Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

Districts

ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

Public TV
Last updated: September 28, 2024 7:23 pm
Public TV
Share
4 Min Read
DK Shivakumar 8
SHARE

ರಾಮನಗರ: ತಿಂಗಳಾಂತ್ಯದ ಶನಿವಾರದಲ್ಲಿ ಕ್ಷೇತ್ರ ಪ್ರವಾಸ ಹಮ್ಮಿಕೊಂಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಅವರು ಕಾರ್ಯಕ್ರಮದ ಭಾಷಣವೊಂದರಲ್ಲಿ ಮಾತನಾಡುತ್ತಾ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

DK Shivakumar 2 3

ಸ್ವಕ್ಷೇತ್ರದಲ್ಲಿಂದು ಪ್ರವಾಸ ಕೈಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಕನಕಪುರ ಟೌನ್ (Kanakapura Town) ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ, ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಬಳಿಕ ಸಂತೆಕೋಡಿಹಳ್ಳಿ ಬಳಿ ಮುಸ್ಲಿಂ ಸಮುದಾಯದ (Muslim Community) ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಸಾತನೂರು ಬಳಿ ಜನಸ್ಪಂದನಾ ಸಭೆ ನಡೆಸಿ, ಕ್ಷೇತ್ರದ ಜನರ ಕುಂದುಕೊರತೆಗಳನ್ನು ಆಲಿಸಿದರು. ಇದೇ ವೇಳೆ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ಬಳಿಕ ಮಾತನಾಡಿದ ಅವರು, ಕನಕಪುರದ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಪ್ರಯತ್ನ, ಹೋರಾಟ ಆಗ್ತಿದೆ. ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸ್ತವೆ. ಸದ್ಯ ನಾನು ಇಲ್ಲಿ ಡಿಸಿಎಂ (DCM) ಆಗಿ ಬಂದಿಲ್ಲ, ನಿಮ್ಮ ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ ಇಲ್ಲಿ ನೀವೆಲ್ಲ ನಮ್ಮ ಮನೆ ಮಕ್ಕಳು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಆಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್‌ನಲ್ಲಿ ವಿಷ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ತಿಂಗಳ ಕೊನೆಯ ಶನಿವಾರ ಕ್ಷೇತ್ರದ ಪ್ರವಾಸ ಮಾಡ್ತಿದ್ದೀನಿ. ಇಂದು ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನೆ ಮಾಡಿದ್ದೀನಿ. ಈ ಕಾಲೇಜು ಹಿಂದೆ ಮುನ್ಸಿಪಲ್ ಗ್ರೌಂಡ್ ಅತ್ರ ಇತ್ತು. ಅಲ್ಲಿ ಜಾಗದ ಸಮಸ್ಯೆ ಇದ್ದಿದ್ದರಿಂದ ಇಲ್ಲಿ ಒಳ್ಳೆಯ ವಾತಾವರಣದಲ್ಲಿ ಕಾಲೇಜು ನಿರ್ಮಾಣ ಆಗಿದೆ. ನಾನು ಒಂದು ಚಿತ್ರಗಳನ್ನ ತಯಾರಿಸಲು ಹೇಳಿದ್ದೇನೆ. ಈ ಹಿಂದೆ ಕನಕಪುರ ಹೇಗಿತ್ತು, ಈಗ ಕನಕಪುರ ಹೇಗಿದೆ? ನಾನು ಶಾಸಕನಾದ ಬಳಿಕ ಎಷ್ಟೆಲ್ಲಾ ಅಭಿವೃದ್ಧಿ ಆಗಿದೆ ಎಂಬುದನ್ನ ತಿಳಿಸಬೇಕು. ಕನಕಪುರ ಒಂದು ರೀತಿಯ ಎಜುಕೇಶನ್ ಕಾರಿಡಾರ್ ಆಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಯಾದಗಿರಿ | ವಿಷಕಾರಿ ನೀರು ಸೇವಿಸುತ್ತಿರುವ ತಾಂಡಾ ಗ್ರಾಮಸ್ಥರು – ಇಲ್ಲಿನ ಜನಕ್ಕಿಲ್ಲ ಶುದ್ಧ ಕುಡಿಯುವ ನೀರು

ಈಗಾಗಲೇ ಉತ್ತಮ ರಸ್ತೆಗಳು ನಗರಕ್ಕೆ ಇದೆ. ನಾನು ಡಿಸಿಎಂ ಆಗಿ ಇಲ್ಲಿ ಬಂದಿಲ್ಲ, ನಿಮ್ಮ ಶಾಸಕನಾಗಿ ಕೆಲಸ ಮಾಡ್ತಿದ್ದೆನೆ. ನೀವು ಕನಕಪುರದ ವಿದ್ಯಾರ್ಥಿಗಳಲ್ಲ. ನೀವು ಬೆಂಗಳೂರು ಜಿಲ್ಲೆಯ ಮಕ್ಕಳು. ನಿಮ್ಮ ಇತಿಹಾಸ ತೆಗೆದು ನೋಡಿ, ಸಂಗಮ, ಮೇಕೆದಾಟು ವರೆಗೂ ಬೆಂಗಳೂರು ಜಿಲ್ಲೆ. ಚನ್ನಪಟ್ಟಣ, ಮಾಗಡಿ ಎಲ್ಲವೂ ಬೆಂಗಳೂರಿಗೆ ಸೇರುತ್ತೆ. ಯಾವುದೊ ಕಾರಣಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಆಗಿತ್ತು ಆಷ್ಟೇ. ನಿಮ್ಮ ಕಾಂಪಿಟೇಷನ್ ಗ್ಲೋಬಲ್ ಮಟ್ಟದಲ್ಲಿ ಇರಬೇಕು. ಕನಕಪುರವನ್ನ ಏನು ಮಾಡಬೇಕು ಎಂಬುದನ್ನು ನಾನು ಬಾಯಿಬಿಟ್ಟು ಹೇಳಲ್ಲ. ಅದನ್ನ ಮಾಡಿ ತೋರಿಸುವ ಕೆಲಸ ಮಾಡ್ತೇನೆ ಎಂದು ಹೇಳಿದರು.

ನನಗೆ ಈಗಲೂ ಕಂಪ್ಯೂಟರ್ ಆಪರೇಟ್ ಮಾಡಲು ಬರಲ್ಲ. ನನಗೆ ಮೊಬೈಲ್ ನಲ್ಲಿ ಮೆಸೇಜ್ ಮಾಡಲು ಅಷ್ಟೇ ಬರುತ್ತೆ. ಆದ್ರೆ ನೀವು ಎಲ್ಲವನ್ನೂ ತಿಳಿದಿರುವ ಜನರೇಷನ್. ಎಲ್ಲರಿಗೂ ಮೊಬೈಲ್, ಕಂಪ್ಯೂಟರ್ ಬಳಸುವ ಬುದ್ಧಿ ಇದೆ. ದೇಶದಲ್ಲಿ ಅತಿಹೆಚ್ಚು ರೇಷ್ಮೆ ಬೆಳೆಯೋದು ನಾವೆ. ಕನಕಪುರದಲ್ಲಿ ಇರುವ ಡೇರಿ ಇಡೀ ದೇಶದಲ್ಲೇ ಇಲ್ಲ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಓದಬೇಕು. ನೀವು ಕೆವಲ ನೌಕರರಾಗಬಾರದು, 4 ಜನಕ್ಕೆ ನೌಕರಿ ಕೊಡುವವರಾಗಬೇಕು. ಸಮಾಜದಲ್ಲಿ ಯಾರು ಬೇಕಾದರೂ ಡಿ.ಕೆ.ಶಿವಕುಮಾರ್ ಆಗಬಹುದು. ಅದಕ್ಕೆ ನಿಮ್ಮ ತಳಹದಿ ಗಟ್ಟಿಯಾಗಿರಬೇಕು. ನೀವೆ ನಮ್ಮ ಆಸ್ತಿ ನಿಮ್ಮ ಬದುಕಿಗೆ ಒಳ್ಳೆಯದಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಗ ಖರೀದಿ ಮಾಡಿ ಸೈಟು ಕೊಡ್ತಿನಿ:
ಬಳಿಕ ಕನಕಪುರದ ಸಾತನೂರಿನಲ್ಲಿ ಜನಸ್ಪಂದನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಬೇಕು. ಅರ್ಧ ಅಭಿವೃದ್ಧಿ ಆಗಿದೆ, ಇನ್ನಷ್ಟು ಕೆಲಸ ಆಗಬೇಕು. ಜನ ನಿವೇಶನ ಕೇಳ್ತಿದ್ದಾರೆ, ಜಾಗ ಖರೀದಿ ಮಾಡಿ ನಿವೇಶನ ಕೊಡ್ತಿನಿ. ನನ್ನ ತಾಲೂಕಿನ ಸಂಪೂರ್ಣ ಡಾಕ್ಯುಮೆಂಟ್ ನನ್ನ ಹತ್ತಿರ ಇದೆ. ಈ ಹಿಂದೆ ಸಾತನೂರು ಹೇಗಿತ್ತು, ಈಗ ಹೇಗಿದೆ ನೋಡಿ. ಕನಕಪುರ, ದೊಡ್ಡಾಲಹಳ್ಳಿ, ಕೋಡಿಹಳ್ಳಿಗಳ ಚಿತ್ರಣ ಹೇಗಿತ್ತು ನೋಡಿ, ತಾಲೂಕು ಕಚೇರಿ, ರಸ್ತೆ ಎಲ್ಲವೂ ಅಭಿವೃದ್ಧಿ ಆಗಿದೆ. ಇದೆಲ್ಲವನ್ನೂ ಜನರಿಗೆ ತಿಳಿಸಬೇಕು. ಅದರಿಂದ ಈ ಬಗ್ಗೆ ಚಿತ್ರಗಳ ಮೂಲಕ ತಿಳಿಸುವ ಕೆಲಸ ಆಗುತ್ತೆ ಎಂದು ಭರವಸೆ ನೀಡಿದರು.

ಸಿಎಂ ಇಂಗಿತ ವಿಚಾರಕ್ಕೆ ಡಿಕೆಶಿ ಸ್ಪಷ್ಟನೆ:
ರಾಜ್ಯಕ್ಕೆ ಸೇವೆ ಮಾಡಲು ದೊಡ್ಡ ಪ್ರಯತ್ನ, ಹೋರಾಟ ಮಾಡ್ತಿದ್ದೀನಿ. ನಾನು ಆ ರೀತಿಯಲ್ಲಿ ಹೇಳಿಲ್ಲ. ನೀವೆಲ್ಲ ಸೇವೆ ಮಾಡೋಕೆ ಅವಕಾಶ ಕೊಡಿ ಎಂದಿದ್ದೇನೆ ಅಷ್ಟೇ. ನೀವು ಆ ರೀತಿ ಕಲ್ಪನೆ, ಸೃಷ್ಠಿ ಮಾಡೋದು ಬೇಡ. ನಾನು ಡಿಸಿಎಂ ಆಗಿ ರಾಜ್ಯದ ಸೇವೆ ಮಾಡ್ತಿದ್ದೀನಿ. ಇದನ್ನ ಮಕ್ಕಳಿಗೆ ತಿಳಿಸಬೇಕಲ್ಲ ಹಾಗಾಗಿ ಹೇಳಿದೆ ಎಂದು ಸಿಎಂ ಇಂಗಿತ ವಿಚಾರಕ್ಕೆ ಡಿಕೆಶಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಹೆಚ್ಚು ರೈತರ ಸಾವು: ಪ್ರಧಾನಿ ಮೋದಿ ಆರೋಪ 

TAGGED:chief ministercongressDK Shivakumarmuslim communityramanagaraಕಾಂಗ್ರೆಸ್ಡಿ.ಕೆ.ಶಿವಕುಮಾರ್ಮುಖ್ಯಮಂತ್ರಿಮುಸ್ಲಿಂ ಸಮುದಾಯದರಾಮನಗರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
8 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
14 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
28 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
29 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
43 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?