Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

Public TV
Last updated: September 19, 2024 4:18 pm
Public TV
Share
2 Min Read
Ernst and Young India Employee Death
SHARE

– ಮಗಳ ಸಾವಿನ ಬಗ್ಗೆ ತಾಯಿಯ ಮನಕಲಕುವ ಪತ್ರದಲ್ಲೇನಿತ್ತು?
– ಉದ್ಯೋಗಿ ಸಾವಿನ ತನಿಖೆ ಕೈಗೆತ್ತಿಕೊಂಡ ಕೇಂದ್ರ

ನವದೆಹಲಿ: ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದಾರೆ.

26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ ನಾಲ್ಕು ತಿಂಗಳಲ್ಲೇ ಸಾವನ್ನಪ್ಪಿದ್ದಾರೆ. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿದೆ.

ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ದೂರನ್ನು ಅಧಿಕೃತವಾಗಿ ತೆಗೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ತಾಯಿ ಬರೆದ ಪತ್ರದಲ್ಲೇನಿದೆ?
ನನ್ನ ಮಗಳು ಕಂಪನಿಗೆ ಕೆಲಸ ಸೇರಿದ ನಾಲ್ಕು ತಿಂಗಳಲ್ಲೇ ಮೃತಪಟ್ಟಿದ್ದಾಳೆ. ಅವಳಿಗೆ ಕೆಲಸದ ಒತ್ತಡ ಜಾಸ್ತಿ ಇತ್ತು. ನನ್ನ ಹೃದಯ ಭಾರವಾಗಿದೆ. ನಾವು ಅನುಭವಿಸುತ್ತಿರುವ ನೋವನ್ನು ಬೇರೆ ಯಾವುದೇ ಕುಟುಂಬ ಅನುಭವಿಸಬಾರದು.

ಜುಲೈ 6 ರಂದು, ನನ್ನ ಪತಿ ಮತ್ತು ನಾನು, ಸಿಎ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಪುಣೆಗೆ ಬಂದಿದ್ದೆವು. ಆಕೆ ಪಿಜಿಗೆ ತಲುಪಿದಾಗ ಎದೆಯ ಸೆಳೆತದ ಬಗ್ಗೆ ದೂರು ನೀಡಿದ್ದರಿಂದ, ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ದೆವು. ಪುಣೆಯಲ್ಲಿ ಅವಳ ಇಸಿಜಿ ನಾರ್ಮಲ್‌ ಇತ್ತು. ಮಗಳ ದಿನಚರಿ ಬಗ್ಗೆ ಹೃದ್ರೋಗ ತಜ್ಞರು, ‘ನಿಮ್ಮ ಮಗಳು ಸಾಕಷ್ಟು ಸಮಯ ನಿದ್ರೆ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ಊಟ-ತಿಂಡಿ ಮಾಡುತ್ತಿಲ್ಲ’ ಎಂಬ ಆತಂಕಕಾರಿ ವಿಚಾರವನ್ನು ನಮ್ಮ ಮುಂದಿಟ್ಟರು.

ವೈದ್ಯರನ್ನು ನೋಡಿದ ನಂತರವೂ ಕೆಲಸಕ್ಕೆ ಹೋಗಬೇಕೆಂದು ಮಗಳು ಒತ್ತಾಯಿಸಿದ್ದಳು. ಆ ರಾತ್ರಿ ತನಗೆ ರಜೆ ಸಿಗುವುದಿಲ್ಲ ಎಂದಿದ್ದಳು. ಜುಲೈ 7 ರಂದು ಭಾನುವಾರ ತಡವಾಗಿ ತನ್ನ ಪಿಜಿಗೆ ಮರಳಿದ್ದಳು. ಅವಳು ಘಟಿಕೋತ್ಸವದ ದಿನ ಬೆಳಗ್ಗೆ ನಮ್ಮೊಂದಿಗೆ ಇದ್ದಳು. ಆ ದಿನವೂ ಮಧ್ಯಾಹ್ನದ ವರೆಗೆ ಮನೆಯಿಂದ ಕೆಲಸ ಮಾಡುತ್ತಿದ್ದಳು. ಮಗಳು ಸಂಪೂರ್ಣ ದಣಿದ ಸ್ಥಿತಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಳು. ಕೆಲವೊಮ್ಮೆ ತನ್ನ ಬಟ್ಟೆಗಳನ್ನು ಬದಲಾಯಿಸದೆ ಹಾಸಿಗೆಯ ಮೇಲೆ ಮಲಗುತ್ತಿದ್ದಳು. ತನ್ನ ಕೆಲಸದ ಗಡುವನ್ನು ಪೂರೈಸಲು ತುಂಬಾ ಪ್ರಯತ್ನಿಸುತ್ತಿದ್ದಳು. ಅವಳು ಛಲಗಾರ್ತಿ. ಯಾವುದೇ ಕೆಲಸವನ್ನು ಸುಲಭಕ್ಕೆ ಬಿಟ್ಟುಕೊಡುತ್ತಿರಲಿಲ್ಲ. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಆಸಕ್ತಿ ವಹಿಸುತ್ತಿದ್ದಳು. ಆದರೆ ಅತಿಯಾದ ಕೆಲಸದ ಒತ್ತಡ ಅವಳಿಗೆ ಈ ಪರಿಸ್ಥಿತಿ ತಂದಿತು.

ನನ್ನ ಮಗಳ ಅಂತ್ಯಕ್ರಿಯೆ ವೇಳೆ ಕಂಪನಿಯಿಂದ ಯಾರೊಬ್ಬರು ಕೂಡ ಬಂದಿರಲಿಲ್ಲ. ಸಂಸ್ಥೆಗಾಗಿ ದುಡಿದ ಉದ್ಯೋಗಿಯೊಬ್ಬರ ಅಂತ್ಯಕ್ರಿಯೆಗೆ ಬಾರದೇ ಇದ್ದದ್ದು ಮನಸ್ಸಿಗೆ ನೋವು ತಂದಿದೆ ಎಂದು ಅನ್ನಾ ತಾಯಿ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.

TAGGED:Anna Sebastian PerayilOverworkUnion Labour Ministry
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
23 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
42 minutes ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
1 hour ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
1 hour ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
captain brijesh chowta nitin gadkari
Dakshina Kannada

ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?