Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ

Belgaum

ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ

Public TV
Last updated: October 8, 2024 1:34 pm
Public TV
Share
3 Min Read
Krishna Byre Gowda
SHARE

ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನಿಸುತ್ತಿದ್ದಾರೋ ಅದು ಅವರ ವೈಯಕ್ತಿಕ ವಿಚಾರ ಬಿಟ್ಟರೆ. ಪಕ್ಷದ ಹಂತದಲ್ಲಿ ಯಾವುದೇ ರೀತಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ಹೈಕಮಾಂಡ್‌ನಿಂದ ಹಿಡಿದು ಎಲ್ಲರೂ ಸಿದ್ದರಾಮಯ್ಯ (CM Siddaramaiah) ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅಭಿಪ್ರಾಯ ಪಟ್ಟರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ನಾಯಕರು ಭೇಟಿ ಆಗುತ್ತಿರುವ ವಿಚಾರಕ್ಕೆ ಕಿತ್ತೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅವರವರ ಪ್ರಯತ್ನ, ಆಸೆ. ಅದು ಅವರಿಗೆ ಬಿಟ್ಟಿದ್ದು. ಅದು ತಪ್ಪು ಏನೂ ಅಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ. ಇದರಲ್ಲಿ ವ್ಯಯಕ್ತಿಕವಾಗಿ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

siddaramaiah 1 2

ಒಳ್ಳೆಯ ಕೆಲಸಗಾರ ಎಂದು ಗುರುತಿಸಿಕೊಂಡಿರುವ ತಮ್ಮ ಹೆಸರು ಸಿಎಂ ರೇಸ್‌ನಲ್ಲಿ ಬರಬಹುದಾ ಎಂಬ ಪ್ರಶ್ನೆಗೆ ಜನ ನನ್ನ ಆರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ (Congress) ಪಕ್ಷ ಮೂರು ಬಾರಿ ಮಂತ್ರಿ ಮಾಡಿದೆ. ನನ್ನ ತಂದೆ ತಾಯಿ ಪುಣ್ಯ ನನಗೆ ಸಿಕ್ಕಿದೆ. ಇದಕ್ಕಿಂತ ಇನ್ನೇನು ನನಗೆ ಬೇಕು. ಐದು ವರ್ಷ ಕೃಷಿ ಮಂತ್ರಿಯಾಗಿದ್ದೆ.ಪಂಚಾಯತರಾಜ್ ಇಲಾಖೆ ನಿರ್ವಹಿಸಿದ್ದೇನೆ. ಈಗ ಕಂದಾಯ ಸಚಿವನಾಗಿದ್ದೇನೆ. ಕೈ ತುಂಬಾ ಕೆಲಸ ಇದೆ. ದಿನದ 24 ಗಂಟೆ ಅಲ್ಲ, 48 ಗಂಟೆ ಇದ್ದರೂ ಸಾಕಾಗುವುದಿಲ್ಲ. ಇರುವುದರಲ್ಲಿ ಜನರಿಗೆ ಒಳ್ಳೆಯ ಕೆಲಸ ಮಾಡಿದರೆ ಅದೇ ನನಗೆ ಸೌಭಾಗ್ಯ. ಎಐಸಿಸಿ ಅಧ್ಯಕ್ಷರು, ಸಿಎಂ ಸೇರಿ ಎಲ್ಲರಿಂದ ಒಳ್ಳೆಯ ಗೌರವ ಸಿಕ್ಕಿದೆ. ಏನೆಲ್ಲಾ ಸಿಗಬೇಕೋ ಅದೆಲ್ಲವೂ ಸಿಕ್ಕಿದೆ. ಹಾಗಾಗಿ, ಏನೋ ಗೊಂದಲ ಎನ್ನುತ್ತಿದ್ದಿರಿ. ಆದರೆ, ನಾನು ಎಲ್ಲಾ ಕಡೆ ಓಡಾಡಿ ಕೆಲಸ ಮಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: Haryana Results| ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

 

ಹರಿಯಾಣ (Haryana) ಮತ್ತು ಜಮ್ಮುವಿನಲ್ಲಿ (Jammu) ಕಾಂಗ್ರೆಸ್ ನೇತೃತ್ವದ ಘಟಬಂಧನ್‌ಗೆ ಬಹುಮತ ಸಿಕ್ಕಿರೋದು ಸಂತೋಷದ ವಿಷಯ. ರಾಹುಲ್ ಗಾಂಧಿ (Rahul Gandhi) ಹಾಗೂ ಖರ್ಗೆಯವರಿಗೆ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಹೋರಾಟ ನಡೆದು ಬಂದಿದೆ. ದೇಶದಲ್ಲಿ ಕೆಲವೇ ಕೆಲವು ಶ್ರೀಮಂತರಿಗೆ ಅನುಕೂಲ ಆದರೆ ಸಾಲದು. ಜನಸಾಮಾನ್ಯರಿಗೆ ಅನುಕೂಲ ಆಗಬೇಕು. ದೇಶದಲ್ಲಿ ಉದ್ಯೋಗ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಇದರ ವಿರುದ್ಧ ರಾಹುಲ್ ಗಾಂಧಿ ಹೋರಾಟ ನಡೆಸಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ಮಿತ್ರ ಪಕ್ಷಗಳಿಗೆ ನೀಡಿವೆ. ಅದಕ್ಕಿಂತಲೂ ಹೆಚ್ಚಿನ ಬೆಂಬಲ ಈ ಚುನಾಚಣೆಯಲ್ಲಿ ದೊರೆತಿದೆ. ದೇಶದಲ್ಲಿ ಬದಲಾವಣೆ ಗಾಳಿ ಬೀಸ್ತಿರೋದು ಬಲ ಆಗ್ತಿರೋದಕ್ಕೆ ಇದು ಸಾಕ್ಷಿ ಎಂದರು. ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

ಮಹಾರಾಷ್ಟ್ರ ಚುನಾವಣೆ ಬರುತ್ತಿದೆ, ಅಲ್ಲೂ ಸಹ ನಮಗೆ ಬಹುಮತ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ದೇಶದಲ್ಲಿ ಬಡವರ ವಿರೋಧಿ ಸರ್ಕಾರದ ಇದೆ. ಬಡವರು, ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ. ಕೆಲವೇ ಕೆಲವು ಅಂಬಾನಿ ಅದಾನಿತಂತವರಿಗೆ ಬಿಜೆಪಿ ಕೆಲಸ ಮಾಡ್ತಿದೆ. ಹೀಗಾಗಿಯೇ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇವತ್ತು ದೇಶದಲ್ಲಿ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

ಬದಲಾವಣೆಗೆ ಕರ್ನಾಕಟವೇ ಮುನ್ನುಡಿ ಆಯಿತಾ ಎಂಬ ಪ್ರಶ್ನೆಗೆ, ಇದು ಕಾಲದ ಚಕ್ರ ಬದಲಾವಣೆ ಜಗದ ನಿಯಮ. ಯಾರಿಗೂ ಅವನತಿ ಅಂತ ಹೇಳೋದಿಲ್ಲ. ಶ್ರೀಮಂತರ ಪರವಾಗಿ ಬಿಜೆಪಿ (BJP) ಕೆಲಸ ಮಾಡ್ತಿದೆ. ಸಾಮಾನ್ಯ ಭಾರತೀಯರ ಹಿತವನ್ನು ಕೈಬಿಟ್ಟಿದೆ. ಅದರ ವಿರುದ್ಧವಾಗಿ ಜನ ಇವತ್ತು ಒಂದಾಗಿದ್ದಾರೆ. ಹೊಟ್ಟೆಪಾಡಿನ ವಿಷಯಗಳನ್ನು ಬಿಜೆಪಿಯವರು ಮುಚ್ಚಿ ಹಾಕಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡ್ತಾರೆ. ಅದಕ್ಕೂ ಒಂದು ಕಾಲ ಇತ್ತು ಆದರೆ ಈಗ ಜನ ಜಾಗೃತರಾಗಿದ್ದಾರೆ. ಹೊಟ್ಟೆ ಪಾಡಿನ ವಿಷಯಗಳು ಮತ್ತೆ ಮುನ್ನೆಲೆಗೆ ಬಂದಿವೆ. ನಿಜವಾದ ಜೀವನದ ಅಂಶಗಳು ಮತ್ತು ಹೊಟ್ಟೆ ಪಾಡಿನ ವಿಷಯಗಳ ಮೇಲೆ ರಾಜಕೀಯ ನಡೆಯುತ್ತದೆ. ಅಲ್ಲಿವರೆಗೆ ಪ್ರಜಾಪ್ರಭುತ್ವ ಚೆನ್ನಾಗಿರುತ್ತದೆ. ಅದು ಬಿಟ್ಟು ಹೊಟ್ಟೆ ಪಾಡಿಗೆ ಅನ್ಯಾಯ ಮಾಡಿ ಮನಸ್ಸನ್ನು ಡೈವರ್ಟ್ ಮಾಡಿದರೆ ಜನರಿಗೆ ಅನ್ಯಾಯ ಆಗುತ್ತದೆ. ಇವತ್ತು ಅದರ ವಿರುದ್ಧವಾಗಿ ಬದಲಾವಣೆ ಆಗುತ್ತಿವೆ. ಮುಂದೆ ಎಲ್ಲಿ ಹೋಗುತ್ತದೆ ನೋಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

TAGGED:belagavibjpcm siddaramaiahcongressHaryana Election ResultJammu and Kashmirkrishna byre gowdaಕಾಂಗ್ರೆಸ್ಕೃಷ್ಣಭೈರೇಗೌಡಚುನಾವಣೆಜಮ್ಮು ಕಾಶ್ಮೀರಬೆಳಗಾವಿಸಿದ್ದರಾಮಯ್ಯಹರಿಯಾಣ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
17 minutes ago
5 6 Small Pieces Of Bones Coin Like Item Found During Excavation In Lakkundi Village
Districts

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Public TV
By Public TV
38 minutes ago
Donald Trump 2
Latest

ಗ್ರೀನ್‌ಲ್ಯಾಂಡ್‌ ನಮಗೆ ಬೇಕು, ತಕ್ಷಣವೇ ಡೆನ್ಮಾರ್ಕ್‌ ಮಾತುಕತೆ ನಡೆಸಬೇಕು: ಟ್ರಂಪ್‌ ಅಬ್ಬರ

Public TV
By Public TV
1 hour ago
Congress MLA Sivaganga Basavaraj
Davanagere

ತಾಳ್ಮೆಗೂ ಒಂದು ಮಿತಿ ಇದೆ – ಅಧಿಕಾರ ಹಸ್ತಾಂತರ ವಿಚಾರ ವರಿಷ್ಠರು ಸ್ಪಷ್ಟಪಡಿಸಬೇಕು: ಶಿವಗಂಗಾ ಬಸವರಾಜ್‌

Public TV
By Public TV
1 hour ago
T20 World Cup ICC votes to replace Bangladesh if it doesnt play in India
Cricket

ಭಾರತಕ್ಕೆ ಬರದಿದ್ದರೆ ವಿಶ್ವಕಪ್‌ನಿಂದ ಔಟ್‌ – ಬಾಂಗ್ಲಾಗೆ ಐಸಿಸಿ ವೋಟು ಏಟು

Public TV
By Public TV
2 hours ago
Man killed by Bihari laborers in Chikkamagaluru 1
Chikkamagaluru

ಚಿಕ್ಕಮಗಳೂರು | ಬಾರ್‌ನಲ್ಲಿ ಗಲಾಟೆ – ವ್ಯಕ್ತಿಯನ್ನು ಕೊಂದು ಬಯಲಲ್ಲಿ ಎಸೆದ ಬಿಹಾರಿ ಕಾರ್ಮಿಕರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?