಗುರುತಿಸಲಾಗಿದೆ. ಇವರೆಲ್ಲ ಸ್ಥಳಾಂತರ ಪಟ್ಟಿಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಅಪಾಯದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ನೋಟಿಸ್ ನೀಡಿ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಕೆಲವರು ಸಂಬಂಧಿಕರ ಮನೆಗಳಲ್ಲಿ ನೆಲೆನಿಂತಿದ್ದಾರೆ. ಹಲವರು ಅಪಾಯದ ನಡುವೆಯೇ ಜೀವನ ಮುಂದುವರಿಸಿದ್ದಾರೆ ಸ್ಥಳಾಂತರವಾಗಿ ಎಂದರೆ ಎಲ್ಲಿಗೆ ಹೋಗುವುದು? ಎಂಬ ಪ್ರಶ್ನೆಯನ್ನು ನಿವಾಸಿಗಳು ಮಾಡುತ್ತಿದ್ದಾರೆ.

ಹೆಚ್ಚುವರಿ 95 ಕಾಳಜಿ ಕೇಂದ್ರ:
ಸಂಭವನೀಯ ವಿಪತ್ತು ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯುವ ಸಂಬಂಧವೂ ಸ್ಥಳವನ್ನು ಜಿಲ್ಲಾಡಳಿತ ಗುರುತು ಮಾಡಿಟ್ಟುಕೊಂಡಿದೆ. ಸದ್ಯ 10 ಕಾಳಜಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 95 ಕಡೆಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯಾಗಿದೆ. ಆದರೆ, ಜಾನುವಾರುಗಳಿಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂಬ ದೂರಿದೆ. ಈ ಬಗ್ಗೆಯೂ ಜಿಲ್ಲಾಡಳಿತ ಕ್ರಮವಹಿಸಬೇಕಾಗಿದೆ. ಒಟ್ಟಾರೆಯಾಗಿ ಪ್ರತಿ ಮಳೆಗಾಲದಲ್ಲಿಯೂ ಗ್ರಾಮೀಣ ಪ್ರದೇಶಗಳ ಜನತೆ ಭೂಕುಸಿತ, ಪ್ರವಾಹದ ಭಯದಲ್ಲಿ ದಿನದೂಡಬೇಕಾದ ಪರಿಸ್ಥಿತಿ ಬಂದಿದ್ದು, ಪ್ರಕೃತಿ ಮುನಿಯದಿರಲಿ ಎಂಬ ಪ್ರಾರ್ಥನೆ ಮೊಳಗುತ್ತಿದೆ.

TAGGED:Karnataka RainsKodagu FloodKodagu LandslideWayanad Landslidesಕರ್ನಾಟಕಕೇರಳಕೊಡಗು ಭೂಕುಸಿತಭೂಕುಸಿತಮಡಿಕೇರಿಮಳೆವಯನಾಡು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
10 minutes ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
17 minutes ago
Strait Of Malacca US
Latest

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ?

Public TV
By Public TV
45 minutes ago
Vachananand Swamiji Harihara Panchamasali Peetha
Davanagere

ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ

Public TV
By Public TV
45 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
9 hours ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?