Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಬೋಸರಾಜು ಸೂಚನೆ

Public TV
Last updated: September 15, 2024 4:30 pm
Public TV
Share
2 Min Read
N S bosaraju 2
SHARE

ಮಡಿಕೇರಿ: ಇದೇ ಅ.17ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು (N S Bosaraju) ಅವರು ಸೂಚಿಸಿದ್ದಾರೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಬಾರಿ ಅ.17ರಂದು ಬೆಳಗ್ಗೆ 7:40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನ್ನು ಕಡಿಯಬೇಕು. ಗಿಡ ಗಂಟೆ ಸಂಬಂಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದ್ದಾರೆ.ಇದನ್ನೂ ಓದಿ: ಹೀರೋ ಆದ ‘ಶ್ರೀಗೌರಿ’ ಸೀರಿಯಲ್ ವಿಲನ್- ‘ಪೀಟರ್’ ಚಿತ್ರಕ್ಕೆ ಡಾಲಿ, ವಿಜಯ್ ಸೇತುಪತಿ ಸಾಥ್

ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.

N S bosaraju 3

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾಧಿಗಳಿಗೆ ಅಗತ್ಯ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.

ಮಡಿಕೇರಿ-ಭಾಗಮಂಡಲ, ಕರಿಕೆ-ಭಾಗಮಂಡಲ, ವಿರಾಜಪೇಟೆ-ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ರಸ್ತೆ ನಿರ್ವಹಣೆ ಮಾಡಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸುವಂತೆ ನಿರ್ದೇಶನ ನೀಡಿದರು. ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.ಇದನ್ನೂ ಓದಿ: ಸೋಮವಾರ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಅಶ್ವಥ್ ನಾರಾಯಣ್

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ರಸ್ತೆ ಗಿಡಗಂಟೆ ಕಡಿಯುವ ಸಂಬಂಧ ಲೋಕೋಪಯೋಗಿ, ಅರಣ್ಯ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ ತುರ್ತು ಕ್ರಮವಹಿಸುವಂತೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ, ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು ಎಂದು ಕೋರಿದರು. ಈ ಬಾರಿ ಬೆಳಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು ಎಂದರು. ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿ ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

TAGGED:madikeriNS BosarajuTalakaveriಎನ್‌ಎಸ್ ಬೋಸರಾಜುತಲಕಾವೇರಿಮಡಿಕೇರಿ
Share This Article
Facebook Whatsapp Whatsapp Telegram

You Might Also Like

Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
54 minutes ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
1 hour ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
2 hours ago
Air India Flight 3
Latest

ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

Public TV
By Public TV
2 hours ago
Siddaramaiah 7
Bengaluru City

ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ

Public TV
By Public TV
3 hours ago
ಎಐ ಚಿತ್ರ
Bengaluru City

SSLC ಫಲಿತಾಂಶ ಕಡಿಮೆ ಬಂದ್ರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ – ಶಾಲೆಯ ಅನುದಾನ ಬಂದ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?