Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸುರಕ್ಷಿತ, ಸಮೃದ್ಧ ಜಮ್ಮು-ಕಾಶ್ಮೀರ ನಿರ್ಮಿಸುತ್ತೇವೆ, ಇದು ಮೋದಿ ಗ್ಯಾರಂಟಿ: ಪ್ರಧಾನಿ ಭರವಸೆ

Public TV
Last updated: September 14, 2024 3:27 pm
Public TV
Share
3 Min Read
Narendra Modi Jammu Kashmir
SHARE

– ಈ ಚುನಾವಣೆ ಪರಿವಾರ-ಯುವಕರ ನಡುವಿನದು

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ (Jammu And Kashmir) ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವ ಕೆಲಸವನ್ನು ಬಿಜೆಪಿ (BJP) ಸರ್ಕಾರ ಮಾತ್ರ ಮಾಡಲಿದೆ. ತಮ್ಮ ಸ್ವಾರ್ಥಕ್ಕಾಗಿ ನಿಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಪರಿವಾರದ ಪಕ್ಷಗಳ ಬಗ್ಗೆ ನೀವು ಜಾಗರೂಕರಾಗಿರಬೇಕು ಎಂದು ಪ್ರಧಾನಿ ಮೋದಿ (Narendra Modi) ಹೇಳಿದ್ದಾರೆ.

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ (Assembly Elections) ಹಿನ್ನೆಲೆ ದೋಡಾದಲ್ಲಿ (Doda) ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗಳು ಮೂರು ರಾಜವಂಶಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಯುವಕರ ನಡುವೆ ನಡೆಯುತ್ತಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಈ ಮೂರು ಕುಟುಂಬಗಳು ಸೇರಿ ಮಾಡಿದ ಕೆಲಸ ಯಾವ ಪಾಪಕ್ಕಿಂತ ಕಡಿಮೆಯಿಲ್ಲ. ಈ ಮೂರು ಕುಟುಂಬಗಳು ಜಮ್ಮು ಮತ್ತು ಕಾಶ್ಮೀರವನ್ನು ವರ್ಷಗಳಿಂದ ನಾಶಮಾಡಲು ಕಾರಣವಾಗಿವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೀಸಲಾತಿ ಸ್ಥಗಿತ ಬಗ್ಗೆ ರಾಹುಲ್ ಹೇಳಿಕೆ – ದಲಿತರ ಹಣ ನುಂಗಿ ಹೀಗೆ ಮಾತಾಡುವ ಕಾಂಗ್ರೆಸಿಗರು ಪಾಪಿಗಳು: ಛಲವಾದಿ

Narendra Modi Jammu Kashmir 1

ಇತ್ತೀಚಿನ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಹಂತ ಬಂದಿದೆ. ಇದರ ಶ್ರೇಯಸ್ಸು ಇಲ್ಲಿನ ಯುವಕರಿಗೆ ಮಾತ್ರ ಸಲ್ಲುತ್ತದೆ. ಇಂದು ನಾನು ಜಮ್ಮು ಮತ್ತು ಕಾಶ್ಮೀರದ ಯುವಕರು, ಅದು ಗಂಡಾಗಿರಲಿ, ಹೆಣ್ಣಮಕ್ಕಳಾಗಿರಲಿ ಅವರ ಉತ್ಸಾಹವನ್ನು ಅಭಿನಂದಿಸುತ್ತೇನೆ ಎಂದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್ – ಐವರು ಉಗ್ರರು ಬಲಿ

2000ದ ಬಳಿಕ ಇಲ್ಲಿ ಪಂಚಾಯ್ತಿ ಚುನಾವಣೆ ನಡೆದಿಲ್ಲ. ಬಿಡಿಸಿ ಚುನಾವಣೆಗಳು ಇಲ್ಲಿ ನಡೆದಿಲ್ಲ. ದಶಕಗಳಿಂದ ಸ್ವಜನಪಕ್ಷಪಾತವು ಇಲ್ಲಿನ ಮಕ್ಕಳು ಮತ್ತು ಭರವಸೆಯ ಯುವಕರನ್ನು ಮುಂದೆ ಬರಲು ಬಿಡಲಿಲ್ಲ. ಯುವಕರು ರಾಜಕೀಯಕ್ಕೆ ಬರುವುದು ಕುಟುಂಬದವರಿಗೆ ಇಷ್ಟವಿರಲಿಲ್ಲ. 2014ರಲ್ಲಿ ಬಿಜೆಪಿ ಸರ್ಕಾರಕ್ಕೆ ಬಂದ ನಂತರ, ನಾನು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರ ಹೊಸ ನಾಯಕತ್ವವನ್ನು ತರಲು ಪ್ರಯತ್ನಿಸಿದೆ. ನಂತರ 2018ರಲ್ಲಿ ಪಂಚಾಯತ್ ಚುನಾವಣೆಗಳು ನಡೆದವು. 2019ರಲ್ಲಿ ಬಿಡಿಸಿ ಚುನಾವಣೆಗಳು ನಡೆದವು ಮತ್ತು 2020 ರಲ್ಲಿ ಮೊದಲ ಬಾರಿಗೆ ಡಿಡಿಸಿ ಚುನಾವಣೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವು ತಳಮಟ್ಟದವರೆಗೆ ತಲುಪಲು ಈ ಚುನಾವಣೆಗಳನ್ನು ನಡೆಸಲಾಯಿತು ಎಂದು ಹೇಳಿದರು. ಇದನ್ನೂ ಓದಿ:  ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್‌ಡಿಕೆ ಬಾಂಬ್‌

ಸ್ವಾತಂತ್ರ‍್ಯ ಬಂದಾಗಿನಿಂದಲೂ ನಮ್ಮ ಪ್ರೀತಿಯ ಜಮ್ಮು ಮತ್ತು ಕಾಶ್ಮೀರ ವಿದೇಶಿ ಶಕ್ತಿಗಳ ಗುರಿಯಾಗಿದೆ. ಇದರ ನಂತರ ಸ್ವಜನಪಕ್ಷಪಾತವು ಈ ಸುಂದರ ರಾಜ್ಯವನ್ನು ಟೊಳ್ಳು ಮಾಡಲು ಪ್ರಾರಂಭಿಸಿತು. ನೀವು ನಂಬಿದ ರಾಜಕೀಯ ಪಕ್ಷಗಳಿಗೆ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇಲ್ಲ. ಆ ರಾಜಕೀಯ ಪಕ್ಷಗಳು ತಮ್ಮ ಮಕ್ಕಳನ್ನು ಮಾತ್ರ ಬೆಳೆಸಿದವು. ಜಮ್ಮು ಮತ್ತು ಕಾಶ್ಮೀರದ ನನ್ನ ಯುವಕರು ಭಯೋತ್ಪಾದನೆಯಲ್ಲಿ ನಲುಗುತ್ತಲೇ ಇದ್ದರು. ರಾಜವಂಶವನ್ನು ಉತ್ತೇಜಿಸುವ ಪಕ್ಷಗಳು ನಿಮ್ಮನ್ನು ದಾರಿ ತಪ್ಪಿಸುವ ಮೂಲಕ ಮೋಜು ಮಾಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ನಾಯಕತ್ವ ಹೊರಹೊಮ್ಮಲು ಈ ಜನರು ಎಂದಿಗೂ ಅನುಮತಿಸಲಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜೀವನವು ಖಟಾ-ಖಟ್ ಅಲ್ಲ, ಕಠಿಣ ಪರಿಶ್ರಮ ಬೇಕು: ರಾಹುಲ್‌ಗೆ ಜೈಶಂಕರ್‌ ಟಾಂಗ್‌

ಈ ಬಾರಿಯ ಚುನಾವಣೆ ಜಮ್ಮು ಮತ್ತು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಲಿದೆ. ನಾವು ಸುರಕ್ಷಿತ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಾಣ ಮಾಡುತ್ತೇವೆ. ನಾನು ನಿಮಗಾಗಿ ಮತ್ತು ದೇಶಕ್ಕಾಗಿ ಡಬಲ್ ಮತ್ತು ಟ್ರಿಪಲ್ ಕೆಲಸ ಮಾಡುವ ಮೂಲಕ ನಿಮ್ಮ ಪ್ರೀತಿ ಮತ್ತು ಆಶೀರ್ವಾದವನ್ನು ಮರುಪಾವತಿಸುತ್ತೇನೆ. ನಾವು ಒಟ್ಟಾಗಿ ಸುರಕ್ಷಿತ ಮತ್ತು ಸಮೃದ್ಧ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸುತ್ತೇವೆ. ಇದು ಮೋದಿ ಗ್ಯಾರಂಟಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹೊಟ್ಟೆ ತುಂಬ ಊಟ ಕೊಡಿ ಪ್ಲೀಸ್ – ಅರೆಹೊಟ್ಟೆಯಲ್ಲಿ ವಸತಿ ಶಾಲಾ ವಿದ್ಯಾರ್ಥಿನಿಯರ ಪರದಾಟ

TAGGED:bjpJammu and Kashmir Assembly Electionsjammu kashmirnarendra modiಜಮ್ಮು ಕಾಶ್ಮೀರನರೇಂದ್ರ ಮೋದಿಬಿಜೆಪಿವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
13 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
16 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
17 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
17 hours ago

You Might Also Like

Lakshmi Hebbalkar 1
Belgaum

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

Public TV
By Public TV
41 minutes ago
Lucknow Accused in rape of toddler killed in encounter with UP police near Alambagh border
Crime

3 ವರ್ಷದ ಬಾಲಕಿಯ ಮೇಲೆ ರೇಪ್‌ – UP ಪೊಲೀಸರ ಗುಂಡಿಗೆ ಕಾಮಿ ದೀಪಕ್‌ ಬಲಿ

Public TV
By Public TV
55 minutes ago
Repo Rate
Latest

ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

Public TV
By Public TV
1 hour ago
BJP MLA Sharanu Salagar and Team 40 cattle in basavakalyan in Bidar 2
Bidar

ಶರಣು ಸಲಗರ್ ದಾಳಿ – ಬಲಿಗೆ ಸಿದ್ಧವಾಗಿದ್ದ 40 ಗೋವುಗಳ ರಕ್ಷಣೆ

Public TV
By Public TV
1 hour ago
bengaluru stambede rcb
Bengaluru City

Chinnaswamy Stampede | ಡಿಎನ್‌ಎ ಕಂಪನಿ ಮುಖ್ಯಸ್ಥ ನಾಪತ್ತೆ

Public TV
By Public TV
2 hours ago
Elon Musk Trump
Latest

ಟ್ರಂಪ್‌ ಉಚ್ಚಾಟನೆಗೆ ಕರೆ ಕೊಟ್ಟ ಬೆನ್ನಲ್ಲೇ ಮಸ್ಕ್‌ ಕಂಪನಿಗಳಿಗೆ ಶಾಕ್‌!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?