Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ – ನಾಳೆ ಏನೆಲ್ಲಾ ವಿಶೇಷತೆ ಇರುತ್ತೆ?

Public TV
Last updated: October 11, 2024 4:36 pm
Public TV
Share
4 Min Read
Mysuru Dasara
SHARE

– 5ನೇ ಬಾರಿಗೆ ಚಿನ್ನದಂಬಾರಿ ಹೊರಲಿದ್ದಾನೆ ಅಭಿಮನ್ಯು
– ಜಂಬೂಸವಾರಿ ಮೆರವಣಿಗೆಯಲ್ಲಿ 52 ಕಲಾತಂಡಗಳು ಭಾಗಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದಂಬಾರಿಯಲ್ಲಿ ವಿರಾಜಮಾನವಾಗಿ ಮೆರವಣಿಗೆ ಸಾಗುವ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ಕಾತರರಾಗಿದ್ದಾರೆ. ಜೊತೆಗೆ ಜಂಬೂಸವಾರಿ (Jamboo Savari) ಮೆರವಣಿಗೆ ಸೊಬಗನ್ನು ನೋಡಲು ದೇಶ-ವಿದೇಶದ ಪ್ರವಾಸಿಗರು ಕಾದಿದ್ದಾರೆ.

ಶನಿವಾರ ಜರುಗುವ ಅದ್ದೂರಿ ಜಂಬೂಸವಾರಿ ಮೆರವಣಿಗೆ ಹೇಗಿರುತ್ತೆ? ವಿಶೇಷತೆಗಳೇನು? ವಿಜಯದಶಮಿಯ ಪ್ರಮುಖ ದಿನದಂದು ಏನೇನು ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.. ಇದನ್ನೂ ಓದಿ: Mysuru Dasara | ಜಂಬೂ ಸವಾರಿ ರೂಟ್‌ ಮ್ಯಾಪ್‌ ಹೇಗಿದೆ?

Mysuru Dasara 2

ನಂದಿಧ್ವಜ ಪೂಜೆ
ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡುವುದು ಪದ್ಧತಿ. ಅದರಂತೆ ಶನಿವಾರ ಮಧ್ಯಾಹ್ನ 1:41 ರಿಂದ 2:10 ರ ವರೆಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಧ್ವಜ ಪೂಜೆ ನೆರವೇರಿಸಿ ಚಾಲನೆ ಕೊಡಲಿದ್ದಾರೆ. ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಕೆ ಆಗಲಿದೆ. ಬಳಿಕ ನಂದಿಧ್ವಜವನ್ನು ಹಿಡಿದು ಕಲಾವಿದರು ಜಂಬೂಸವಾರಿ ಮೆರವಣಿಗೆ ಜೊತೆಗೆ ಸಾಗಲಿದ್ದಾರೆ. ಜಂಬೂಸವಾರಿಗೆ ಮೆರವಣಿಗೆಯಲ್ಲಿ ಮೊದಲು ಸಾಗುವುದೇ ನಂದಿಧ್ವಜ ಕಲಾತಂಡ.

ಜಂಬೂಸವಾರಿ ಮೆರವಣಿಗೆ
ನಂದಿಧ್ವಜ ಪೂಜೆ ಬಳಿಕ ಇತ್ತ ಅರಮನೆ ಒಳಗಡೆ ಚಿನ್ನದಂಬಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಶನಿವಾರ ಸಂಜೆ 4 ರಿಂದ 4:30ರ ವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಆವರಣದಲ್ಲಿ ಅಭಿಮನ್ಯು ಹೊರುವ 750 ಕೆಜಿ ತೂಕದ ಚಿನ್ನದಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುವುದು. ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರು ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್‌, ಮೈಸೂರು ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ. ಅರಮನೆ ಆವರಣದಲ್ಲಿ ಗಣ್ಯರು, ಆಹ್ವಾನಿತರು, ಗೋಲ್ಡ್‌ ಕಾರ್ಡ್‌, ಟಿಕೆಟ್‌ ಇರುವವರಿಗೆ ಆಸನ ವ್ಯವಸ್ಥೆ ಇರಲಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಲಿದೆ. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

MYSURU DASARA 2022 5

52 ಕಲಾತಂಡ ಭಾಗಿ
ಜಂಬೂಸವಾರಿ ಮೆರವಣಿಗೆಯಲ್ಲಿ ನಾದಸ್ವರ, ವೀರಗಾಸೆ, ಕಂಸಾಳೆ, ಕೋಲಾಟ, ತಮಟೆ ನಗಾರಿ, ಯಕ್ಷಗಾನ, ಹಲಗೆ ಮೇಳ, ಕಣಿ ವಾದನ, ಹೂವಿನ ನೃತ್ಯ, ಹೆಜ್ಜೆ ಮೇಳ, ಚಿಟ್‌ ಮೇಳ, ಡೊಳ್ಳು ಕುಣಿತ, ಕೀಲು ಕುದುರೆ, ಬೊಂಬೆಗಳ ವೇಷ ಮೊದಲಾದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಒಟ್ಟು 52 ಕಲಾತಂಡಗಳು ಭಾಗಿಯಾಗಲಿವೆ. ಪೊಲೀಸ್‌ ತುಕಡಿಗಳು, ಸ್ತಬ್ದಚಿತ್ರಗಳು, ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಮೆರವಣಿಗೆಯು 5 ಕಿಮೀ ಸಾಗಿ ಬನ್ನಿಮಂಟಪಕ್ಕೆ ತಲುಪಲಿದೆ.

ಮೆರವಣಿಗೆ ಸಾಗುವ ಮಾರ್ಗ
ದಸರಾ ಜಂಬೂಸವಾರಿ ಮೆರವಣಿಗೆಯು ಅರಮನೆಯ ಬಲರಾಮ ದ್ವಾರದಿಂದ ಹೊರಟು ಕೆ.ಆರ್‌.ವೃತ್ತ, ಸಯ್ಯಾಜಿರಾವ್‌ ರಸ್ತೆ, ಕೆ.ಆರ್‌.ಆಸ್ಪತ್ರೆ, ಬಂಬೂಬಜಾರ್‌, ಹೈವೇ ವೃತ್ತದ ಮೂಲಕ ಸಾಗುತ್ತದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಮೆರವಣಿಗೆ ಕೊನೆಗೊಳ್ಳಲಿದೆ. ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿರುತ್ತಾರೆ. ಕಲಾತಂಡಗಳು ಹಾಗೂ ಗಜಪಡೆ, ಚಿನ್ನದಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಇದನ್ನೂ ಓದಿ: ನವರಾತ್ರಿಯ 9ನೇ ದಿನ ಆಯುಧ ಪೂಜೆ – ಖಾಸಾ ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

mysuru dasara 2022

ಜಂಬೂಸವಾರಿ ಮೆರವಣಿಗೆ ಮುನ್ನಡೆಸುತ್ತಾನೆ ‘ಧನಂಜಯ’
ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆ ಮುನ್ನಡೆಸುವ ಜವಾಬ್ದಾರಿಯನ್ನು ಧನಂಜಯ ಆನೆ ನಿಭಾಯಿಸಲಿದೆ. ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಎಲ್ಲರಿಗಿಂತ ಮುಂಚೂಣಿಯಲ್ಲಿ ಧನಂಜಯ ಸಾಗಲಿದ್ದಾನೆ. ಕಳೆದ ವರ್ಷ ದಸರಾದಲ್ಲಿ ನಿಶಾನೆ ಆನೆಯಾಗಿ ಅರ್ಜುನ ಮೆರವಣಿಗೆ ಮುನ್ನಡೆಸಿದ್ದ. ಆದರೆ ಅರ್ಜುನನ ಅಕಾಲಿಕ ಸಾವಿನಿಂದಾಗಿ, ಆ ಜವಾಬ್ದಾರಿಯನ್ನು ಈ ಬಾರಿ ಧನಂಜಯನಿಗೆ ಹೊರಲಿಸಲಾಗಿದೆ.

5ನೇ ಬಾರಿ ಚಿನ್ನದಂಬಾರಿ ಹೊರುತ್ತಾನೆ ಅಭಿಮನ್ಯು
ನಾಳೆ ನಡೆಯಲಿರುವ ವಿಜಯದಶಮಿ ಜಂಬೂಸವಾರಿಯಲ್ಲಿ ಅಭಿಮನ್ಯು ಚಿನ್ನದ ಅಂಬಾರಿ ಹೊರಲಿದ್ದಾನೆ. ಅಭಿಮನ್ಯುವಿನ ಎಡಬಲದಲ್ಲಿ ಹಿರಣ್ಯ ಹಾಗೂ ಲಕ್ಷ್ಮಿ ಕುಮ್ಕಿ ಆನೆಗಳಾಗಿ ಸಾಥ್‌ ನೀಡಲಿವೆ. ನೌಫತ್‌ ಆನೆಯಾಗಿ ಗೋಪಿ ಸಾಗಲಿದ್ದಾನೆ. ಇದನ್ನೂ ಓದಿ: ಮೈಸೂರು ದಸರಾ – ನಾಡದೇವಿ ಚಾಮುಂಡಿಯ ಅಂಬಾರಿಯ ಇತಿಹಾಸ

panjina kavayatthu 1

ಅಭಿಮನ್ಯು ಆನೆ ಬಗ್ಗೆ ಒಂದಷ್ಟು ಮಾಹಿತಿ
ಅಭಿಮನ್ಯು ಆನೆಯನ್ನು 1970ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಯಿತು. ಅಭಿಮನ್ಯುವಿನ ವಿಶೇಷ ಗುಣವೆಂದರೆ, ಕಾಡಾನೆಗಳನ್ನು ಸೆರೆ ಹಿಡಿಯುವ, ಪಳಗಿಸುವ ಮತ್ತು ಚಿಕಿತ್ಸೆ ನೀಡುವ ಕೆಲಸದಲ್ಲಿ ಸಾಮರ್ಥ್ಯವನ್ನು ಹೊಂದಿರುತ್ತದೆ. ಅಭಿಮನ್ಯು ಈವರೆಗೆ ಸುಮಾರು 140 ರಿಂದ 150 ಕಾಡಾನೆಗಳನ್ನು, 40 ರಿಂದ 50 ಹುಲಿಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾನೆ. 2012ರಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, 2015ರ ವರೆಗೂ ನಾಡಹಬ್ಬ ಮೈಸೂರು ದಸರಾದಲ್ಲಿ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿಯನ್ನು ಎಳೆಯುವ ಜವಾಬ್ದಾರಿ ನಿವರ್ಹಿಸಿದ್ದಾನೆ. ಕಳೆದ 4 ವರ್ಷಗಳಿಂದ ಚಿನ್ನದ ಅಂಬಾರಿಯನ್ನು ಹೊಂದಿರುವ ಜವಾಬ್ದಾರಿಯುತ ಕೆಲಸ ನಿರ್ವಹಿಸುತ್ತಿದ್ದಾನೆ ಅಭಿಮನ್ಯು. ಈ ಬಾರಿಯ ದಸರಾದಲ್ಲಿ 5ನೇ ಸಲ ಚಿನ್ನದಂಬಾರಿ ಹೊರಲು ಅಭಿಮನ್ಯು ಸಜ್ಜಾಗಿದ್ದಾನೆ.

panjina kavayatthu 2

ಪಂಜಿನ ಕವಾಯತು ಆಕರ್ಷಣೆ
ಜಂಬೂಸವಾರಿ ಪೂರ್ಣಗೊಂಡ ಬಳಿಕ ಬನ್ನಿಮಂಟಪ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತಿನಲ್ಲಿ ಬೈಕ್‌ಗಳಲ್ಲಿ ವಿವಿಧ ಸ್ಟಂಟ್‌ಗಳ ಪ್ರದರ್ಶನ ಇರಲಿದೆ. ಬೈಕ್‌ ಸ್ಟಂಟ್‌ಗಳು ಮೈ ಜುಮ್ಮೆನಿಸುವಂತಿರುತ್ತದೆ. ಬೈಕ್‌ಗಳಲ್ಲಿ ಸಿಬ್ಬಂದಿ ನಿಂತು ಪಿರಮಿಡ್‌ ಮಾದರಿಯಲ್ಲಿ ಸಾಗುತ್ತಾರೆ. ಫೈರ್‌ ಜಂಪ್‌, ಶ್ವೇತ ಅಶ್ವ ಜಂಪ್‌, ಟ್ಯೂಬ್‌ ಲೈಟ್‌ ಜಂಪ್‌, ಸರ್ಕಲ್‌ ಎಕ್ಸ್‌ಸೈಜ್‌, ಓಪನಿಂಗ್‌ ಕ್ರಾಸಿಂಗ್‌, ಪ್ಯಾರಲ್‌ ಕ್ರಾಸಿಂಗ್‌, ಗ್ರೂಪ್‌ ಈವೆಂಟ್‌ ಸೇರಿದಂತೆ ವಿವಿಧ ಕಸರತ್ತು ಪ್ರದರ್ಶನ ಇರಲಿದೆ. ಇದನ್ನೂ ಓದಿ: ರಾಜ, ರಾಜಕಾರಣಿಯಾಗಿ ಮೈಸೂರು ದಸರಾದಲ್ಲಿ ಭಾಗಿ – ಪರಂಪರೆ ಮುಂದುವರಿಸಿದ ಯದುವೀರ್

ಮೈ ಜುಮ್ಮೆನಿಸೋ ಸ್ಟಂಟ್‌
ಬುಲೆಟ್‌ ಮೇಲೆ ನಿಂತು, ಮಲಗಿ ಸಾಗುವುದು, ಬೈಕ್‌ ಚಲಿಸುವಾಗಲೇ ಅದರ ಸೀಟ್‌ ಮೇಲೆ ಮಲಗಿ ಈಜಾಡುವಂತೆ ಮಾಡುವುದು, ಚಲಿಸುವ ಬೈಕ್‌ ಮೇಲೆ ನಿಂತು ಸೆಲ್ಯೂಟ್‌ ಹೊಡೆಯುವುದು, ಬೈಕ್‌ ಚಲಿಸುವಾಗಲೇ ಏಣಿ ಏರುವುದು ಹೀಗೆ ಹಲವಾರು ಸ್ಟಂಟ್‌ಗಳು ಇರಲಿವೆ. ಇದರ ಜೊತೆಗೆ ವಿವಿಧ ಕಲಾತಂಡಗಳಿಂದ ನೃತ್ಯ ಪ್ರದರ್ಶನ ಕೂಡ ನಡೆಯಲಿದೆ.

TAGGED:Dasara Jamboo Savarimysurumysuru dasaraದಸರಾ ಜಂಬೂಸವಾರಿಮೈಸೂರುಮೈಸೂರು ದಸರಾ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Sowmya Rape and Murder Casee
Crime

ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

Public TV
By Public TV
5 minutes ago
Chalavadi Narayanaswamy
Bengaluru City

ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

Public TV
By Public TV
8 minutes ago
Bengaluru airport Gold Smuggling
Bengaluru City

ಬೆಂಗಳೂರು | ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಅಂಟಿಸಿ ಸ್ಮಗ್ಲರ್ ಎಸ್ಕೇಪ್ – 3.5 ಕೆಜಿ ಚಿನ್ನ ಪತ್ತೆ

Public TV
By Public TV
14 minutes ago
biklu shiva 1
Bengaluru City

ಬಿಕ್ಲು ಶಿವ ಕೊಲೆ ಕೇಸ್; ಬಂಧಿತ ಹಂತಕರ ಮೇಲೆ ರೌಡಿಶೀಟ್‌ ತೆರೆದ ಪೊಲೀಸರು

Public TV
By Public TV
14 minutes ago
voters list election
Latest

ಬಿಹಾರ ಮಾತ್ರವಲ್ಲ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

Public TV
By Public TV
28 minutes ago
yathindra siddaramaiah
Latest

ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

Public TV
By Public TV
35 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?