ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್

Public TV
1 Min Read
HD REVANNA 1

– ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ ಎಂದ ರೇವಣ್ಣ

ಹಾಸನ: ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಕಿಡಿಕಾರಿದ್ದಾರೆ.

ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ (JDS) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು (H. S. Prakash) ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್‌ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದು ಇಂದಿರಾ ಕ್ಯಾಂಟೀನ್ ಬಂದ್ – ಅಕ್ರಮ ಚಟುವಟಿಕೆಗಳ ತಾಣವಾದ ಕ್ಯಾಂಟೀನ್

2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಬಿಜೆಪಿ ನಾಯಕನ ಅಜಾಗರೂಕತೆ ಕಾರು ಚಾಲನೆ – ಅಪಘಾತಕ್ಕೆ ಬೈಕ್‌ ಸವಾರ ಸಾವು

Share This Article