Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ- ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ ಅಶೋಕ್ ಕಿಡಿ

Public TV
Last updated: September 13, 2024 4:17 pm
Public TV
Share
3 Min Read
R Ashoka 1
SHARE

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ, ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R. Ashok) ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಶೋಕ್, ಕಾಂಗ್ರೆಸ್ (Congress) ಸರ್ಕಾರವು ತಾಲಿಬಾನ್ ಸರ್ಕಾರ ಆಗಿದೆ. ಅಷ್ಟೇ ಅಲ್ಲ ಘಟನೆ ಸಂಬಂಧ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿ ಉತ್ತರಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಸಿಎಂ, ತುಕಾರಾಂ ರಾಜೀನಾಮೆಗೆ ಒತ್ತಾಯಿಸಿ ಎಸ್ಟಿ ಮೋರ್ಚಾ ರಾಜ್ಯಾದ್ಯಂತ ಹೋರಾಟ- ಬಂಗಾರು ಹನುಮಂತು

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ. ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆಸಲಾಗಿದೆ. ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವಂತೆ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡಿ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ.

ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ…

— R. Ashoka (@RAshokaBJP) September 13, 2024

ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶೋಕ್ ಪ್ರಶ್ನೆಗಳು!?

1.ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ?

2.ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?

3.ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಯಾಕೆ ಭದ್ರತೆ ನೀಡಲಿಲ್ಲ?

4.ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?

5.ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40ಕಿಮೀ ದೂರದಲ್ಲಿರುವ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?

6.ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ನಲ್ಲಿ ಎ1 ಮಾಡಿರುವುದೇಕೆ?

7.ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?

8.ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?

9.ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಾಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?

10.ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?

11.ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿಮೀ ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ? ಈ ರೀತಿ ತಪ್ಪು ಎಫ್‌ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದಿದ್ದಾರೆ.ಇದನ್ನೂ ಓದಿ: ಬರಲಿದೆ ವಿಜಯ್ ಸೇತುಪತಿ, ತ್ರಿಷಾ ನಟನೆಯ ’96’ ಚಿತ್ರದ ಸೀಕ್ವೆಲ್

TAGGED:bengalurubjpcongressKarnataka Governmentr ashokಆರ್ ಆಶೋಕ್ಕರ್ನಾಟಕ ಸರ್ಕಾರಕಾಂಗ್ರೆಸ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
5 hours ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
5 hours ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
6 hours ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
6 hours ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
6 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?