Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಉದ್ಘಾಟನೆ ವೇದಿಕೆ ರಾಜಕೀಯವಾಗಿ ಬಳಸಿದ ಸಿಎಂ; ಜಿಟಿಡಿ ಹೇಳಿಕೆ ಸಿಎಂ ಓಲೈಕೆಗಾಗಿ – ಛಲವಾದಿ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಸರಾ ಉದ್ಘಾಟನೆ ವೇದಿಕೆ ರಾಜಕೀಯವಾಗಿ ಬಳಸಿದ ಸಿಎಂ; ಜಿಟಿಡಿ ಹೇಳಿಕೆ ಸಿಎಂ ಓಲೈಕೆಗಾಗಿ – ಛಲವಾದಿ ನಾರಾಯಣಸ್ವಾಮಿ

Bengaluru City

ದಸರಾ ಉದ್ಘಾಟನೆ ವೇದಿಕೆ ರಾಜಕೀಯವಾಗಿ ಬಳಸಿದ ಸಿಎಂ; ಜಿಟಿಡಿ ಹೇಳಿಕೆ ಸಿಎಂ ಓಲೈಕೆಗಾಗಿ – ಛಲವಾದಿ ನಾರಾಯಣಸ್ವಾಮಿ

Public TV
Last updated: October 4, 2024 4:46 pm
Public TV
Share
2 Min Read
chalavadi narayanaswamy 1
SHARE

ಬೆಂಗಳೂರು: ಮೈಸೂರು ದಸರಾ (Mysuru Dasara) ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇವಲ ಮುಡಾ ವಿಚಾರದ ಜಪ ಮಾಡುತ್ತ ತಾವು ಮಾಡಿದ ತಪ್ಪುಗಳನ್ನು ಇಲ್ಲ, ಇಲ್ಲ ಎಂಬ ರೀತಿ ಭಾಷಣ ಮಾಡಿದ್ದಾರೆ. ಜೊತೆಯಲ್ಲಿ ಇರುವವರನ್ನು ಪ್ರೇರೇಪಿಸಿ ಪ್ರಮಾಣಪತ್ರ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಇದು ರಾಜ್ಯದ ಜನತೆಗೆ ಮಾಡಿದ ಅಪಮಾನ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ಷೇಪಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಇದೊಂದು ನಾಚಿಕೆಗೇಡಿನ ಸಂಗತಿ. ಇಂಥ ವೇದಿಕೆಗಳನ್ನು ತಮ್ಮ ರಾಜಕೀಯ ತೆವಲನ್ನು ತೀರಿಸಿಕೊಳ್ಳಲು ಬಳಸಿಕೊಳ್ಳಬಾರದು. ರಾಜ್ಯ ಕನ್ನಡಕ್ಕೆ ಕೊಡುಗೆ ಕೊಟ್ಟ ಮುತ್ಸದ್ದಿಗಳಿಂದ ದಸರಾ ಉತ್ಸವ ಉದ್ಘಾಟಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ‌ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್‌ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

cm siddaramaiah 3

ದಸರಾ ಸಡಗರ ನಿನ್ನೆಯಿಂದ ಪ್ರಾರಂಭವಾಗಿದೆ. ಮೈಸೂರಿನ ವೈಭವ, ಮೈಸೂರು ರಾಜರ ಕೊಡುಗೆ, ರಾಜ್ಯದ ಇತಿಹಾಸ ಸ್ಮರಣೆ, ಚಾಮುಂಡಿ ತಾಯಿಯ ವಿಚಾರ ಸ್ಮರಿಸಬೇಕಿತ್ತು ಎಂದರು. ಕಾಂಗ್ರೆಸ್ಸಿನ (Congress) ಪ್ರಮುಖರಾದ ಪರಮೇಶ್ವರ್, ಕೃಷ್ಣಬೈರೇಗೌಡ, ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ ಅವರು ಪತ್ರಿಕಾಗೋಷ್ಠಿ ಮಾಡಿದ್ದರು. ಅವರು ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ. ಆರ್.ಅಶೋಕ್ ಅವರು ವಿಪಕ್ಷ ನಾಯಕರಾಗಿದ್ದು, ಹಿಂದೆ ಆದ ಘಟನೆಯನ್ನು ತೆಗೆದು ಅವರು ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ. ಸತ್ತು ಹೋದ ಕಥೆಯನ್ನು ತೆಗೆದು ಏನು ರಾಜೀನಾಮೆ ಕೇಳುತ್ತೀರಿ? ಮುಡಾ ಕೇಸಿಗೂ ಈ ಮುಗಿದು ಹೋದ ಕಥೆಗೂ ನೀವು ತಾಳೆ ಹಾಕುತ್ತಿದ್ದೀರಿ ಎಂದು ಟೀಕಿಸಿದರು. ಇದನ್ನೂ ಓದಿ: 5,600 ಕೋಟಿ ಮೌಲ್ಯದ ಕೊಕೇನ್ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡ – ನಾಚಿಕೆಗೇಡು ಎಂದ ಅಮಿತ್ ಶಾ

ಇದು ಸರಿಯಾದ ರೀತಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದ ಅವರು, ಮುಡಾ ಕೇಸಿನಲ್ಲಿ (MUDA Scam Case) ತನಿಖೆಗೆ ಎರಡು ಕೋರ್ಟ್‌ಗಳ ಆದೇಶ ಆಗಿದೆ. ಇಡಿ ಈಗಾಗಲೇ ಅದರಲ್ಲಿ ಪ್ರವೇಶ ಆಗಿದೆ. ನೀವು ಸೈಟ್‌ಗಳನ್ನು ವಾಪಸ್ ಕೊಟ್ಟರೂ ಒಂದೇ, ಕೊಡದಿದ್ದರೂ ಒಂದೇ. ಮುಡಾದವರು ಈ ಸೈಟ್‌ಗಳನ್ನು ವಾಪಸ್ ಪಡೆಯಬಾರದಿತ್ತು. ಕೋರ್ಟಿನಲ್ಲಿರುವಾಗ ಮುಡಾ ಮಾಡಿರುವುದು ಕೂಡ ತಪ್ಪೇ ಆಗಿದೆ. ಆರ್.ಅಶೋಕ್ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಮುಡಾ ವಿಚಾರದಲ್ಲಿ ತನಿಖೆ ಆಗಲಿದೆ. ಮುಖ್ಯಮಂತ್ರಿಗಳು ಇದರಲ್ಲಿ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್

ಎಚ್‌ಡಿಕೆ ವಿರುದ್ಧ ಕೇಸಿನ ಕುರಿತು ಮಾತನಾಡಿದ ಅವರು, ಇದು ಕಾಂಗ್ರೆಸ್ ಸಂಸ್ಕೃತಿ. ಖೆಡ್ಡಾ ತೋಡಿ ಕೆಲವರನ್ನು ಹಳ್ಳಕ್ಕೆ ಬೀಳಿಸುವ ಕೆಲಸ ಪ್ರಾರಂಭ ಮಾಡಿದ್ದಾರೆ ಬಿಜೆಪಿ- ಜೆಡಿಎಸ್ ಅಂದರೆ ಎನ್‌ಡಿಎ ಮಿತ್ರಕೂಟದ ಮೇಲೆ ಆರೋಪ ಹೊರಿಸಲು ಕಾಂಗ್ರೆಸ್ಸಿನಲ್ಲಿ ಒಂದು ಪಡೆಯೇ ಸಿದ್ಧವಾಗಿದೆ. ಎರಡೂ ಪಕ್ಷದ ಮುಖಂಡರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ

TAGGED:bengaluruchalavadi narayanaswamycm siddaramaiahmysuru dasaraಛಲವಾದಿ ನಾರಾಯಣಸ್ವಾಮಿಬೆಂಗಳೂರುಮೈಸೂರು ದಸರಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
45 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
1 hour ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
1 hour ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
2 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
2 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?