ಪಿಎಸ್‌ಐ ಫಲಿತಾಂಶ ಪ್ರಕಟಿಸುವಂತೆ ವಿಜಯೇಂದ್ರ ಆಗ್ರಹ

Public TV
1 Min Read
BY Vijayendra

ಬೆಂಗಳೂರು: ಪಿಎಸ್‌ಐ ಪರೀಕ್ಷೆಯ ಫಲಿತಾಂಶ (PSI Exam Result) ಪ್ರಕಟಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ ಪರೀಕ್ಷಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ನೀರು – ಅ.16ರಂದು ಕಾವೇರಿ ಐದನೇ ಹಂತಕ್ಕೆ ಲೋಕಾರ್ಪಣೆ

PSI cap

ಟ್ವೀಟ್‌ನಲ್ಲಿ ಏನಿದೆ?
ಇತ್ತೀಚೆಗಷ್ಟೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಉಚ್ಛ ನ್ಯಾಯಾಲಯದ ಆದೇಶದಂತೆ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆ ನಡೆಸಿ 2024ರ ಮಾರ್ಚ್ 28 ರಂದು ಅಂತಿಮ ಪಟ್ಟಿ ಪ್ರಕಟಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಮತ್ತು ತರಬೇತಿ ವಿಭಾಗಕ್ಕೆ ನೀಡಿ ಇದುವರೆಗೂ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸದೇ ಇರುವುದು ಸರ್ಕಾರದ ಬೇಜವಾಬ್ದಾರಿತನವೋ ಅಥವಾ ಯೋಜಿತ ಧೋರಣೆಯೋ ಎಂಬ ಅನುಮಾನ ಪರೀಕ್ಷಾರ್ಥಿಗಳಲ್ಲಿ ಕಾಡುತ್ತಿದೆ. ಇದನ್ನೂ ಓದಿ: ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ನ್ಯಾಯಾಲಯದ ತೀರ್ಪನ್ನು ಗೌರವಿಸ್ತೇವೆ: ರೇಣುಕಾಸ್ವಾಮಿ ತಂದೆ

ಈಗಾಗಲೇ ಅನೇಕ ಕಾರಣಗಳಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದ್ದು, ಕಳೆದ 4 ವರ್ಷಗಳಿಂದಲೂ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅಂತಿಮ ಆಯ್ಕೆ ಪಟ್ಟಿ ಎದುರು ನೋಡುತ್ತಿರುವುದು ಈ ಸರ್ಕಾರದ ಅರಿವಿಗೆ ಬಾರದಿರುವುದು ದುರ್ದೈವವೇ ಸರಿ. ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ಗೆ ಈಗ Z ಶ್ರೇಣಿಯ ಭದ್ರತೆ

ಪದೇ ಪದೇ ಪರೀಕ್ಷೆ ಎದುರಿಸುವ ಉದ್ಯೋಗಾಕಾಂಕ್ಷಿಗಳನ್ನು ಗೊಂದಲಕ್ಕೆ ತಳ್ಳುತ್ತಿರುವ ರಾಜ್ಯ ಸರ್ಕಾರ ಈ ಕೂಡಲೇ 545 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ ಪರೀಕ್ಷಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯುವ ಕಾಳಜಿ ತೋರಲಿ ಎಂದಿದ್ದಾರೆ. ಇದನ್ನೂ ಓದಿ: ರಾಯಚೂರು| ಕಾರು, ಲಾರಿ ಮಧ್ಯೆ ಭೀಕರ ಅಪಘಾತ – ಮೂವರ ದುರ್ಮರಣ

Share This Article