ರಾಜ್ಯದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದೆ.
ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್ನಿಂದ ಯೆಲ್ಲೋ ಅಲರ್ಟ್ಗೆ ಮರಳಿದೆ. ಮುಂದಿನ 2 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 27-23
ಶಿವಮೊಗ್ಗ: 27-21
ಬೆಳಗಾವಿ: 24-20
ಮೈಸೂರು: 28-21
ಮಂಡ್ಯ: 30-21
ಮಡಿಕೇರಿ: 22-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-21
ಕೋಲಾರ: 31-21
ತುಮಕೂರು: 29-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 24-18
ದಾವಣಗೆರೆ: 28-21
ಹುಬ್ಬಳ್ಳಿ: 26-21
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 33-23
ಗದಗ: 28-21
ಕೊಪ್ಪಳ: 30-22
ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-22ಂ