Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ

Public TV
Last updated: October 8, 2024 1:34 pm
Public TV
Share
3 Min Read
Krishna Byre Gowda
SHARE

ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನಿಸುತ್ತಿದ್ದಾರೋ ಅದು ಅವರ ವೈಯಕ್ತಿಕ ವಿಚಾರ ಬಿಟ್ಟರೆ. ಪಕ್ಷದ ಹಂತದಲ್ಲಿ ಯಾವುದೇ ರೀತಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ಹೈಕಮಾಂಡ್‌ನಿಂದ ಹಿಡಿದು ಎಲ್ಲರೂ ಸಿದ್ದರಾಮಯ್ಯ (CM Siddaramaiah) ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅಭಿಪ್ರಾಯ ಪಟ್ಟರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ನಾಯಕರು ಭೇಟಿ ಆಗುತ್ತಿರುವ ವಿಚಾರಕ್ಕೆ ಕಿತ್ತೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅವರವರ ಪ್ರಯತ್ನ, ಆಸೆ. ಅದು ಅವರಿಗೆ ಬಿಟ್ಟಿದ್ದು. ಅದು ತಪ್ಪು ಏನೂ ಅಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ. ಇದರಲ್ಲಿ ವ್ಯಯಕ್ತಿಕವಾಗಿ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

siddaramaiah 1 2

ಒಳ್ಳೆಯ ಕೆಲಸಗಾರ ಎಂದು ಗುರುತಿಸಿಕೊಂಡಿರುವ ತಮ್ಮ ಹೆಸರು ಸಿಎಂ ರೇಸ್‌ನಲ್ಲಿ ಬರಬಹುದಾ ಎಂಬ ಪ್ರಶ್ನೆಗೆ ಜನ ನನ್ನ ಆರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ (Congress) ಪಕ್ಷ ಮೂರು ಬಾರಿ ಮಂತ್ರಿ ಮಾಡಿದೆ. ನನ್ನ ತಂದೆ ತಾಯಿ ಪುಣ್ಯ ನನಗೆ ಸಿಕ್ಕಿದೆ. ಇದಕ್ಕಿಂತ ಇನ್ನೇನು ನನಗೆ ಬೇಕು. ಐದು ವರ್ಷ ಕೃಷಿ ಮಂತ್ರಿಯಾಗಿದ್ದೆ.ಪಂಚಾಯತರಾಜ್ ಇಲಾಖೆ ನಿರ್ವಹಿಸಿದ್ದೇನೆ. ಈಗ ಕಂದಾಯ ಸಚಿವನಾಗಿದ್ದೇನೆ. ಕೈ ತುಂಬಾ ಕೆಲಸ ಇದೆ. ದಿನದ 24 ಗಂಟೆ ಅಲ್ಲ, 48 ಗಂಟೆ ಇದ್ದರೂ ಸಾಕಾಗುವುದಿಲ್ಲ. ಇರುವುದರಲ್ಲಿ ಜನರಿಗೆ ಒಳ್ಳೆಯ ಕೆಲಸ ಮಾಡಿದರೆ ಅದೇ ನನಗೆ ಸೌಭಾಗ್ಯ. ಎಐಸಿಸಿ ಅಧ್ಯಕ್ಷರು, ಸಿಎಂ ಸೇರಿ ಎಲ್ಲರಿಂದ ಒಳ್ಳೆಯ ಗೌರವ ಸಿಕ್ಕಿದೆ. ಏನೆಲ್ಲಾ ಸಿಗಬೇಕೋ ಅದೆಲ್ಲವೂ ಸಿಕ್ಕಿದೆ. ಹಾಗಾಗಿ, ಏನೋ ಗೊಂದಲ ಎನ್ನುತ್ತಿದ್ದಿರಿ. ಆದರೆ, ನಾನು ಎಲ್ಲಾ ಕಡೆ ಓಡಾಡಿ ಕೆಲಸ ಮಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: Haryana Results| ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

 

ಹರಿಯಾಣ (Haryana) ಮತ್ತು ಜಮ್ಮುವಿನಲ್ಲಿ (Jammu) ಕಾಂಗ್ರೆಸ್ ನೇತೃತ್ವದ ಘಟಬಂಧನ್‌ಗೆ ಬಹುಮತ ಸಿಕ್ಕಿರೋದು ಸಂತೋಷದ ವಿಷಯ. ರಾಹುಲ್ ಗಾಂಧಿ (Rahul Gandhi) ಹಾಗೂ ಖರ್ಗೆಯವರಿಗೆ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಹೋರಾಟ ನಡೆದು ಬಂದಿದೆ. ದೇಶದಲ್ಲಿ ಕೆಲವೇ ಕೆಲವು ಶ್ರೀಮಂತರಿಗೆ ಅನುಕೂಲ ಆದರೆ ಸಾಲದು. ಜನಸಾಮಾನ್ಯರಿಗೆ ಅನುಕೂಲ ಆಗಬೇಕು. ದೇಶದಲ್ಲಿ ಉದ್ಯೋಗ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಇದರ ವಿರುದ್ಧ ರಾಹುಲ್ ಗಾಂಧಿ ಹೋರಾಟ ನಡೆಸಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ಮಿತ್ರ ಪಕ್ಷಗಳಿಗೆ ನೀಡಿವೆ. ಅದಕ್ಕಿಂತಲೂ ಹೆಚ್ಚಿನ ಬೆಂಬಲ ಈ ಚುನಾಚಣೆಯಲ್ಲಿ ದೊರೆತಿದೆ. ದೇಶದಲ್ಲಿ ಬದಲಾವಣೆ ಗಾಳಿ ಬೀಸ್ತಿರೋದು ಬಲ ಆಗ್ತಿರೋದಕ್ಕೆ ಇದು ಸಾಕ್ಷಿ ಎಂದರು. ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

ಮಹಾರಾಷ್ಟ್ರ ಚುನಾವಣೆ ಬರುತ್ತಿದೆ, ಅಲ್ಲೂ ಸಹ ನಮಗೆ ಬಹುಮತ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ದೇಶದಲ್ಲಿ ಬಡವರ ವಿರೋಧಿ ಸರ್ಕಾರದ ಇದೆ. ಬಡವರು, ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ. ಕೆಲವೇ ಕೆಲವು ಅಂಬಾನಿ ಅದಾನಿತಂತವರಿಗೆ ಬಿಜೆಪಿ ಕೆಲಸ ಮಾಡ್ತಿದೆ. ಹೀಗಾಗಿಯೇ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇವತ್ತು ದೇಶದಲ್ಲಿ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

ಬದಲಾವಣೆಗೆ ಕರ್ನಾಕಟವೇ ಮುನ್ನುಡಿ ಆಯಿತಾ ಎಂಬ ಪ್ರಶ್ನೆಗೆ, ಇದು ಕಾಲದ ಚಕ್ರ ಬದಲಾವಣೆ ಜಗದ ನಿಯಮ. ಯಾರಿಗೂ ಅವನತಿ ಅಂತ ಹೇಳೋದಿಲ್ಲ. ಶ್ರೀಮಂತರ ಪರವಾಗಿ ಬಿಜೆಪಿ (BJP) ಕೆಲಸ ಮಾಡ್ತಿದೆ. ಸಾಮಾನ್ಯ ಭಾರತೀಯರ ಹಿತವನ್ನು ಕೈಬಿಟ್ಟಿದೆ. ಅದರ ವಿರುದ್ಧವಾಗಿ ಜನ ಇವತ್ತು ಒಂದಾಗಿದ್ದಾರೆ. ಹೊಟ್ಟೆಪಾಡಿನ ವಿಷಯಗಳನ್ನು ಬಿಜೆಪಿಯವರು ಮುಚ್ಚಿ ಹಾಕಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡ್ತಾರೆ. ಅದಕ್ಕೂ ಒಂದು ಕಾಲ ಇತ್ತು ಆದರೆ ಈಗ ಜನ ಜಾಗೃತರಾಗಿದ್ದಾರೆ. ಹೊಟ್ಟೆ ಪಾಡಿನ ವಿಷಯಗಳು ಮತ್ತೆ ಮುನ್ನೆಲೆಗೆ ಬಂದಿವೆ. ನಿಜವಾದ ಜೀವನದ ಅಂಶಗಳು ಮತ್ತು ಹೊಟ್ಟೆ ಪಾಡಿನ ವಿಷಯಗಳ ಮೇಲೆ ರಾಜಕೀಯ ನಡೆಯುತ್ತದೆ. ಅಲ್ಲಿವರೆಗೆ ಪ್ರಜಾಪ್ರಭುತ್ವ ಚೆನ್ನಾಗಿರುತ್ತದೆ. ಅದು ಬಿಟ್ಟು ಹೊಟ್ಟೆ ಪಾಡಿಗೆ ಅನ್ಯಾಯ ಮಾಡಿ ಮನಸ್ಸನ್ನು ಡೈವರ್ಟ್ ಮಾಡಿದರೆ ಜನರಿಗೆ ಅನ್ಯಾಯ ಆಗುತ್ತದೆ. ಇವತ್ತು ಅದರ ವಿರುದ್ಧವಾಗಿ ಬದಲಾವಣೆ ಆಗುತ್ತಿವೆ. ಮುಂದೆ ಎಲ್ಲಿ ಹೋಗುತ್ತದೆ ನೋಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

TAGGED:belagavibjpcm siddaramaiahcongressHaryana Election ResultJammu and Kashmirkrishna byre gowdaಕಾಂಗ್ರೆಸ್ಕೃಷ್ಣಭೈರೇಗೌಡಚುನಾವಣೆಜಮ್ಮು ಕಾಶ್ಮೀರಬೆಳಗಾವಿಸಿದ್ದರಾಮಯ್ಯಹರಿಯಾಣ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
7 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
8 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
8 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
8 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
8 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?