Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ವಿಪಕ್ಷ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Public TV
Last updated: September 20, 2024 2:38 pm
Public TV
Share
3 Min Read
B.Y Vijayendra
SHARE

ಮಂಡ್ಯ: ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸತ್ಯಶೋಧನಾ ಸಮಿತಿ ವರದಿ ಸ್ವೀಕಾರ ಹಿನ್ನೆಲೆ ಆಗಮಿಸಿದ್ದ ಬಿವೈ ವಿಜಯೇಂದ್ರ ಮಾತನಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ ಹಗರಣ (MUDA Scam), ವಾಲ್ಮೀಕಿ ಹಗರಣ (Valmiki Scam) ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ. ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದರು.ಇದನ್ನೂ ಓದಿ: ತುಂಗಭದ್ರಾ ಜಲಾಶಯ ಭರ್ತಿಯಾದರೂ 1.75 ಲಕ್ಷ ಎಕರೆ ಜಮೀನಿಗೆ ನೀರಿಲ್ಲ – ರೈತರಿಂದ ಪ್ರತಿಭಟನೆ

ನಾಗಮಂಗಲ-ದಾವಣಗೆರೆ ಪ್ರಕರಣ:
ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಒಂದಾದ ಮೇಲೆ ಒಂದು ಘಟನೆ ನಡೆಯುತ್ತಿದೆ. ನಾಗಮಂಗಲ ಕೇಸ್ ಭಯದಿಂದ ಜನರು ಊರು ಬಿಟ್ಟಿದ್ದಾರೆ. ನಿರಪರಾಧಿಗಳ ಮೇಲೆ ಕೇಸ್ ಹಾಕಲಾಗಿದೆ. ಕೃತ್ಯ ಮಾಡಿರೋರ ಮೇಲೆ ಕೇಸ್ ಹಾಕಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಇದೆ. ಸರ್ಕಾರದ ವೈಫಲ್ಯವೂ ಇದೆ. ಇಂತಹ ಕೇಸ್ ಬಂದಾಗ ದರ್ಶನ್ ಪ್ರಕರಣ ತಂದು ಬಿಡುತ್ತಿದ್ದರು. ಈಗ ಮುನಿರತ್ನ ಹಿಡಿದುಕೊಂಡು ಕೂತಿದ್ದಾರೆ. ಸಿಎಂ ಪರಿಹಾರ ಕೊಡೋದಾಗಿ ಹೇಳಿದ್ದಾರೆ. ಈ ಬಗ್ಗೆಯೂ ವರದಿಯಲ್ಲಿ ಉಲ್ಲೇಖ ಮಾಡಿದ್ದೇವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದಲ್ಲಿ ಇತ್ತೀಚೆಗೆ ಕೋಮುಗಲಭೆ (Nagamangala Violence) ನಡೆದಿತ್ತು. ಹಿಂದೂ ಯುವಕರು ಗಣೇಶ ವಿಸರ್ಜನೆ ಮಾಡುವ ಸಮಯದಲ್ಲಿ ಏಕಾಏಕಿ ಮೆರವಣಿಗೆ ಮೇಲೆ ಒಂದು ಕೋಮಿನ ಜನರು ದಾಳಿ ಮಾಡಿದ್ದರು. ಅವರೆಲ್ಲ ದೇಶದ್ರೋಹಿಗಳು. ಕತ್ತಿ, ತಲವಾರ್, ಪೆಟ್ರೋಲ್ ಬಾಂಬ್ ಎಸೆದಿದ್ದರು. ಹಿಂದೂಗಳ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು. ಇವೆಲ್ಲ ಪೊಲೀಸರ ಕಣ್ಣ ಮುಂದೆಯೇ ನಡೆದಿದೆ. ಘಟನೆಯಾದ ಮರು ದಿನ ನಾನು, ವಿಪಕ್ಷ ನಾಯಕರು ಭೇಟಿ ನೀಡಿದ್ದೇವೆ. ನಾವು ಎಲ್ಲರನ್ನು ಮಾತಾಡಿಸಿದ್ದೆವು. ಬಳಿಕ ಸತ್ಯಶೋಧನಾ ಸಮಿತಿಯನ್ನು ಅಶ್ವಥ್ ನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಸಮಿತಿ ಭೇಟಿ ಮಾಡಿ ಸತ್ಯಾಸತ್ಯತೆ ಬಗ್ಗೆ ವರದಿ ಕೊಟ್ಟಿದ್ದಾರೆ. ಇದು ವ್ಯವಸ್ಥಿತವಾದ ಪಿತೂರಿ. ಹೇಗೆ ಘಟನೆ ಆಯ್ತು ಅಂತಾ ವರದಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

ನಾಗಮಂಗಲ (Nagamangala), ದಾವಣಗೆರೆ (Davanagere) ಘಟನೆ ಸರಿಯಾಗಿ ತನಿಖೆ ಆಗಬೇಕು. ಅಲ್ಪಸಂಖ್ಯಾತ ತುಷ್ಟೀಕರಣ ಬಿಡಿ. ಅಲ್ಪಸಂಖ್ಯಾತ ಒಲೈಕೆ ರಾಜಕೀಯ ಬಿಡಿ. ಎರಡು ಘಟನೆಗಳನ್ನು ಎನ್‌ಐಎಯಿಂದ ತನಿಖೆ ಮಾಡಿಸಿ. ಪೊಲೀಸರು ಮುಗ್ದ ಹಿಂದೂಗಳನ್ನು ಟಾರ್ಗೆಟ್ ಮಾಡಿ, ಕೇಸ್ ಹಾಕ್ತಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ನಾಗಮಂಗಲ, ದಾವಣಗೆರೆ ಕೇಸ್ ಎನ್‌ಐಎ ತನಿಖೆಗೆ ವಹಿಸಬೇಕು. ಇಂತಹ ಸರ್ಕಾರದ ವಿರುದ್ಧ ನಾವು ಸುಮ್ಮನೆ ಕುಳಿತರೆ ದೇವರು ನಮ್ಮನ್ನ ಮೆಚ್ಚುವುದಿಲ್ಲ. ಮುಂದೆ ಏನು ಮಾಡಬೇಕು ಎಂದು ಹಿರಿಯರು ಕೂತು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸಿಎಂಗೆ ವಿಜಯೇಂದ್ರ ಆಗ್ರಹಿಸಿದರು.ಇದನ್ನೂ ಓದಿ: ಮತ್ತೊಂದು ಬಾಲಿವುಡ್ ಪ್ರಾಜೆಕ್ಟ್ ಒಪ್ಪಿಕೊಂಡ ನಟಿ- ‘ಆಶಿಕಿ 2’ ಹೀರೋಗೆ ಸಮಂತಾ ಜೋಡಿ

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ:
ಫೊರೆನ್ಸಿಕ್ ರಿಪೋರ್ಟ್(Forensic Report), ಮಾಧ್ಯಮಗಳ ವರದಿ ನೋಡಿದ್ರೆ ಇದು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ವಿಷಯವಾಗಿದೆ. ಅಂಧ್ರ ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಸತ್ಯ ಹೊರಗೆ ಬರಬೇಕು ಎಂದು ಹೇಳಿದ್ದಾರೆ.

TAGGED:bjpBY VijayendradavanageremandyaMUDANagamangala Violencevalmiki scamನಾಗಮಂಗಲ ಗಲಭೆಬಿಜೆಪಿಬಿವೈ ವಿಜಯೇಂದ್ರಮಂಡ್ಯಮುಡಾವಾಲ್ಮೀಕಿ ಹಗರಣ
Share This Article
Facebook Whatsapp Whatsapp Telegram

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Jaishankar Wang Yi
Latest

3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

Public TV
By Public TV
3 hours ago
Bengaluru Nagarathpete fire
Big Bulletin

Video | ನಗರ್ತಪೇಟೆಯಲ್ಲಿ ಮತ್ತೊಂದು ಅಗ್ನಿ ಅವಘಡ – 4 ಅಂತಸ್ತಿನ ಕಟ್ಟಡಕ್ಕೆ ಬೆಂಕಿ

Public TV
By Public TV
3 hours ago
himachal pradesh cloudburst
Latest

ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

Public TV
By Public TV
3 hours ago
nitish kumar
Latest

ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
By Public TV
4 hours ago
Tumakuru Woman Suicide
Crime

Tumakuru | ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Public TV
By Public TV
4 hours ago
Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?