Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

Cricket

T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

Public TV
Last updated: August 29, 2024 10:41 pm
Public TV
Share
3 Min Read
Hardik Pandya
SHARE

– ಮೊದಲ ದಿನ ಇಬ್ಬರೂ ಮಾತನಾಡಿರಲಿಲ್ಲ!

ಮುಂಬೈ: 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಕ್ಯಾಪ್ಟನ್ಸಿ ವಿಚಾರವಾಗಿ ರೋಹಿತ್‌-ಹಾರ್ದಿಕ್‌ ಪಾಂಡ್ಯ ನಡುವಿನ ಕಿತ್ತಾಟ ಚರ್ಚೆಗೆ ಗ್ರಾಸವಾಗಿತ್ತು. ಇವರಿಬ್ಬರ ಕಿತ್ತಾಟ ಟಿ20 ವಿಶ್ವಕಪ್‌ನಲ್ಲೂ (T20 World Cup 2024) ಮುಂದುವರಿಯಲಿದೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದ್ರೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ಪಾಂಡ್ಯ-ರೋಹಿತ್‌ ಟ್ರೋಫಿ ಗೆದ್ದು ತರುವಲ್ಲಿ ಯಶಸ್ವಿಯಾದರು. ಅಷ್ಟಕ್ಕೂ ಇವರಿಬ್ಬರ ಮುನಿಸು ಕೊನೆಗೊಂಡಿದ್ದು ಹೇಗೆ? ಅನ್ನೋ ಆಸಕ್ತಿದಾಯಕ ವಿಚಾರವನ್ನ ಹಿರಿಯ ಪತ್ರಕರ್ತ ವಿಮಲ್ ಕುಮಾರ್ ರಿವೀಲ್‌ ಮಾಡಿದ್ದಾರೆ.

Hardik Pandya Rohit Sharma

ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಗುಜರಾತ್‌ ಟೈಟಾನ್ಸ್‌ನಲ್ಲಿದ್ದ ಪಾಂಡ್ಯ (Hardik Pandya) ಅವರನ್ನು ಕರೆ ತಂದು ಮುಂಬೈ ತಂಡದ ನಾಯಕತ್ವದ ಹೊಣೆ ನೀಡಲಾಯಿತು. ಆದ್ರೆ‌ 13 ವರ್ಷಗಳಿಂದ ತಂಡಕ್ಕೆ 5 ಬಾರಿ ಟ್ರೋಫಿ ತಂದುಕೊಟ್ಟ ರೋಹಿತ್‌ (Rohit Sharma) ಅವರನ್ನ ನಾಯಕ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದರು. ಪಾಂಡ್ಯ ವಿರುದ್ಧ ಮುಗಿಬಿದ್ದಿದ್ದರು, ಮೈದಾನದಲ್ಲಿ ನಾಯಿಯೊಂದು ಪ್ರವೇಶಿಸಿದಾಗ ಹಾರ್ದಿಕ್‌ ಹಾರ್ದಿಕ್‌ ಅಂತ ಕೂಗಿ ಅವಮಾನಿಸಿದ್ದರು. ಇದನ್ನೂ ಓದಿ: IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

Rohit Sharma 2

ಇಷ್ಟೆಲ್ಲಾ ಆಗಿದ್ದರೂ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಪಾಂಡ್ಯ ನಿರ್ಣಾಯಕ ಪಾತ್ರ ವಹಿಸಿದರು. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್‌ ಗೆಲ್ಲಲು ಸಹಕಾರಿಯಾದರು. ಆದರೀಗ ರೋಹಿತ್‌-ಪಾಂಡ್ಯ ಅವರ ಮುನಿಸು ಕೊನೆಗೊಂಡಿದ್ದು ಹೇಗೆ ಅನ್ನುವ ಆಸಕ್ತಿದಾಯಕ ವಿಚಾರವನ್ನು ಹಿರಿಯ ಪತ್ರಕರ್ತ ವಿಮಲ್‌ ಕುಮಾರ್‌ (Vimal Kumar) ಹಂಚಿಕೊಂಡಿದ್ದಾರೆ.

ಸಂವಾದವೊಂದರಲ್ಲಿ ಮಾತನಾಡಿದ ವಿಮಲ್‌ ಕುಮಾರ್‌, ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯದ ವೇಳೆ ನೆಟ್ಸ್‌ಗೆ ಹೋದಾಗ ಹಾರ್ದಿಕ್‌ ಮತ್ತು ರೋಹಿತ್‌ ಮಧ್ಯೆ ಏನು ನಡೆಯುತ್ತಿದೆ ಎಂಬುದನ್ನು ಗಮನಿಸಿದೆ. ಮೊದಲ ದಿನ ಅವರಿಬ್ಬರೂ ಮಾತನಾಡಿದ್ದು ಕಂಡುಬರಲಿಲ್ಲ. ಆದ್ರೆ 2ನೇ ದಿನ ಅವರಿಬ್ಬರು ಸಂಭಾಷಣೆ ನಡೆಸುತ್ತಿದ್ದ ರೀತಿ ನೋಡಿ ನನಗೆ ತುಂಬಾ ಖುಷಿ ಆಯ್ತು. ಹಾರ್ದಿಕ್‌ ಪಾಂಡ್ಯ, ರೋಹಿತ್‌ ಜೊತೆಗೆ ಮಾತನಾಡುತ್ತಿದ್ದ ರೀತಿ ನೋಡಿ ನನ್ನ ಕಣ್ಣನ್ನು ನಾನೇ ನಂಬಲು ಸಾಧ್ಯವಾಗಲಿಲ್ಲ. ಇಬ್ಬರೂ ಒಬ್ಬರಿಗೊಬ್ಬರು ಸಲಹೆ ನೀಡುತ್ತಿದ್ದರು. ಆಗ ತಂಡದ ಪ್ರದರ್ಶನದ ಬಗ್ಗೆ ಸಂಪೂರ್ಣ ವಿಶ್ವಾಸ ಮೂಡಿತು ಅಂತ ಭಾವುಕರಾಗಿದ್ದಾರೆ.

Team India 6

ಒಬ್ಬರಿಗೊಬ್ಬರು ಸಲಹೆ ನೀಡುತ್ತಾ ಇಬ್ಬರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಅಲ್ಲದೇ ಡ್ರೆಸ್ಸಿಂಗ್ ರೂಮ್‌ನ ವಾತಾವರಣವೂ ಸಹ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಒಟ್ಟಿನಲ್ಲಿ ಭಾರತ ತಂಡದ ಸಲುವಾಗಿ ಇವರಿಬ್ಬರು ಒಂದಾದರು. ಇದರ ಕ್ರೆಡಿಟ್‌ ಏನಿದ್ದರೂ ಅಂದಿನ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಸೇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನೂತನ ಮೆಂಟರ್‌ ಆಗಿ ಜಹೀರ್‌ ಖಾನ್‌ ನೇಮಕ

ಮ್ಯಾಚ್‌ಗೆ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಅವರಿಬ್ಬರ ಮುನಿಸು ಕೊನೆಗೊಂಡಿತು. ಬಳಿಕ ಸಮಾನಾಂತರವಾಗಿ ಇಬ್ಬರು ಬ್ಯಾಟ್‌ ಬೀಸಲು ಶುರು ಮಾಡಿದರು. ರೋಹಿತ್‌ ಬ್ಯಾಟಿಂಗ್‌ನಲ್ಲಿ, ಪಾಂಡ್ಯ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಗಮನ ಸೆಳೆದರು. ಆ ವಾತಾವರಣವನ್ನು ನಾನು ನೋಡಿ ಬಹಳ ಖುಷಿಪಟ್ಟೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಶಕೀಬ್‌ ಬ್ಯಾನ್‌ ಮಾಡಿ – ಬಾಂಗ್ಲಾ ಕ್ರಿಕೆಟ್ ‌ಮಂಡಳಿಗೆ ನೋಟಿಸ್‌

Hardik Pandya 2

2025ರ ಐಪಿಎಲ್‌ ಮೊದಲ ಪಂದ್ಯಕ್ಕೆ ಪಾಂಡ್ಯ ಬ್ಯಾನ್‌:
2024ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಲೀಗ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್‌ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ 1 ಪಂದ್ಯದಿಂದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಿಗೆ 12 ಲಕ್ಷ ರೂ. ದಂಡ ಅಥವಾ ಪಂದ್ಯದ ಸಂಭಾವನೆಯಲ್ಲಿ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ. ಆದ್ದರಿಂದ 2025ರ ಐಪಿಎಲ್‌ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ.

TAGGED:Hardik PandyaIPL 2025Mumbai IndiansRohit SharmaT20 World CupVimal Kumarಐಪಿಎಲ್‌ 2025ಟೀಂ ಇಂಡಿಯಾಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
2 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
3 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
4 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
4 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?