Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ

Latest

ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ

Public TV
Last updated: March 16, 2017 9:35 am
Public TV
Share
2 Min Read
3 states govt
SHARE

– ಉತ್ತರಪ್ರದೇಶ ಸಿಎಂ ಆಯ್ಕೆ ಇನ್ನೂ ವಿಳಂಬ

ನವದೆಹಲಿ: 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮುಳುಗಿ ಹೋಗುತ್ತಿರುವ ಹಡಗಿಗೆ ಆಸರೆಯಂತಿರುವ ಪಂಜಾಬ್‍ನಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‍ನಲ್ಲಿ ಮಾತ್ರ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದೆ. ರಾಜಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿಪಿ ಬಡ್ನೋರ್ ಪ್ರಮಾಣವಚನ ಬೋಧಿಸಲಿದ್ದಾರೆ. ನವಜೋತ್ ಸಿಂಗ್ ಸಿಧು, ಮನ್‍ಪ್ರೀತ್ ಸಿಂಗ್ ಬಾದಲ್ ಸೇರಿ ಒಟ್ಟು 9 ಮಂದಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. 117 ಸದಸ್ಯ ಬಲದ ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ 77 ಶಾಸಕರನ್ನು ಹೊಂದಿದೆ. ಆಮ್ ಆದ್ಮಿ ಪಾರ್ಟಿ 20, ಶಿರೋಮಣಿ ಅಕಾಲಿದಳ ಮತ್ತು ಬಿಜೆಪಿ ಮೈತ್ರಿಕೂಟ 15 ಶಾಸಕರನ್ನು ಹೊಂದಿದೆ.

ಮಂಗಳವಾರವಷ್ಟೇ ಗೋವಾದಲ್ಲಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ಹಣೆಬರಹ ಇವತ್ತು ನಿರ್ಧಾರವಾಗಲಿದೆ. ವಿಧಾನಸಭೆಯಲ್ಲಿ ನೂತನ ಸಿಎಂ ಮನೋಹರ್ ಪರಿಕ್ಕರ್ ಇಂದು ಬಹುಮತ ಸಾಬೀತುಪಡಿಸಬೇಕಿದೆ. 40 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ 17, ಬಿಜೆಪಿ 13, ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿ(ಎಂಜಿಪಿ), ಗೋವಾ ಫಾವರ್ಡ್(ಜಿಎಫ್‍ಪಿ) ಪಾರ್ಟಿ ತಲಾ ಮೂವರು ಶಾಸಕರನ್ನು ಹೊಂದಿದೆ. ಮೂವರು ಪಕ್ಷೇತರ ಮತ್ತು ಓರ್ವ ಎನ್‍ಸಿಪಿ ಶಾಸಕರಿದ್ದಾರೆ. ಇವರಲ್ಲಿ ಎಂಜಿಪಿ, ಜಿಎಫ್‍ಪಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸಿಕೊಂಡಿದೆ. ಇಬ್ಬರು ಪಕ್ಷೇತರರೂ ಬೆಂಬಲ ಸೂಚಿಸಿದ್ದಾರೆ. ಅಲ್ಲಿಗೆ ಅಗತ್ಯ ಸರಳ ಬಹುಮತದ ಸಂಖ್ಯೆ 21ನ್ನು ದಾಟುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. 8 ಮಂದಿ ಸಚಿವರಲ್ಲಿ ಎಂಜಿಪಿಯ ಇಬ್ಬರು, ಜಿಎಫ್‍ಪಿಯ ಮೂವರು ಮತ್ತು ಸ್ವತಂತ್ರ ಶಾಸಕರು ಸೇರಿದ್ದಾರೆ. ಈ ಮೂಲಕ ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುವ ಕಸರತ್ತನ್ನು ಬಿಜೆಪಿ ಮಾಡಿಕೊಂಡಿದೆ.

ಈ ನಡುವೆ ಅತೀ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಗೆ ಆಹ್ವಾನ ನೀಡಿರಲಿಲ್ಲ ಎಂದು ರಾಜ್ಯಪಾಲರ ವಿರುದ್ಧ ದೂರಿದ್ದ ಕಾಂಗ್ರೆಸ್ ಸುಪ್ರೀಂಕೋರ್ಟ್ ಕದ ತಟ್ಟಿತ್ತು. ಈ ಹಿನ್ನೆಲೆಯಲ್ಲಿ ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ನ್ಯಾಯಾಲಯ ಬಿಜೆಪಿಗೆ ಸೂಚಿಸಿತ್ತು.

ಸೀಟು ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದೆ. ಆದ್ರೆ ಕಂಡುಕೇಳರಿಯದ ಜಯದ ಬಳಿಕವೂ ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬವಾಗಿದೆ. ನಾಲ್ಕು ದಶಕಗಳ ಬಳಿಕ ಸಿಕ್ಕಿರುವ ಪ್ರಚಂಡ ಬಹುಮತದ ಹಿನ್ನೆಲೆಯಲ್ಲಿ ಸರ್ವ ಸಮುದಾಯಗಳನ್ನು ಓಲೈಸಬಲ್ಲ ಸಮರ್ಥ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸುವುದೇ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ನೂತನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಹೊಣೆ ಹೊತ್ತಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಭೂಪೇಂದರ್ ಯಾದವ್ ಶನಿವಾರದಷ್ಟೊತ್ತಿಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ ಕಟ್ಟಕಡೆಯ ಬಿಜೆಪಿ ಸಿಎಂ ಆಗಿರುವ ರಾಜನಾಥ್ ಸಿಂಗ್‍ರ ಹೆಸರು ಮುಂಚೂಣಿಯಲ್ಲಿದೆಯಾದರೂ ಅದರ ಬಗ್ಗೆ ಚರ್ಚೆಯೇ ಅಪ್ರಯೋಜಕ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಕುರಿತ ಚರ್ಚೆ ನಡೆಸದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ. ಮೂಲಗಳ ಪ್ರಕಾರ ನಾಳೆ ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಚಂಡ ಫಲಿತಾಂಶದ ನಂತರ ರಾಜ್ಯಕ್ಕೆ ಪ್ರಧಾನಿ ನೀಡುತ್ತಿರುವ ಮೊಟ್ಟ ಮೊದಲ ಭೇಟಿ ಇದಾಗಲಿದೆ. ಉತ್ತರಪ್ರದೇಶ ಜೊತೆಗೆ ಉತ್ತರಾಖಂಡ್‍ನಲ್ಲೂ ಅದ್ಭುತ ಬಹುಮತ ಸಿಕ್ಕಿದ್ದರೂ ಮುಖ್ಯಮಂತ್ರಿ ಯಾರೆಂಬುದು ಇನ್ನೂ ಖಾತ್ರಿಯಾಗಿಲ್ಲ.

TAGGED:Amarinder SinghbjpcmcongressgoaManohar ParikkarPublic TVpunjabUttarakhanduttarpradeshಅಮರಿಂದರ್ ಸಿಂಗ್ಉತ್ತರಪ್ರದೇಶಉತ್ತರಾಖಂಡ್ಕಾಂಗ್ರೆಸ್ಗೋವಾಪಂಜಾಬ್ಬಿಜೆಪಿಮನೋಹರ್ ಪರಿಕ್ಕರ್ಸಿಎಂ
Share This Article
Facebook Whatsapp Whatsapp Telegram

Cinema news

Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories

You Might Also Like

Tumakuru Suicide
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
2 minutes ago
Delhi Police 1
Latest

ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Public TV
By Public TV
7 minutes ago
supreme Court 1
Court

NCERT ಪಠ್ಯ ವಿವಾದ| ಸುಪ್ರೀಂ ಮುಂದೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ

Public TV
By Public TV
8 minutes ago
Siddaramaiah Cycle
Bellary

ಸಿದ್ದರಾಮಯ್ಯ ಸರ್ಕಾರದಿಂದ್ಲೂ ಕಳಪೆ ಸೈಕಲ್ – ಟೈಯರ್ ಕಿತ್ತು, ಬೆಂಡ್ ಆಗಿ ಮೂರೇ ತಿಂಗಳಲ್ಲಿ ದುರಸ್ತಿಗೆ

Public TV
By Public TV
44 minutes ago
JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
2 hours ago
Kolar Suicide
Crime

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?