Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

Public TV
Last updated: October 7, 2024 9:59 pm
Public TV
Share
3 Min Read
CM Meeting 2
SHARE

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು (Government Posts) ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು… pic.twitter.com/N7wszRQBct

— CM of Karnataka (@CMofKarnataka) October 7, 2024

ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಿದರು. ಸಚಿವರಾದ ಜಿ.ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್, ಡಾ.ಶರಣ ಪ್ರಕಾಶ ಪಾಟೀಲ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Government Department Posts) ಭರ್ತಿಗೆ ಸೂಚನೆ ನೀಡಲಾಯಿತು.

CM Meeting

ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು. ಇದನ್ನೂ ಓದಿ: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು. ಇದನ್ನೂ ಓದಿ: 8ನೇ ಬಾರಿ ಆರೋಪಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ- ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಕೊಳ್ಳಿ: ಪತಿಗೆ ಕಿವಿಮಾತು

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಂಬಂಧಪಟ್ಟ ಇಲಾಖಾ ಸಚಿವರಿಗೆ ಸೂಚಿಸಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

TAGGED:bengaluruGovernment DepartmentGovernment PostsKDP meetingrecruitmentsiddaramaiahಕೆಡಿಪಿ ಸಭೆಬೆಂಗಳೂರುಸರ್ಕಾರಿ ಇಲಾಖೆಸರ್ಕಾರಿ ಹುದ್ದೆಗಳ ನೇಮಕಾತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
1 hour ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
3 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 day ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago

You Might Also Like

sahana family compensation
Kolar

ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

Public TV
By Public TV
15 minutes ago
Basangouda Patil Yatnal 1
Bengaluru City

ಕಾಲ್ತುಳಿತ ಕೇಸಲ್ಲಿ ಗೋವಿಂದರಾಜು ಬಂಧಿಸಬೇಕು, ಸಿಎಂ & ಡಿಸಿಎಂ ರಾಜೀನಾಮೆ ಕೊಡ್ಬೇಕು: ಯತ್ನಾಳ್‌ ಆಗ್ರಹ

Public TV
By Public TV
48 minutes ago
Hampi Matanga Hills
Bellary

ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ – ಪೊಲೀಸರು, ಟೂರಿಸ್ಟ್ ಹೆಲ್ಪ್‌ಲೈನ್‌ ತಂಡದಿಂದ ರಕ್ಷಣೆ

Public TV
By Public TV
54 minutes ago
siddaramaiah 6
Districts

ಏನು ತಪ್ಪು ಮಾಡಿದ್ದಾರೆ ಅಂತ ಕ್ರಮ ಕೈಗೊಳ್ಳಬೇಕು: ಸತ್ಯವತಿಗೆ ಕ್ಲೀನ್‌ಚಿಟ್‌ ಕೊಟ್ಟ ಸಿಎಂ

Public TV
By Public TV
2 hours ago
Adampur airbase not battle damage
Latest

ಭಾರತದ ವಾಯುನೆಲೆಗಳನ್ನು ಹೊಡೆದಿದ್ದೇವೆ: ನಕಲಿ ಉಪಗ್ರಹ ಚಿತ್ರ, ದೃಶ್ಯ ಹಂಚಿಕೊಂಡು ಮತ್ತೆ ಬೆತ್ತಲಾದ ಪಾಕ್‌

Public TV
By Public TV
2 hours ago
Siddaramaiah 4
Districts

ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: ಸಿದ್ದರಾಮಯ್ಯ ಪ್ರಶ್ನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?