ಶಿವಮೊಗ್ಗ: ನಾಡಿನಲ್ಲೆಡೆ ಶನಿವಾರ ಸಂಭ್ರಮದಿಂದ ಗಣಪತಿ ಹಬ್ಬ (Ganesha festival) ಆಚರಿಸಲಾಗುತ್ತಿದೆ. ಆದರೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆಯೇ ಗಲಾಟೆ ನಡೆದಿದೆ.
ಗಣಪತಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕರೆತರುವ ವೇಳೆ ಡೊಳ್ಳು ಬಾರಿಸಲು ಎರಡು ಸಮುದಾಯದವರು ಒಂದೇ ತಂಡಕ್ಕೆ ಡೊಳ್ಳು ಬಾರಿಸಲು ಆರ್ಡರ್ ಕೊಟ್ಟಿದ್ದರು. ಆದರೆ ಎರಡು ಸಮುದಾಯದವರು ಒಂದೇ ಸಮಯದಲ್ಲಿ ಗಣಪತಿ ತರುತ್ತಿದ್ದರು. ಈ ವೇಳೆ ನಮ್ಮ ಸಮುದಾಯದ ಗಣಪತಿ ಮೆರವಣಿಗೆಗೆ ಡೊಳ್ಳು ಬಾರಿಸುವವರು ಹಣ ಪಡೆದು ಬಂದಿಲ್ಲ ಎಂದು ಗಲಾಟೆ ನಡೆದಿದೆ. ಡೊಳ್ಳುನವರ ಮೇಲೆ ಕಲ್ಲು ತೂರಾಟ ನಡೆಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಉಜ್ಜಯಿನಿ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ ಹರಿಬಿಟ್ಟಿದ್ದ ಆಟೋ ಚಾಲಕ ಅರೆಸ್ಟ್
ಈ ವೇಳೆ ಮೆರವಣಿಗೆಯಲ್ಲಿದ್ದ ಗ್ರಾಮಸ್ಥರಿಗೂ ಗಾಯವಾಗಿದೆ. ಇದಕ್ಕೆ ಪ್ರತಿಯಾಗಿ ಇನ್ನೊಂದು ಗುಂಪಿನವರು ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ನಡೆಯುತ್ತಿದ್ದ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 8-10 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ವಿನೇಶ್ ಅನರ್ಹ ಕುರಿತು ಟೀಕೆ – ದೇವರೇ ನಿಮಗೆ ಶಿಕ್ಷೆ ಕೊಟ್ಟಿದ್ದಾನೆ ಎಂದ ಬ್ರಿಜ್ ಭೂಷಣ್
ಇನ್ನೂ ಘಟನೆ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಯನ್ನು ಇಂದೇ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಶಾಂತಿಯುತವಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧಿಸಿದಂತೆ 2 ಗುಂಪಿನ 22 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಲ್ಲೆ ನಡೆಸಲು ಪವಿತ್ರಾಗೆ ದರ್ಶನ್ ಪ್ರಚೋದನೆ – ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೂ ಕರಗದ ನಟಿ; ಚಾರ್ಜ್ಶೀಟ್ನಲ್ಲಿ ರಹಸ್ಯ ಸ್ಫೋಟ