Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್

Bengaluru City

ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್

Public TV
Last updated: August 18, 2024 4:57 pm
Public TV
Share
4 Min Read
PARAMESHWAR 1
SHARE

ಬೆಂಗಳೂರು: ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಆದರೆ ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G.Parameshwar) ತಿಳಿಸಿದ್ದಾರೆ.

ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ – ಸಿದ್ದರಾಮಯ್ಯ ಎದುರಿಸಲಿರೋ ಸಂಕಷ್ಟಗಳೇನು?

Siddaramaiah 8

ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಆದರೆ ಇದನ್ನೆಲ್ಲ ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ (BJP) ಹುನ್ನಾರಕ್ಕೆ ಬಲಿಯಾಗೋದು ಬೇಡ, ಕಾನೂನು ಸಮರ ಮುಂದುವರಿಸಿಕೊಂಡು ಆಡಳಿತ ನಡೆಸುವ ತಿರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿ ಹೇಗಾದರೂ ಮಾಡಿ ಈ ಸರ್ಕಾರ ಬೀಳಿಸುವ ಸ್ಕೀಂ ಹಾಕಿಕೊಂಡಿದೆ. ಸಿದ್ದರಾಮಯ್ಯ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

ಕಾನೂನು ಸಮರಕ್ಕೆ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್:
ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕಿಳಿದಿದ್ದಾರೆ. ನಾಳೆ (ಆ.19) ಹೈಕೋರ್ಟ್‌ನಲ್ಲಿ ಪ್ರಾಸಿಕ್ಯೂಷನ್ ವಿರುದ್ಧ ದಾವೆ ಹೂಡಲಾಗುತ್ತಿದೆ. ಸಿಎಂ ಪರ ಕಾನೂನು ಹೋರಾಟಕ್ಕೆ ದೆಹಲಿಯಿಂದ ಹಿರಿಯ ವಕೀಲರೂ, ಕಾಂಗ್ರೆಸ್ ನಾಯಕರೂ ಆದ ಅಭಿಷೇಕ್ ಮುನು ಸಿಂಘ್ವಿ ಹಾಗೂ ಕಪಿಲ್‌ ಸಿಬಲ್ ರಾಜ್ಯಕ್ಕೆ ಬರ್ತಿದ್ದಾರೆ. ಈ ಸಂಬಂಧ ಮಾಹಿತಿ ಕೊಟ್ಟ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕಾನೂನು ಹೋರಾಟಕ್ಕೆ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ನಾಳೆ ಬರ್ತಾರೆ. ಅವರು ನಮ್ಮ ಪಕ್ಷದ ಹಿರಿಯರು, ಕಾನೂನು ಹೋರಾಟಗಾರರು. ಇನ್ನೂ ಅವಶ್ಯಕತೆ ಬಿದ್ರೆ, ಸೀನಿಯರ್ ಕೌನ್ಸಿಲ್‌ರನ್ನೂ ಕರೆತರ್ತೀವಿ. ಅವರ ಮೂಲಕ ವಾದ ಮಾಡಿಸುತ್ತೇವೆ ಅಂದ್ರು.

ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು:
ಇನ್ನು ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮಾತಾಡಿ, ನಾವು ಕಾನೂನು ಹೋರಾಟ ಹಾಗೂ ರಾಜಕೀಯ ಹೋರಾಟ ಮಾಡಲು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬಿಜೆಪಿಯವರೂ ಹೋರಾಟ ಮಾಡಲಿ, ಅದು ಅವರ ಹಕ್ಕು ಹಾಗೆಯೇ ನಾವೂ ಹೋರಾಟ ಮಾಡ್ತೀವಿ, ಇದು ನಮ್ಮ ಹಕ್ಕು. ಜಿಲ್ಲೆ, ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ನಾಳೆ (ಆ.19) ರಾಜ್ಯಾದ್ಯಂತ ಪಕ್ಷದಿಂದ ಶಾಂತಿಯುತ ಪ್ರತಿಭಟನೆಗೆ ಅಧ್ಯಕ್ಷರು ಕರೆ ಕೊಟ್ಟಿದ್ದಾರೆ.

ಹೆಚ್ಡಿಕೆ/ಜೊಲ್ಲೆ/ನಿರಾಣಿ/ರೆಡ್ಡಿ ಪ್ರಕರಣಗಳಲ್ಲಿ ಕಾನೂನು ಕ್ರಮ:
ರಾಜ್ಯಪಾಲರ ತೀರ್ಮಾನವೂ ರಾಜಕೀಯದ್ದು, ಸಚಿವ ಸಂಪುಟ ತೀರ್ಮಾನವನ್ನೇ ಅವರು ತಿರಸ್ಕರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಹೆಚ್‌ಡಿಕೆ, ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಬಾಕಿ ಉಳಿಸಿಕೊಂಡಿರೋದು ಕಾಂಗ್ರೆಸ್‌ಗೆ ಕೆರಳಿಸಿದೆ. ಇದೀಗ ಈ ನಾಲ್ವರ ವಿರುದ್ಧವೂ ಲೋಕಾಯುಕ್ತದಲ್ಲಿ ಕಾನೂನು ಪ್ರಕ್ರಿಯೆ ಚುರುಕುಗೊಳಿಸುವ ಸುಳಿವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೊಟ್ಟಿದ್ದಾರೆ.

ಮುರುಗೇಶ್ ನಿರಾಣಿ, ಜೊಲ್ಲೆ, ರೆಡ್ಡಿ, ಹೆಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಡದ ಬಗ್ಗೆ ನಾವು ಇಲ್ಲಿಯವರೆಗೆ ತಲೆಕೆಡಿಸಿಕೊಂಡಿರಲಿಲ್ಲ. ನಾವು ದ್ವೇಷದ ರಾಜಕಾರಣ ಮಾಡೋದು ಬೇಡ ಅಂತ ಸುಮ್ಮನಿದ್ದೆವು. ಈಗ ನಾವು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತೇವೆ. ರಾಜ್ಯಪಾಲರು ಈ ನಾಲ್ವರಿಗೆ ಒಂದು ನ್ಯಾಯ ಸಿದ್ದರಾಮಯ್ಯನವರಿಗೆ ಒಂದು ನ್ಯಾಯ ಕೊಡೋ ಮೂಲಕ ಪಕ್ಷಪಾತ ಮಾಡಿದ್ದಾರೆ. ಕಾನೂನು‌ ಅವಕಾಶ ಬಳಸಿಕೊಂಡು ಮುಂದುವರೆಯುತ್ತೇವೆ ಅಂದ್ರು.

ಇನ್ನು, ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ತಡೆಯಾಜ್ಞೆ ತೆರವು ಮಾಡುವ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಕೋರ್ಟ್ ಒಂದು ದಿನಾಂಕ ಕೊಟ್ಟಿದೆ. ಆ ದಿನಾಂಕದಂದು ನಮ್ಮ ಎಜಿ ಹಾಗೂ ಹಿರಿಯ ವಕೀಲರು ಕೋರ್ಟ್ ಗೆ ಹೋಗ್ತಾರೆ. ಬಿಎಸ್ವೈ ವಿರುದ್ಧ ಇರುವ ತಡೆಯಾಜ್ಞೆ ತೆರವು ಮಾಡಿಸುವ ಪ್ರಯತ್ನ ಮಾಡ್ತಾರೆ ಅಂದ್ರು‌.

ಇದನ್ನೂ ಓದಿ: ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎ.ಮಂಜು

ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್ 17ಎ ಅಡಿ ಸಿಎಂಗೆ ಯಾರು, ಸಚಿವರಿಗೆ ಯಾರು ಅನುಮತಿ ಕೇಳಬೇಕು ಅಂತಾ ಕೇಂದ್ರದ ಮಾರ್ಗಸೂಚಿ ಇದೆ. ಸಿಎಂಗೆ ಡಿಜಿಪಿ ತನಿಖೆಗೆ ಅನುಮತಿ ಕೇಳಬೇಕು. ಇನ್ನೊಂದು ಕಡೆ ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಹಲವು ತೀರ್ಪುಗಳನ್ನು ಪ್ರಸ್ತಾಪ ಮಾಡಿ ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳಿಸಿದ್ದೇವೆ. ರಾಜ್ಯಪಾಲರು ಇದ್ಯಾವುದನ್ನೂ ಗಣನೆಗೆ ತೆಗೆದುಕೊಂಡಿಲ್ಲ. ಆಡೋ ಮಕ್ಕಳಿಗೂ ಗೊತ್ತಾಗಿದೆ, ರಾಜ್ಯಪಾಲರು ಉದ್ದೇಶ ಪೂರ್ವಕವಾಗಿ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ಅಸಾಂವಿಧಾನಿಕ ವಿಚಾರ. ನಾವು ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ ಮಾಡ್ತೇವೆ. ಆದರೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ಕೊಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಮುಡಾ ತನಿಖೆಗೆ ನ್ಯಾಯಾಲಯ ಯಾರಿಗೆ ರೆಫರ್ ಮಾಡುತ್ತೋ ಗೊತ್ತಿಲ್ಲ. ಈ ಸಂದರ್ಭದಲ್ಲಿ ಅವರಿಗೆ ಇರುವ ಆಯ್ಕೆ ಲೋಕಾಯುಕ್ತ ಮಾತ್ರ. ಲೋಕಾಯುಕ್ತದಲ್ಲೇ ಅರ್ಜಿದಾರರು ದೂರು ಕೊಟ್ಟಿರೋದ್ರಿಂದ ತನಿಖೆಯನ್ನೂ ಲೋಕಾಯುಕ್ತಕ್ಕೇ ಕೊಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

TAGGED:bengaluruCM SiddarammiahG ParameshwarMUDA Scamಡಾ.ಜಿ.ಪರಮೇಶ್ವರ್‌ಮುಡಾ ಹಗರಣಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
2 minutes ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
21 minutes ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
29 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
45 minutes ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
8 hours ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?