Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರೆಮಲೆನಾಡು ಹಾಸನ ಜಿಲ್ಲೆಯಲ್ಲೂ ಮೂಡಿದ ಬರ: 1 ಸಾವಿರ ಅಡಿ ಕೊರೆದರೂ ನೀರಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರೆಮಲೆನಾಡು ಹಾಸನ ಜಿಲ್ಲೆಯಲ್ಲೂ ಮೂಡಿದ ಬರ: 1 ಸಾವಿರ ಅಡಿ ಕೊರೆದರೂ ನೀರಿಲ್ಲ

Districts

ಅರೆಮಲೆನಾಡು ಹಾಸನ ಜಿಲ್ಲೆಯಲ್ಲೂ ಮೂಡಿದ ಬರ: 1 ಸಾವಿರ ಅಡಿ ಕೊರೆದರೂ ನೀರಿಲ್ಲ

Public TV
Last updated: March 12, 2017 2:31 pm
Public TV
Share
4 Min Read
HSN DROUGHT 5
SHARE

ಹಾಸನ: ಅರೆಮಲೆನಾಡು ಎಂದು ಕರೆಸಿಕೊಳ್ಳುವ ಹಾಸನ ಜಿಲ್ಲೆಯಲ್ಲಿ ಬರದ ಛಾಯೆ ಕಾಣಿಸಿಕೊಂಡಿದೆ. ಕಳೆದೆರೆಡು ವರ್ಷಗಳಿಂದ ಮಳೆರಾಯ ಮುನಿಸಿಕೊಂಡಿರುವುದರಿಂದ ಉತ್ತರ ಕರ್ನಾಟಕ ಜಿಲ್ಲೆಗಳಂತೆ ಹಾಸನದಲ್ಲಿ ಈ ಬಾರಿ ಬರ ಕಾಣಿಸಿಕೊಂಡಿದೆ. ಮಳೆ ಇಲ್ಲದೆ ಕುಡಿವ ನೀರಿಗೆ ಹಾಹಾಕಾರ, ಮೇವಿನ ಕೊರತೆ ಒಂದೆಡೆಯಾದ್ರೆ ಕೋಟ್ಯಾಂತರ ಪ್ರಮಾಣದ ಬೆಳೆ ನಷ್ಟ ಒಂದು ಕಡೆಯಾಗಿದೆ.

HSN DROUGHT 1

ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಅಂದಾಜು 115 ಕೋಟಿ ರೂ. ಬೆಳೆನಷ್ಟ ಸಂಭವಿಸಿದೆ. ಇದಕ್ಕೆ ಇನ್ಬುಟ್ ಸಬ್ಸಿಡಿ ರೂಪದಲ್ಲಿ 115 ಕೋಟಿ ಪರಿಹಾರ ಕೊಡಬೇಕಿದ್ದು, ಇಷ್ಟು ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಕೃಷಿ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿ ಹಲವು ದಿನಗಳು ಕಳೆದಿದ್ದರೂ, ಪರಿಹಾರ ಹಣವನ್ನು ಸರ್ಕಾರ ಈವರೆಗೂ ಬಿಡುಗಡೆ ಮಾಡಿಲ್ಲ. ಜಿಲ್ಲೆಯ ವಾರ್ಷಿಕ ಬಿತ್ತನೆ ಪ್ರದೇಶ 2.54 ಲಕ್ಷ ಹೆಕ್ಟೇರ್. ಪ್ರಸಕ್ತ ವರ್ಷ 2.6 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಮಳೆಯಿಲ್ಲದೇ 1.61 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ.33 ಕ್ಕಿಂತಲೂ ಹೆಚ್ಚಿನ ಪ್ರಮಾಣದ ಬೆಳೆ ಹಾಳಾಗಿದೆ.

HSN DROUGHT 2

ಬರಿದಾದ ಕೆರೆಯ ಒಡಲು: 2016-17 ನೇ ಸಾಲಿನಲ್ಲಿ ಒಟ್ಟು 43 ರೈತರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರಲ್ಲಿ ಸರಕಾರದ 5 ಲಕ್ಷ ಪರಿಹಾರ ಸಿಕ್ಕಿರುವುದು 33 ರೈತರಿಗೆ ಮಾತ್ರ. ಸಾಲದಿಂದಲೇ ಸಾವಿಗೆ ಶರಣಾಗಿದ್ದರೂ ಪರಿಹಾರ ಸಿಗದ ರೈತ ಕುಟುಂಬಗಳು ಅಂಗಲಾಚುವ ಪರಿಸ್ಥಿತಿ ಇದೆ. ಇದು ಬೆಳೆನಷ್ಟ ಮತ್ತು ಅನ್ನದಾತನ ಸ್ಥಿತಿಯಾದರೆ ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿರುವುದರಿಂದ ಸಣ್ಣ ಹಾಗೂ ದೊಡ್ಡ ಕೆರೆ ಸೇರಿ 3200 ಕ್ಕೂ ಹೆಚ್ಚು ಕೆರೆಗಳ ಪೈಕಿ ಬಹುತೇಕ ಕೆರೆಗಳ ಒಡಲು ಬರಿದಾಗಿವೆ.

HSN DROUGHT 4

ಜಿಲ್ಲಾ ಮಟ್ಟದ ಸರ್ವೇ ಪ್ರಕಾರ, ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ ಪ್ರಮಾಣ 1074 ಮಿಲಿ ಮೀಟರ್. ಆದರೆ ಮುಂಗಾರು ಆರಂಭದಿಂದ ಡಿಸೆಂಬರ್ ಕೊನೆವರೆಗೆ ಬಿದ್ದಿರುವುದು ಕೇವಲ 778 ಮಿಮೀ ಮಳೆ ಮಾತ್ರ. ಶೇ.28 ರಷ್ಟು ಮಳೆ ಕೊರತೆಯಾಗಿದ್ದು, ತೇವಾಂಶ ಕೊರತೆಯಾಗಿ ಜಿಲ್ಲೆಯಲ್ಲಿ ಶೇ.75 ರಷ್ಟು ಬೆಳೆ ಹಾಳಾಗಿದೆ. ಇದೇ ಕಾರಣಕ್ಕೆ ಜಿಲ್ಲೆಯ ಒಟ್ಟು 8 ತಾಲೂಕುಗಳಾದ ಹಾಸನ, ಹೊಳೆನರಸೀಪುರ, ಆಲೂರು, ಬೇಲೂರು, ಚನ್ನರಾಯಪಟ್ಟಣ, ಅರಕಲಗೂಡು, ಅರಸೀಕೆರೆ ಮತ್ತು ಸಕಲೇಶಪುರ ತಾಲೂಕು ಪೈಕಿ ಸಕಲೇಶಪುರ ಹೊರತುಪಡಿಸಿ 7 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರಕಾರ ಘೋಷಣೆ ಮಾಡಿದೆ.

HSN DROUGHT 8

ಕುಸಿದ ಅಂತರ್ಜಲ ಮಟ್ಟ: ಮಳೆಯಿಲ್ಲದೇ ಹೆಚ್ಚು ಕಡೆ ಅಂತರ್ಜಲ ಬತ್ತಿ ಹೋಗಿರುವುದರಿಂದ ಜಿಲ್ಲಾದ್ಯಂತ ಕುಡಿಯುವ ನೀರಿಗೆ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳ ಪರಿಸ್ಥಿತಿ ಹೇಳ ತೀರದ್ದಾಗಿದೆ. ಎಷ್ಟೋ ಹಳ್ಳಿಗಳಲ್ಲಿ ಮನೆ ಕೆಲಸ ಬಿಟ್ಟು ಬಿಂದಿಗೆ ನೀರು ಹಿಡಿದುಕೊಳ್ಳಲು ಗಂಟೆ ಗಟ್ಟಲೆ ಕಾಯುವ ಪರಿಸ್ಥಿತಿ ಈಗಲೂ ಇದೆ. ಒಂದು ಬಿಂದಿಗೆ ನೀರು ಪಡೆಯಲು ಗ್ರಾಮಸ್ಥರು, ಮಹಿಳೆಯರು ರಾತ್ರಿ ವೇಳೆಯೂ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬೇಲೂರು, ಅರಸೀಕೆರೆ, ಹೊಳೆನರಸೀಪುರ, ಹಾಸನ, ಅರಸೀಕೆರೆ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅಕ್ಷರಶಃ ಬಿಗಡಾಯಿಸಿದೆ. ಮಳೆಯಿಲ್ಲದೇ ಅಂತರ್ಜಲ ಬತ್ತಿ ಹೋಗಿ 1 ಸಾವಿರ ಅಡಿ ಬೋರ್ ವೆಲ್ ಕೊರೆದರೂ ನೀರು ಬರುತ್ತಿಲ್ಲ.ಬಂದರೂ ಅದರಲ್ಲಿ ಫ್ಲೋರೈಡ್ ಅಂಶ ಮೊದಲೇ ಸಂಕಷ್ಟದಲ್ಲಿರುವ ಜೀವಕೆ ವಿಷ ಉಣಿಸುತ್ತಿದೆ.

HSN DROUGHT 3

ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಿದ್ದ ಜನಪ್ರತಿನಿಧಿಗಳು ಅವರತ್ತ ಇವರು, ಇವರತ್ತ ಅವರು ಬೊಟ್ಟು ಮಾಡಿಕೊಂಡು ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ಅತ್ತ ರೈತ ಜಾನುವಾರುಗಳಿಗೆ ಕುಡಿಯಲು ನೀರು ಜೊತೆಗೆ ಮೇವಿಲ್ಲದೇ ಪರಿತಪಿಸುತ್ತಿದ್ದಾನೆ. ಮೂಕ ದನಕರುಗಳ ಮೇವಿನ ಸ್ಥಿತಿ ಎಲ್ಲಿಗೆ ಬಂದಿದೆ ಎಂದ್ರೆ ಹಿಂದೆಲ್ಲಾ ಮೆಕ್ಕೆಜೋಳದ ಕಡ್ಡಿ ನಿರುಪಯುಕ್ತ ಎನಿಸಿತ್ತು. ಜೋಳ ಬಿಡಿಸಿದ ನಂತರ ರಾಶಿ ರಾಶಿ ಜೋಳದ ಕಡ್ಡಿಗೆ ಬೆಂಕಿ ಹಚ್ಚಲಾಗುತ್ತಿತ್ತು. ಆದರೀಗ ಆ ಒಣ ಕಡ್ಡಿಯೇ ಜಾನುವಾರುಗಳ ಹೊಟ್ಟೆ ತುಂಬಿಸಬೇಕಿದೆ. ಜಾನುವಾರುಗಳು ಮತ್ತು ರೈತನ ಪರಿಸ್ಥಿತಿ ಹೀಗಿದ್ದರೂ, ಜವಾಬ್ದಾರಿ ಸ್ಥಾನದಲ್ಲಿರುವವರು ಒಮ್ಮೆಯೂ ಇತ್ತ ಮುಖ ಮಾಡಿಲ್ಲ. ಕಲ್ಪವೃಕ್ಷ ತೆಂಗಿನ ಮರಗಳು ಎಳನೀರು ಕೊಡುವ ಬದಲು ಅವುಗಳು ತಮ್ಮ ಜೀವ ಉಳಿಸಿಕೊಳ್ಳಲು ನೀರು ಬೇಡುತ್ತಿವೆ.

HSN DROUGHT 7

ಪಾಳು ಬಿದ್ದ ಗದ್ದೆಗಳು: ಇತ್ತೀಚೆಗೆ ಕೇಂದ್ರ ಬರ ಅಧ್ಯಯನ ತಂಡವೂ ಸೇರಿದಂತೆ ಒಟ್ಟು 3 ತಜ್ಞರ ತಂಡಗಳು ಜಿಲ್ಲೆಯ ಕೆಲಭಾಗಗಳಲ್ಲಿ ಪ್ರವಾಸ ಮಾಡಿ ಮಳೆ-ಬೆಳೆಯ ಪರಿಸ್ಥಿತಿ ಅವಲೋಕಿಸಿದೆ. ಜಿಲ್ಲೆಯ ಜೀವನದಿ ಹೇಮಾವತಿ ಕಳೆದ 3 ದಶಕಗಳಿಂದ ಕೇವಲ ಹಾಸನಕ್ಕೆ ಮಾತ್ರವಲ್ಲದೇ ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಿಗೂ ಕುಡಿಯಲು ಮತ್ತು ಕೃಷಿಗೆ ನೀರುಣಿಸುತ್ತಿದೆ. ಹೇಮಾವತಿ ಅಚ್ಚುಕಟ್ಟು ಪ್ರದೇಶ ಆರೂವರೆ ಲಕ್ಷ ಹೆಕ್ಟೇರ್ ಇದೆ. ಆದ್ರೆ ಕಳೆದ 2 ವರ್ಷಗಳಿಂದ ಒಮ್ಮೆಯೂ ಹೇಮಾವತಿ ಜಲಾಶಯ ಭರ್ತಿಯಾಗದೇ ಇರುವುದರಿಂದ ನೀರಾವರಿ ಬೆಳೆಗೆ ನೀರಿಲ್ಲದೇ ಲಕ್ಷಾಂತರ ರೈತರ ಅನ್ನದ ಆಸೆಗೆ ಕಲ್ಲು ಬಿದ್ದಿದೆ. ಭತ್ತ ಬೆಳೆಯಬೇಕಿದ್ದ ಗದ್ದೆಗಳು ಪಾಳು ಬಿದ್ದಿವೆ.

HSN DROUGHT 6

ಹೇಮಾವತಿ ಡ್ಯಾಂನ ನೀರಿನ ಸಂಗ್ರಹ ಕಡಿಮೆಯಾಗಿದೆ. 37 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯದ ಜಲಾಶಯದಲ್ಲಿಂದು 3.57 ಟಿಎಂಸಿ ನೀರಿದೆ. ಇದರಲ್ಲಿ ಬಳಕೆಗೆ ನೀರು ಲಭ್ಯವಿಲ್ಲ. ಆದರೆ ಡೆಡ್ ಸ್ಟೋರೆಜ್ ನೀರನ್ನು ಬಳಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ನದಿಯ ಒಳಹರಿವು ಮಾತ್ರ ಶೂನ್ಯವಾಗಿದೆ. ಇದನ್ನು ನಂಬಿರುವ ಮಂದಿಗೆ ಮುಂದಿನ ದಿನಗಳು ಕಡುಕಷ್ಟವಾಗುವುದು ಖಚಿತ.

 

TAGGED:agriculturedroughtfarmerhassanHemavati RiverPublic TVwaterಕೃಷಿನೀರುಪಬ್ಲಿಕ್ ಟಿವಿಬರರೈತಹಾಸನಹೇಮಾವತಿ ನದಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
47 minutes ago
01 12
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-1

Public TV
By Public TV
1 hour ago
02 13
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-2

Public TV
By Public TV
1 hour ago
03 11
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-3

Public TV
By Public TV
1 hour ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
1 hour ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?