Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೀಸಲಾತಿ ಬಗ್ಗೆ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ, ರಾಹುಲ್‌ಗೆ ಪಾಠ ಕಲಿಸಬೇಕಿದೆ: ಛಲವಾದಿ ನಾರಾಯಣಸ್ವಾಮಿ

Public TV
Last updated: September 11, 2024 10:09 pm
Public TV
Share
2 Min Read
Chalavadi Narayanaswamy
SHARE

ಬೆಂಗಳೂರು: ಅಮೆರಿಕಾದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು (Rahul Gandhi) ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಿಂದ ದೇಶಾದ್ಯಂತ ವಿರೋಧ ಪಕ್ಷಗಳು, ದಲಿತ ಸಮುದಾಯಗಳು ಕುಪಿತಗೊಂಡಿವೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಈಗ ರಾಹುಲ್ ಅವರ ಹೇಳಿಕೆಗೆ ಉತ್ತರ ಕೊಡಲಾಗದೇ ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಥಮ ಪ್ರಧಾನಿ ನೆಹರೂ (Jawaharlal Neharu) ಅವರು ಆ ಕಾಲದಲ್ಲೇ ಇದನ್ನು ಹೇಳಿದ್ದರು. ಮೀಸಲಾತಿ ಸರಿಯಾದ ಕ್ರಮ ಅಲ್ಲ. ಇದೊಂದು ಅನಿಷ್ಟ. ಇದರಿಂದ ದೇಶ ಉದ್ಧಾರವಾಗದು. ಇದರ ಬಗ್ಗೆ ನನಗೆ ಒಲವಿಲ್ಲ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರ ಬರೆದಿದ್ದರು. ಈ ಪತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಕೂಡ ಸದನದಲ್ಲಿ ಪ್ರಸ್ತಾಪ ಮಾಡಿ ಪತ್ರ ಪ್ರದರ್ಶನ ಮಾಡಿದ್ದರು ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಶಿಮ್ಲಾದಲ್ಲಿ ಅಕ್ರಮ ಮಸೀದಿ ನಿರ್ಮಾಣ ವಿಚಾರ – ಸ್ಥಳೀಯರು, ಪೊಲೀಸರ ನಡುವೆ ಗಲಾಟೆ

ಮೀಸಲಾತಿ ವಿಚಾರದಲ್ಲಿ ನೆಹರೂ ಅವರ ಮನೋಭಾವವನ್ನೇ ರಾಹುಲ್ ಅವರೂ ಪ್ರಸ್ತಾಪ ಮಾಡಿದ್ದಾರೆ. ಕಾಂಗ್ರೆಸ್ ದಲಿತ ವಿರೋಧಿ. ಕಾಂಗ್ರೆಸ್ಸಿಗರು ಹೇಳೋದೊಂದು ಮಾಡೋದೊಂದು. ಮೀಸಲಾತಿಗೆ ವಿರುದ್ಧವಾಗಿಯೇ ಇದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇವರು ಓಲೈಕೆ ಮಾಡಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ಈ ಕಾಂಗ್ರೆಸ್ಸಿಗೂ ಬುದ್ಧಿ ಕಲಿಸಬೇಕಾಗಿದೆ. ರಾಹುಲ್ ಗಾಂಧಿಯವರು ಮಾನಸಿಕ ಅಸ್ವಸ್ಥರಂತೆ ಭಾರತ ದೇಶದ ಮಾನಹಾನಿ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆಗಿಂದಾಗ್ಗೆ ಭಾರತ ದೇಶದ ಮಾನಹಾನಿ ಮಾಡುವುದನ್ನು ನಾವು ಗಮನಿಸುತ್ತಿದ್ದೇವೆ. ಈ ದೇಶದ ಮಣ್ಣಿನಿಂದ ಹೊರಗಡೆ ಹೋದ ತಕ್ಷಣ ಭಾರತವನ್ನು ಅಪಮಾನ ಮಾಡುತ್ತಲೇ ಇರುತ್ತಾರೆ. ಇವತ್ತೂ ಅದನ್ನು ಮುಂದುವರೆಸಿದ್ದಾರೆ. ನಾವು ಈ ದೇಶವನ್ನು ತಾಯಿಗೆ ಹೋಲಿಸಿ ಭಾರತ್ ಮಾತಾ ಕೀ ಜೈ ಎನ್ನುತ್ತೇವೆ. ಭಾರತಾಂಬೆಯ ಕುರಿತು ರಾಹುಲ್ ಅವರ ಹೇಳಿಕೆ ಪೀಡಕ ಎಂದರೆ, ಸ್ಯಾಡಿಸ್ಟ್ ಮನೋಭಾವದಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಟಾಟಾ ನೆಕ್ಸಾನ್ EV ಬೆಲೆ 3 ಲಕ್ಷ ರೂಪಾಯಿ ಕಡಿತ

ತಾಯಿಯನ್ನು ವಿವಸ್ತ್ರಗೊಳಿಸುವಂತಹ ಮಾತು ಅವರದು. ಈ ಮಾತು ಹೇಳಲು ನೋವಾಗುತ್ತದೆ. ಇವರು ವಿರೋಧ ಪಕ್ಷದ ನಾಯಕರಾಗಲು ಯೋಗ್ಯರೇ? ಇವರಿಗೆ ಎಂಥ ಪಾಠ ಕಲಿಸಬೇಕು. 2014, 2029ರಲ್ಲಿ ಅಧಿಕೃತ ವಿಪಕ್ಷ ಸ್ಥಾನ ಇರದ ಕಾರಣ ರಾಹುಲ್ ಅವರು ವಿಪಕ್ಷ ನಾಯಕರಾಗಲಿಲ್ಲ. ಈ ಬಾರಿ ಅಧಿಕೃತ ವಿಪಕ್ಷ ಸ್ಥಾನ ಸಿಕ್ಕಿದಾಗ ಬೇರೆಲ್ಲರನ್ನೂ ಬದಿಗೆ ಸರಿಸಿ ವಿಪಕ್ಷ ನಾಯಕರಾಗಿದ್ದಾರೆ. ಆದರೆ, ಅವರು ಈ ಸ್ಥಾನಕ್ಕೆ ಅರ್ಹರಲ್ಲ ಎಂದು ತಿಳಿಸಿದರು.

ವಿದೇಶಕ್ಕೆ ಹೋಗಿ ದೇಶದ ಅಪಮಾನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಎಷ್ಟು ಸರಿ. ವಿಪಕ್ಷ ನಾಯಕನಾಗಿ ದೇಶದೊಳಗಡೆ ತಪ್ಪುಗಳನ್ನು ಹೇಳಬೇಕಿತ್ತು. ನೀವು ಹೊರದೇಶದಲ್ಲಿ ಭಾರತದ ಅವಮಾನ ಮಾಡುವುದು ಸರಿಯೇ? ಮೀಸಲಾತಿ ಯಾವ ಕಾರಣಕ್ಕೆ ಬಂದಿದೆ? ಬಡತನ ಎಂದರೇನು? ಎಂಬುದು ನಿಮಗೆ ಗೊತ್ತಿದೆಯೇ? ನೀವೆಲ್ಲರೂ ಶ್ರೀಮಂತಿಕೆಯಿಂದ ಮೆರೆಯುತ್ತಿದ್ದೀರಿ. ಬಡವರ ಬಗ್ಗೆ ಚಿಂತನೆ ಬಿಟ್ಟು, ಅವರ ಶ್ರೇಯೋಭಿವೃದ್ಧಿ ಬಯಸುವುದು ಬಿಟ್ಟು ಮೀಸಲಾತಿ ತೆಗೆಯುವುದಾದರೆ ನಿಮ್ಮ ಕಾಂಗ್ರೆಸ್ ಪಕ್ಷವು ಈ ದೇಶದಿಂದಲೇ ಹೋಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ನಾವು ಜನರನ್ನು ಸಜ್ಜುಗೊಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:bengaluruchalavadi narayanaswamyRahul Gandhiಛಲವಾದಿ ನಾರಾಯಣಸ್ವಾಮಿಬೆಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

JDS On Guarantee Schemes
Bengaluru City

ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
By Public TV
50 seconds ago
Sanjay Dutt
Bollywood

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ

Public TV
By Public TV
13 minutes ago
Gaurav Gogoi
Latest

ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್

Public TV
By Public TV
15 minutes ago
A 25 year old youth died after suffering a heart attack while playing badminton at in Hyderabad
Latest

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು 25ರ ಯುವಕ ಸಾವು

Public TV
By Public TV
42 minutes ago
Operation Mahadev
Crime

ಪಹಲ್ಗಾಮ್ ದಾಳಿ ಬಳಿಕ ಆಫ್‌ ಆಗಿದ್ದ ಸ್ಯಾಟಲೈಟ್‌ ಫೋನ್ ದಿಢೀರ್ ಆನ್‌ – ಇದೇ ಸುಳಿವಿಂದ ಉಗ್ರರ ಬೇಟೆ!

Public TV
By Public TV
42 minutes ago
Bangkok Attack
Crime

ಬ್ಯಾಂಕಾಕ್ ಫುಡ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿಗೆ 6 ಬಲಿ

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?