ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

Public TV
2 Min Read
Sandip Ghosh

ನವದೆಹಲಿ: ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್‌ (Kolkata High Court) ಆದೇಶವನ್ನು ಪ್ರಶ್ನಿಸಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ತನಿಖೆಯನ್ನು ವರ್ಗಾವಣೆ ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿತು. ಇದನ್ನೂ ಓದಿ: ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದಿಸುತ್ತಿದೆ ಭಾರತ – ಶಕ್ತಿ ಪರಿವರ್ತನಾ ಶೃಂಗಸಭೆಯಲ್ಲಿ ಜೋಶಿ ಶ್ಲಾಘನೆ

supreme Court 1

ಘೋಷ್ ಪರ ಹಿರಿಯ ವಕೀಲ ಮೀನಾಕ್ಷಿ ಅರೋರಾ ವಾದ ಮಂಡಿಸಿದರು. ಅರ್ಜಿದಾರರು ವಿಚಾರಣೆಗೆ ಆಕ್ಷೇಪಣೆ ಸಲ್ಲಿಸುತ್ತಿಲ್ಲ. ಆದರೆ ಹೈಕೋರ್ಟ್ ಮಾಡಿದ ಕೆಲವು ಪ್ರತಿಕೂಲ ಹೇಳಿಕೆಗಳಿಂದ ಅಸಮಾಧಾನಗೊಂಡಿದ್ದಾರೆ. ಆ.9 ರಂದು ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆಯೊಂದಿಗೆ ಆರೋಪಿತ ಅಕ್ರಮಗಳನ್ನು ಜೋಡಿಸುವ ಹೈಕೋರ್ಟ್‌ನ ಕಲ್ಪನೆ ಬಗ್ಗೆ ಆಕ್ಷೇಪವಿದೆ ಎಂದು ಅವರು ಹೇಳಿದರು.

ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಸಿಜೆಐ ಇದು ತನಿಖೆಯ ವಿಷಯವಾಗಿದೆ. ಬಯೋಮೆಡಿಕಲ್ ತ್ಯಾಜ್ಯದ ಸಮಸ್ಯೆಯು ಒಂದು ಪ್ರಚೋದಕವಾಗಿದೆ. ಆದ್ದರಿಂದ ಈ ವಿಷಯದಲ್ಲಿ ತಾರ್ಕಿಕ ತೀರ್ಮಾನಕ್ಕೆ ಬರಬೇಕು ಎನ್ನುವುದು ಹೈಕೋರ್ಟ್ ಬಯಸುತ್ತದೆ. ಇದರಲ್ಲಿ ನಾವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸಿಜೆಐ ಹೇಳಿದರು. ಇದನ್ನೂ ಓದಿ: ಮುಂಬೈನ ಟೈಮ್ಸ್ ಟವರ್‌ನಲ್ಲಿ ಅಗ್ನಿ ಅವಘಡ

Kolkata Doctor rape and murder

ಇದಕ್ಕೆ ಪ್ರತಿಕ್ರಿಯಿಸಿದ ಅರೋರಾ, ಹೈಕೋರ್ಟ್ ಈ ಬಗ್ಗೆ ಸ್ಪಷ್ಟವಾದ ತೀರ್ಮಾನಕ್ಕೆ ಬರುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದರು. ಇದಕ್ಕೆ ಪ್ರತ್ಯುತ್ತರ ನೀಡಿದ ಸಿಜೆಐ ನಾವು ತನಿಖೆಯನ್ನು ಸ್ತಬ್ಧಗೊಳಿಸಬಾರದು. ನಮ್ಮ ಮುಂದೆ ಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ನಾವು ಸಿಬಿಐಗೆ ಸೂಚಿಸುತ್ತೇವೆ ಎಂದರು.

ಹೈಕೋರ್ಟ್ ಮಾಡಿದ ಅವಲೋಕನಗಳನ್ನು ಆದೇಶದಿಂದ ತೆಗೆದುಹಾಕಬೇಕು ಎಂದು ಅರೋರಾ ಒತ್ತಾಯಿಸಿದರು. ಈ ಹಂತದಲ್ಲಿ ಅರ್ಜಿದಾರರು ಪೂರ್ವಾಗ್ರಹ ಪೀಡಿತರಾಗಿರುವುದರಿಂದ ಇವುಗಳನ್ನು ಪ್ರಾಥಮಿಕ ಅವಲೋಕನಗಳು ಎಂದು ನ್ಯಾಯಾಲಯವು ದಾಖಲಿಸಬಹುದು ಎಂದು ಅರೋರಾ ವಿನಂತಿಸಿದರು. ಆದರೆ ಅದಕ್ಕೆ ಪೀಠ ನಿರಾಕರಿಸಿತು. ಇದನ್ನೂ ಓದಿ: Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಮಾಜಿ ಪ್ರಾಂಶುಪಾಲ ಡಾ. ಘೋಷ್ ವಿರುದ್ಧ ಕೋಲ್ಕತ್ತಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೃತದೇಹಗಳ ದುರುಪಯೋಗ, ಜೈವಿಕ ತ್ಯಾಜ್ಯವನ್ನು ಮುಕ್ತ ಮಾರುಕಟ್ಟೆಯಲ್ಲಿ ಮರು ಮಾರಾಟ, ಸಾರ್ವಜನಿಕ ನಿಧಿಯ ದುರುಪಯೋಗ ಮುಂತಾದ ಗಂಭೀರ ಅಕ್ರಮಗಳನ್ನು ಮಾಡಿದ್ದರು. ಆರೋಪದ ಹಿನ್ನೆಲೆ ಹೈಕೋರ್ಟ್ ತನಿಖೆಗೆ ನೀಡಿದೆ.

Share This Article