Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ ರದ್ದು

Public TV
Last updated: March 13, 2017 8:40 pm
Public TV
Share
3 Min Read
puc leak rcr
SHARE

ರಾಯಚೂರು/ಬೆಂಗಳೂರು: ಮಾನ್ವಿಯ ಗಾಂಧಿ ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದ ಹಾಗೆ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪತ್ರಿಕೆಯ ಫೋಟೋ ವಾಟ್ಸಪ್‍ನಲ್ಲಿ ಹರಿದಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಕಳಿಂಗ ಪಿಯು ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಕ್ರಮ ಎಸಗಿದ್ದಕ್ಕೆ ಕಲ್ಮಠ ಪಿಯು ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಸಿದ್ಧನಗೌಡ, ಕಳಿಂಗ ಪಿಯು ಕಾಲೇಜಿನ ಪ್ರಾಂಶುಪಾಲ ಮಹೇಶ್ ಮತ್ತು ಅದೇ ಕಾಲೇಜಿನ ಸಿಬ್ಬಂದಿ ಶರಣಬಸವ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಎಲ್ಲ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಸ್‍ಪಿ ಚೇತನ್ ಸಿಂಗ್ ರಾಥೋರ್ ವಿಚಾರಣೆಗೆ ಒಳಪಡಿಸಿದ ವೇಳೆ ಈ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

Public Tv IMPACT copy 1

ಅಕ್ರಮ ಎಸಗಿದ್ದು ಯಾಕೆ? ಹೇಗೆ?
ಗಾಂಧಿ ಮೆಮೊರಿಯಲ್ ಕಾಲೇಜು ಮತ್ತು ಕಲ್ಮಠ, ಕಳಿಂಗ ಕಾಲೇಜಿನ ಮಧ್ಯೆ ವೈಷಮ್ಯವಿದ್ದು, ಗಾಂಧಿ ಕಾಲೇಜಿನ ಹೆಸರನ್ನು ಕೆಡಿಸಲು ಒಂದನೇ ಆರೋಪಿಯಾಗಿರುವ ಸಿದ್ಧನಗೌಡ, ಎರಡನೇ ಆರೋಪಿ ಮಹೇಶ್‍ಗೆ ವಾಟ್ಸಪ್‍ನಲ್ಲಿ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಿದ್ದಾನೆ. ಮಹೇಶ್ ಈ ಫೋಟೋ ವನ್ನು ಶರಣಬಸವನಿಗೆ ಕಳುಹಿಸಿದ್ದಾನೆ. ಶರಣಬಸವ ಗಾಂಧಿ ಕಾಲೇಜಿನಲ್ಲಿ ಅಕ್ರಮ ನಡೆದಿದ್ದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಟೈಪಿಸಿ ವಾಟ್ಸಪ್‍ನಲ್ಲಿ ಎಲ್ಲರಿಗೂ ಪರೀಕ್ಷೆ ಮುಗಿಯುವ ಮೊದಲೇ ಮೆಸೇಜ್ ಮಾಡಿದ್ದ.

ಮೊಬೈಲ್ ಬ್ಯಾನ್: ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಈಗಾಗಲೇ ಸಿದ್ದನಗೌಡ ಎಂಬ ಉಪನ್ಯಾಸಕ ಒಬ್ಬನನ್ನು ಬಂಧಿಸಿಲಾಗಿದೆ. ಈತ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕಾಲೇಜಿಗೆ ಬಂದಿದ್ದಾನೆ. ನಂತರ ಆತ ಪ್ರಶ್ನೆ ಪತ್ರಿಕೆ ಫೋಟೋ ತೆಗೆದುಕೊಂಡಿದ್ದಾನೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ವಜಾಗೊಳಿಸಲಾಗಿದೆ. ಇನ್ನು ಮುಂದೆ ಯಾವ ಉಪನ್ಯಾಸಕರು ಸಹ ಮೊಬೈಲ್‍ಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಅಕ್ರಮ ನಡೆಸಿದ್ದಕ್ಕೆ ಕಳಿಂಗ ಕಾಲೇಜಿನ ಮಾನ್ಯತೆಯನ್ನು ರದ್ದುಗೊಳಿಸಲಾಗಿದೆ. ಪಿಯು ವಿದ್ಯಾರ್ಥಿಗಳು ಆಂತಕವಿಲ್ಲದೇ ಪರೀಕ್ಷೆಯನ್ನು ಬರೆಯಬಹುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಮಧ್ಯಾಹ್ನ ಬ್ರೇಕ್ ಮಾಡಿದ ಬಳಿಕ ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಸಿಬ್ಬಂದಿಯ ಅಕ್ರಮದಿಂದ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಹರಿದಾಡಿರಬಹುದು. ಜಿಲ್ಲಾಧಿಕಾರಿಯವರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದರು. ಶಿಕ್ಷಣ ಸಚಿವ ತನ್ವೀರ್ ಸೇಠ್ ಪಬ್ಲಿಕ್ ಟಿವಿಗೆ ಸರಣಿ ಟ್ವೀಟ್ ಮಾಡಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಅಕ್ರಮ ಎಸಗಿದವರನ್ನು ಕೂಡಲೇ ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದರು. ಈಗ ಇವರಿಬ್ಬರು ನುಡಿದಂತೆ ನಡೆದಿದ್ದು, ಅಕ್ರಮ ಎಸಗಿದವರನ್ನು ಬಂಧಿಸಿ, ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ: ವಾಟ್ಸಪ್‍ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ಎಸ್‍ಎಫ್‍ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಿಕ್ಷಣೆ ಇಲಾಖೆ ಕೂಡಲೇ ತಪ್ಪಿತ್ತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ಮತ್ತೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ? 

ಅಕ್ರಮ ನಡೆಯುತ್ತಾ?
ಒಂದು ವೇಳೆ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಸಿಕ್ಕಿದರೆ ಉತ್ತರವನ್ನು ತಯಾರು ಮಾಡಿ ಚೀಟಿ ಮೂಲಕ ವಿದ್ಯಾರ್ಥಿಗಳಿಗೆ ನೀಡುವ ಸಾಧ್ಯತೆಯನ್ನು ನಾವು ತಳ್ಳಿ ಹಾಕುವಂತಿಲ್ಲ. ವಿದ್ಯಾರ್ಥಿಗಳ ಪೋಷಕರ ಜೊತೆ ಸೇರಿ ಶಿಕ್ಷಕರೇ ಕಾಪಿಗೆ ಸಹಕಾರ ನೀಡುತ್ತಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಭಾನುವಾರ ಪ್ರಸಾರ ಮಾಡಿತ್ತು. ಇದರಲ್ಲಿ ವಾಟರ್ ಬಾಯಿ ವಿದ್ಯಾರ್ಥಿಗಳಿಗೆ ಚೀಟಿ ನೀಡಿ ಹೋಗುತ್ತಿರುವುದು ಸೆರೆಯಾಗಿತ್ತು. ಹೀಗಾಗಿ ಈ ಒಂದು ಪ್ರಶ್ನೆ ಪತ್ರಿಕೆಯ ಫೋಟೋ ರಾಜ್ಯದ ಹಲವು ಭಾಗಗಳಿಗೆ ತಲುಪಿರುವ ಸಾಧ್ಯತೆಯು ಇದೆ. ಈ ಒಂದು ಪ್ರಶ್ನೆ ಪತ್ರಿಕೆ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಹಿಂದಿನ ಪರೀಕ್ಷೆಯ ವೇಳೆಯೂ ಈ ರೀತಿ ನಡೆದಿತ್ತಾ ಎನ್ನುವುದು ತಿಳಿದು ಬಂದಿಲ್ಲ.

ಬೀದರ್ ಕಾಲೇಜಿನಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ:
ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಬೀದರ್‍ನ ನೂರ ಕಾಲೇಜಿನಲ್ಲಿ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕೋಣೆ ನಂಬರ್ 1, ಸಿಸಿ ಕ್ಯಾಮರಾ 10 ರಲ್ಲಿ ನಕಲಿಗೆ ಸಿಬ್ಬಂದಿಗಳು ಪ್ರೋತ್ಸಾಹ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವ್ಯಕ್ತಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ ನಕಲು ಮಾಡಲು ಸಹಕಾರ ಮಾಡುತ್ತಿದ್ದು ಜೊತೆಗೆ ವಾಟರ್‍ಬಾಯಿ ಕೂಡ ವಿದ್ಯಾರ್ಥಿಗಳಿಗೆ ಚೀಟಿಗಳನ್ನು ನೀಡಿ ಹೋಗುತ್ತಿರುವ ದೃಶ್ಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾನುವಾರ ಪಬ್ಲಿಕ್ ಟಿವಿ ಈ ಸುದ್ದಿಯನ್ನು ಪ್ರಸಾರ ಮಾಡಿತ್ತು.

rcr puc leak
ಅಕ್ರಮ ಎಸಗಿದ ಆರೋಪಿಗಳು ಪ್ರಾಂಶುಪಾಲ ಮಹೇಶ್, ಸಿಬ್ಬಂದಿ ಶರಣವಬಸವ, ಉಪನ್ಯಾಸಕ ಸಿದ್ದನಗೌಡ

First information received by dc Raichur at 12.30 2 hours after exam started. It's not a leak all students enter hall by 10.15

— Tanveer Sait INC (@TanveerSaitINC) March 13, 2017

1 page on watsapp. SP Raichur is investigating into the matter. It's a mischief by some miscreants we will find the culprit.

— Tanveer Sait INC (@TanveerSaitINC) March 13, 2017

ಪಬ್ಲಿಕ್ ಟಿವಿ ಜೊತೆ ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಮಾತನಾಡಿದ್ದು, ಅವರ ಹೇಳಿಕೆಯ ವಿಡಿಯೋ ಇಲ್ಲಿ ನೀಡಲಾಗಿದೆ.

https://www.youtube.com/watch?v=uLxQjBR3pXw

 

pu notice

PU PROTEST 1

PU PROTEST 2

TAGGED:karnatakapucquestion paperraichuruತನ್ವೀರ್ ಸೇಠ್ಪಿಯು ಲೀಕ್ಪಿಯುಸಿ ಪ್ರಶ್ನೆಪತ್ರಿಕೆಪೊಲೀಸ್ಮೊಬೈಲ್ರಾಯಚೂರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
9 minutes ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
23 minutes ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
2 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
2 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
3 hours ago
Virajpet Elephant
Districts

ವಿರಾಜಪೇಟೆ | ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?