Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಸಿಎಂ ಬದಲಾವಣೆ ಅವಸರದಲ್ಲಿದ್ದಾರೆ- ಬಸವರಾಜ ಬೊಮ್ಮಾಯಿ

Public TV
Last updated: October 7, 2024 3:48 pm
Public TV
Share
3 Min Read
Basavaraj Bommai 1
SHARE

ಗದಗ: ಕಾಂಗ್ರೆಸ್ (Congress) ಆಡಳಿತ ಪಕ್ಷದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ. ಕಳೆದ 1 ತಿಂಗಳಿಂದ ಹಿರಿಯ ಸಚಿವರ ಚಟುವಟಿಕೆ ಗಮನಿಸಿದಾಗ, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಮುಖ್ಯಮಂತ್ರಿಗಳ ಬದಲಾವಣೆ ಅವಸರದಲ್ಲಿದ್ದಾರೆ ಅಂತ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನಗರದ ಸರಾಫ್ ಬಜಾರ್‌ನಲ್ಲಿರುವ ಅಂಬಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಿನ ಮುಖ್ಯಮಂತ್ರಿಯನ್ನು ತೆಗೆದರೆ ತಮಗೆ ಅವಕಾಶ ಇದೆ ಎಂದು ಅವರದ್ದೇ ಪಕ್ಷದ ಬಹಳ ಹಿರಿಯ ಸಚಿವರು ಅಂದುಕೊಂಡಿದ್ದಾರೆ. ಮುಂದೆ ನಮ್ಮ ಸರ್ಕಾರ ಬರೋದಿಲ್ಲ ಎಂಬುದು ಅವರಿಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಒಟ್ಟು ಪರಿಣಾಮದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಸ್ಥಗಿತವಾಗಿದೆ ಎಂದರು. ಇದನ್ನೂ ಓದಿ: Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಯಾವುದಕ್ಕೂ ಹಣ ಬಿಡುಗಡೆ ಆಗುತ್ತಿಲ್ಲ. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ಇದರಿಂದ ರಾಜ್ಯ ಇನ್ನಷ್ಟು ಹಿನ್ನಡೆ ಆಗುತ್ತಿದೆ. ಕಳೆದ 2-3 ತಿಂಗಳಿಂದ ಹಗರಣಗಳ ಸುರಿಮಳೆ ಆಗುತ್ತಿದೆ. ಮುಡಾ ಹಗರಣದಲ್ಲಿಯೇ (MUDA Scam) ಕಾಲ ಕಳೆದು ಹೊಯ್ತು. ಇಂತಹ ಒಂದು ಸರ್ಕಾರ ಪಡೆದುಕೊಂಡಿದ್ದು ಕರ್ನಾಟಕದ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಜಾತಿಗಣತಿ ವರದಿ ಬಗ್ಗೆ ಅಭಿಪ್ರಾಯ ಹೇಳ್ತೀನಿ – ಈಶ್ವರ್ ಖಂಡ್ರೆ

ವಿಜಯೇಂದ್ರವರು (B Y Vijayendra) ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿ, ಅವರ ಬೇರೆ ಕೆಲಸಗಳಿಗೆ ಭೇಟಿ ಆಗಿರಬಹುದು. ಈ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನ ನಾವು ಮಾಡುತ್ತಿಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ವಿನಹ ಈ ಸರ್ಕಾರ ಅಭದ್ರಗೊಳಿಸುವಂತಹದ್ದು ಯಾವುದು ಇಲ್ಲ. ದಸರಾ (Dasara) ನಂತರ ಸಿಎಂ ಬದಲಾವಣೆ ಆಗ್ತಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ಲೆಕ್ಕಾಚಾರ ಇರಬಹುದು. ಆದ್ರೆ ಸಿಎಂ ಆತ್ಮಸಾಕ್ಷಿಯ ಬಗ್ಗೆ ಮಾತನಾಡ್ತಾರೆ. ಅವರ ಮಾತುಗಳ ನೋಡಿದಾಗ ರಾಜೀನಾಮೆ ಕೊಡಲು ಮಾನಸಿಕವಾಗಿ ತಯಾರು ಆಗಿದ್ದಾರೆ ಅನಿಸುತ್ತೆ ಎಂದರು. ಇದನ್ನೂ ಓದಿ: ಸಿಎಂ ಹುದ್ದೆ ಕನಸು ಕಂಡರೆ ಹೇಳುವೆ, ಸದ್ಯಕ್ಕೆ ಬೇಡ – ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ವಿಜಯೇಂದ್ರ

ಜಾತಿಗಣತಿ ಬಿಡುಗಡೆ ವಿಚಾರದಲ್ಲಿ ಬಿ.ಕೆ ಹರಿಪ್ರಸಾದ್ ಹೇಳಿಕೆ ನೋಡಿದ್ರೆ ಅವರ ಮನದಾಳದ ಮಾತು ಹೇಳಿದ್ದಾರೆ. ಜಾತಿಗಣತಿ ಬರುವುದು ಮುಖ್ಯನಾ? ಸರ್ಕಾರ ಬಿಳುವುದು ಮುಖ್ಯನಾ ಅನ್ನುವುದನ್ನು ಅವರೇ ಸ್ಪಷ್ಟೀಕರಣ ಕೊಡಬೇಕು ಎಂದರು. ನಿಖರವಾಗಿ ಜಾತಿಗಣತಿ ಆದೇಶ ಅದರಲ್ಲಿ ಇಲ್ಲ. ಕಾಂತರಾಜ್ ಕೊಟ್ಟ ವರದಿ ಆಗ ಸ್ವೀಕರಿಸಲಿಲ್ಲ. 2018 ರಲ್ಲಿ ವರದಿ ಕೊಟ್ಟಿದ್ರು ಆಗ ಯಾಕೆ ಮಾಡಲಿಲ್ಲ? ಯಾಕೆ ಪೆಂಡಿಂಗ್ ಇಟ್ರು? ಜಯಪ್ರಕಾಶ್ ಹೆಗ್ಡೆ 2-3 ತಿಂಗಳಲ್ಲಿ ಹೇಗೆ ವರದಿ ಕೊಡ್ತಾರೆ ಎಂದು ಪ್ರಶ್ನಿಸಿದರು. ಅವರು ಮೂರು ವರ್ಷ ಡೇಟಾ ತೆಗೆದುಕೊಂಡಿದ್ರು. ಇವರು ಏನಿಲ್ಲದೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ತೇಪೆ ಹಚ್ಚಿದ ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಅಭಿವೃದ್ಧಿ ಮಾಡ್ತೆವಿ ಅಂತಿದ್ದಾರೆ. ಇದು ಬಹಳ ಗೊಂದಲವಿದೆ, ಈ ಗೊಂದಲ ಸ್ಪಷ್ಟವಾಗಬೇಕು. ಅದಕ್ಕಾಗಿ ಜಾತಿಗಣತಿ ಬಿಡುಗಡೆ ಮಾಡ್ರಿ ಅಂತ ನಾನು ಹೇಳಿದ್ದೆನೆ ಎಂದು ಹೇಳಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ| ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ- 7 ಮಂದಿ ಸಾವು, ಹಲವರಿಗೆ ಗಾಯ

ಕಾಂಗ್ರೆಸ್ ಪಕ್ಷದಲ್ಲಿಯೇ ಮೊದಲಿಂದಲೂ ವಿರೋಧವಿದೆ. ಡಿಕೆ ಶಿವಕುಮಾರ್, ಶಾಮನೂರು ಶಿವಶಂಕ್ರಪ್ಪ, ಎಂ.ಬಿ ಪಾಟೀಲ ಎಲ್ಲರು ಮಾಹಿತಿ ಕೊಟ್ಟಿದ್ದಾರೆ. ಅವರಿಲ್ಲಿಯೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ. ಎಲ್ಲಾ ಗೊಂದಲ ನಿವಾರಣೆ ಮಾಡಿ ಜಾತಿಗಣತಿ ಆದಷ್ಟು ಬೇಗನೆ ಹೊರಗೆ ಬರಲಿ. ಇನ್ನು ಉಪಚುನಾವಣೆ ಕುರಿತು ಚನ್ನಪಟ್ಟಣದಲ್ಲಿ ಮೈತ್ರಿ ಗೊಂದಲ ನಿವಾರಣೆ ಆಗುತ್ತೆ. ಕಾಯ್ದು ನೋಡಿ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಕೇಳೋ ಮೊದಲು ವಿಜಯೇಂದ್ರ ರಾಜೀನಾಮೆ ನೀಡಲಿ: ಈಶ್ವರ್ ಖಂಡ್ರೆ

ಈ ವೇಳೆ ಬಿಜೆಪಿ (BJP) ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಅನಿಲ ಅಬ್ಬಿಗೇರಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು. ಇದನ್ನೂ ಓದಿ: ವಿಜಯೇಂದ್ರ ಏನು ಹೈಕಮಾಂಡಾ? – ಸಿಎಂ ರಾಜೀನಾಮೆ ಹೇಳಿಕೆಗೆ ಜಮೀರ್ ತಿರುಗೇಟು

TAGGED:B.Y vijayendraBasavraj BommaicongressGadagaಕಾಂಗ್ರೆಸ್ಗದಗಬಸವರಾಜ ಬೊಮ್ಮಾಯಿವಿಜಯೇಂದ್ರ
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
4 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
7 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
7 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
21 hours ago

You Might Also Like

RCB Rain chinnaswamy stadium bengaluru
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ -ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

Public TV
By Public TV
40 minutes ago
HD Revanna
Districts

ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತಾ? – ಎಂ.ಸಿ ಸುಧಾಕರ್ ವಿರುದ್ಧ ರೇವಣ್ಣ ಗರಂ

Public TV
By Public TV
48 minutes ago
Kolar Death copy
Crime

Kolar | ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ಸಾವು

Public TV
By Public TV
54 minutes ago
BrahMos Missile 2
Latest

Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?

Public TV
By Public TV
54 minutes ago
Sharanu Salagar
Bidar

ಡಿಕೆಶಿಗೆ ಮಾನ, ಮರ್ಯಾದೆ ಇದ್ರೆ ಕೂಡ್ಲೇ ಮಂಜುನಾಥ್ ಉಚ್ಚಾಟಿಸಿ: ಶರಣು ಸಲಗರ್

Public TV
By Public TV
1 hour ago
isro
Latest

ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?