Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

Cricket

ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

Public TV
Last updated: October 13, 2024 3:59 pm
Public TV
Share
3 Min Read
INDvsAUS 1 1
SHARE

ಮುಂಬೈ: 2025ರಿಂದ 2027 ಆವೃತ್ತಿಗಳಿಗೆ ಬಿಸಿಸಿಐ ವಿಧಿಸಿರುವ ಹೊಸ ನಿಯಮಗಳ (BCCI IPL Rules) ಕುರಿತು ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಪ್ರತಿಕ್ರಿಯೆ ನೀಡಿದ್ದು, ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ ಎಂದು ಹೇಳಿದ್ದಾರೆ.

ಹೌದು. ಬಿಸಿಸಿಐ ಹೊಸ ನಿಯಮದ ಫ್ರಾಂಚೈಸಿಗಳು ಖರೀದಿ ಮಾಡಿದ ನಂತರ ವಿದೇಶಿ ಆಟಗಾರರು ಲೀಗ್‌ನಿಂದ ಹಿಂದೆ ಸರಿದರೆ 2 ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ. ವೈದ್ಯಕೀಯ ಮತ್ತು ಫಿಟ್‌ನೆಸ್‌ ಸಮಸ್ಯೆ ಇರುವ ಆಟಗಾರರಿಗೆ ಮಾತ್ರ ಟೂರ್ನಿಯಿಂದ ಹೊರಗುಳಿಯಲು ಅವಕಾಶವಿರುತ್ತದೆ ಎಂದು ಹೇಳಿದೆ. ಈ ನಿಮಯದ ಬಗ್ಗೆ ಕಮ್ಮಿನ್ಸ್‌ ಪ್ರತಿಕ್ರಿಯೆ ನೀಡಿದ್ದು, ಇದು ತನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಮ್ಮಿನ್ಸ್ ಹೇಳಿದ್ದಾರೆ.

IPL 2024 FINAL

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈಗಿನ ಐಪಿಎಲ್‌ ನಿಯಮಗಳು ಬದಲಾಗಿವೆ. ಈ ಹಿಂದೆಯೂ ನಾನು ಹರಾಜಿನ ನಂತರ ಐಪಿಎಲ್‌ನಿಂದ (IPL 2025) ಹಿಂದೆ ಸರಿದಿಲ್ಲ. ಹಾಗಾಗಿ ಈ ನಿಯಮ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಆದರೂ ಐಪಿಎಲ್‌ಗೆ ಸಂಬಂಧಿಸಿದ ಒಂದು ಅಂಶವನ್ನು ಪರಿಗಣಿಸುವುದಾದ್ರೆ, ನನಗೆ ಐಪಿಎಲ್‌ಗಿಂತ ಟೆಸ್ಟ್‌ ಕ್ರಿಕೆಟ್‌ ತುಂಬಾ ಮುಖ್ಯ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

IPL 3

2024ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಪ್ಯಾಟ್‌ ಕಮ್ಮಿನ್ಸ್‌ ಅವರನ್ನು 20.50 ಕೋಟಿ ರೂ.ಗೆ ಖರೀದಿ ಮಾಡಿತು. ಬಳಿಕ ಹೈದರಾಬಾದ್‌ ತಂಡದ ನಾಯಕನಾಗಿ ಮುನ್ನಡೆಸಿದ ಪ್ಯಾಟ್‌ ಕಮ್ಮಿನ್ಸ್‌ ತಂಡವನ್ನು ಫೈನಲ್‌ವರೆಗೆ ಕೊಂಡೊಯ್ದಿದ್ದರು. 31 ವರ್ಷ ವಯಸ್ಸಿನ ಕಮ್ಮಿನ್ಸ್‌ 2027ರ ವರೆಗೆ ಟೆಸ್ಟ್‌ ಮತ್ತು ಏಕದಿನ ಪಂದ್ಯಗಳಲ್ಲಿ ಆಸೀಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

ನ.22ರಿಂದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ:
ಮುಂದಿನ ನವೆಂಬರ್‌ನಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ನ.22 ರಿಂದ 2025ರ ಜನವರಿ 7ರ ವರೆಗೆ ಭಾರತ ಮತ್ತು ಆಸೀಸ್‌ ನಡುವೆ ಬಾರ್ಡರ್‌ ಗವಾಸ್ಕರ್‌ ಟ್ರೋಫಿ (Border Gavaskar Trophy) ಟೆಸ್ಟ್‌ ಸರಣಿ ನಡೆಯಲಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸರಣಿ ಗೆದ್ದುಕೊಂಡಿತ್ತು. ಆ ಬಳಿಕ ನಡೆದ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಆಸೀಸ್‌ ತಂಡ ಭಾರತ ತಂಡವನ್ನು ಸೋಲಿಸಿ WTC ಟ್ರೋಫಿ ಎತ್ತಿ ಹಿಡಿದಿತ್ತು. ಇದನ್ನೂ ಓದಿ: ಸಂಜು, ಸೂರ್ಯ ಬ್ಯಾಟಿಂಗ್‌ ಅಬ್ಬರ – ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ; 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌

INDvsAUS 5 1

ಐಪಿಎಲ್‌ನ ಹೊಸ ನಿಯಮಗಳೇನು?
* ಫ್ರಾಂಚೈಸಿಯೊಂದು ಆರ್‌ಟಿಎಂ ಕಾರ್ಡ್‌ನೊಂದಿಗೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಬಹುದು.
* ಅಲ್ಲದೇ ಪ್ರತಿ ಫ್ರಾಂಚೈಸಿ 5 ಕ್ಯಾಪ್ಡ್‌ (ಭಾರತೀಯ ಮತ್ತು ಸಾಗರೋತ್ತರ) ಮತ್ತು 2 ಅನ್‌ಕ್ಯಾಪ್ಡ್‌ಪ್ಲೇಯರ್‌ಗಳನ್ನು ಹೊಂದಬಹುದು.
* ಫ್ಯಾಂಚೈಸಿಗಳ ಪರ್ಸ್‌ ಮೊತ್ತವನ್ನು 100 ಕೋಟಿ ರೂ. ನಿಂದ 120 ಕೋಟಿ ರೂ. ಹೆಚ್ಚಿಸಲಾಗಿದೆ. ಹಾಗಾಗಿ 2025ರ ಐಪಿಎಲ್‌ ಋತುವಿನಲ್ಲಿ ಸಂಬಳ ಮಿತಿ ಸೇರಿ ಒಟ್ಟು ಪರ್ಸ್‌ ಮೊತ್ತ 146 ಕೋಟಿ ರೂ., 2026ಕ್ಕೆ 151 ಕೋಟಿ ರೂ., 2027ಕ್ಕೆ 157 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
* ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ಶುಲ್ಕವನ್ನು ಪರಿಚಯಿಸಲಾಗಿದೆ. ಈ ಮೂಲಕ ಪ್ರತಿ ಆಟಗಾರನು ಲೀಗ್‌ ಪಂದ್ಯವೊಂದಕ್ಕೆ 7.5 ಲಕ್ಷ ರೂ. ಹೆಚ್ಚುವರಿ ಪಡೆದುಕೊಳ್ಳಲಿದ್ದಾರೆ.
* ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದೇಶಿ ಆಟಗಾರರು ಮೆಗಾ ಹರಾಜಿಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ವರ್ಷ ಅವರು ಹರಾಜಿನಲ್ಲಿ ನೋಂದಾಯಿಸಲು ಅನರ್ಹರಾಗುತ್ತಾರೆ.
* ಹರಾಜಿನಲ್ಲಿ ಆಯ್ಕೆಯಾದ ಯಾವುದೇ ವಿದೇಶಿ ಆಟಗಾರ, ಬಳಿಕ ಐಪಿಎಲ್‌ ಆರಂಭಕ್ಕೂ ಮುನ್ನ ತನ್ನನ್ನು ಅಲಭ್ಯಗೊಳಿಸಿದ್ರೆ, ಮುಂದಿನ 2 ಸೀಸನ್‌ಗಳಿಗೆ ನಿಷೇಧಿಸಲಾಗುತ್ತದೆ.
* ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿ 5 ವರ್ಷ ಪೂರೈಸಿದ ಭಾರತೀಯ ಕ್ರಿಕೆಟ್‌ ಆಟಗಾರರನ್ನ ಅನ್‌ಕ್ಯಾಪ್ಡ್‌ ಪ್ಲೇಯರ್‌ ಎಂದು ಪರಿಗಣಿಸಲಾಗುತ್ತದೆ. ಇದು ಭಾರತೀಯ ಆಟಗಾರರಿಗೆ ಮಾತ್ರ ಅನ್ವಯಿಸುತ್ತದೆ.
* 2025 ರಿಂದ 2027ರ ಆವೃತ್ತಿಗಳಲ್ಲಿಯೂ ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌ ಮುಂದುವರಿಯುತ್ತದೆ.

TAGGED:bcciBorder Gavaskar TrophyIPL 2025IPL RulesPat Cumminstest cricketಐಪಿಎಲ್‌ 2025ಟೆಸ್ಟ್ ಕ್ರಿಕೆಟ್ಪ್ಯಾಟ್ ಕಮ್ಮಿನ್ಸ್ಬಾರ್ಡರ್ ಗವಾಸ್ಕರ್ ಟ್ರೋಫಿಬಿಸಿಸಿಐ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
4 minutes ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
46 minutes ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
2 hours ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
2 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
3 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?