Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಅಮಿತ್ ಶಾ ಮಾತು ಕೇಳಿದ್ದೇ ತಪ್ಪಾಯ್ತಾ? – ಈಶ್ವರಪ್ಪ ಬೇಸರ

Public TV
Last updated: October 18, 2024 7:51 pm
Public TV
Share
3 Min Read
KS Eshwarappa
SHARE

ಬಾಗಲಕೋಟೆ: ಅಮಿತ್ ಶಾ (Amit shah) ಮಾತು ಕೇಳಿದ್ದೇ ತಪ್ಪಾಯ್ತಾ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಬೇಸರ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಳೆದ ಬಾರಿ ರಾಯಣ್ಣ ಬ್ರಿಗೇಡ್‌ಗೆ(Rayanna Brigade) ಹಿಂದುಳಿದವರು, ದಲಿತರು ಹಾಗೂ ಸಮಸ್ತ ಹಿಂದೂ ಸಮಾಜ ಬೆಂಬಲ ಕೊಟ್ಟಿತ್ತು. ಅಲ್ಲದೇ ಎಲ್ಲಾ ಪಕ್ಷದವರು ಆ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ ಇದನ್ನು ಸಹಿಸದ ಕೆಲವರು ಅಮಿತ್ ಶಾ ಅವರನ್ನು ಭೇಟಿಯಾಗಿ ನನ್ನ ಬಗ್ಗೆ ಹಾಗೂ ಈ ಕಾರ್ಯಕ್ರಮದ ಬಗ್ಗೆ ದೂರು ನೀಡಿದ್ದರು ಎಂದು ತಿಳಿಸಿದರು.

ಆಗ ಕೇಂದ್ರ ನಾಯಕರಾದ ಅಮಿತ್ ಶಾ ನನ್ನನ್ನು ಕರೆದು ರಾಯಣ್ಣ ಬ್ರಿಗೇಡ್ ಯಾಕೆ ಬೇಕು? ಇದೆಲ್ಲ ಬೇಡ ಅಂತ ನನಗೆ ಹೇಳಿದ್ರ. ಆದ್ರೆ ನಾನು ಯಾಕೆ ಬೇಡ ಅಂತ ಅವರ ಜೊತೆ ವಾದ ಮಾಡಿದೆ. ಆದರೆ ಅವರ ಬಳಿ ಇದಕ್ಕೆ ಉತ್ತರ ಸಿಗಲಿಲ್ಲ ಎಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.

ಹಿರಿಯರ ಮಾತನ್ನು ಕೇಳಬೇಕು ಎಂಬುದು ನನಗೆ ಮುಂಚೆಯಿಂದ ಬಂದ ಸ್ವಭಾವ. ಆದರೆ ಈಗ ಅವರ ಮಾತನ್ನು ನಾನು ಕೇಳಿದ್ದೇ ತಪ್ಪಾಯ್ತಾ ಅಂತ ಅನಿಸುತ್ತಿದೆ ಎಂದರು.

amit shah

ಈ ಸಂಘಟನೆ ಹೀಗೆ ಮುಂದುವರೆದಿದ್ದರೆ ದಲಿತರಿಗೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತು ಎನ್ನುವ ಭಾವನೆ ನನ್ನದು. ಅಷ್ಟೇ ಅಲ್ಲದೆ ಈ ಸಂಘಟನೆಗೆ ಹಿಂದುಳಿದವರಿಗೆ ನ್ಯಾಯ ಕೊಡಿಸುವ ಶಕ್ತಿ ಇರುತ್ತಿತ್ತು. ಆದರೆ ಕಾರಣಾಂತರಗಳಿಂದ ಈ ಸಂಘಟನೆ ನಿಂತುಹೋಯಿತು. ಆದರೆ ಈಗ ಆರಂಭವಾಗಿರುವ ಬ್ರಿಗೇಡ್‌ ಅನ್ನು ನಾವು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂಬ ಭರವಸೆಯನ್ನು ನೀಡಿದರು.

ನೀವು ಬಿಜೆಪಿಗೆ ಮತ್ತೆ ಹೋಗುವಿರಾ ಎಂದು ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ನಾನು ಈಗ ಬಿಜೆಪಿಯಲ್ಲಿಲ್ಲ. ಬನ್ನಿ ಎಂದು ಅನೇಕ ನಾಯಕರು ನನ್ನನ್ನು ಬಿಜೆಪಿಗೆ ಕರೆಯುತ್ತಿದ್ದಾರೆ. ಸದ್ಯ ಬಿಜೆಪಿಗೆ ಹೋಗುವ ಚಿಂತನೆಯಲ್ಲಿ ನಾನಿಲ್ಲ ಎಂದರು. ಅಲ್ಲದೇ ನನಗೆ ಅಲ್ಲಿ ನನಗೆ ಸಾಕಷ್ಟು ಅನ್ಯಾಯವಾಗಿದೆ. ಬಿಜೆಪಿಯಲ್ಲಿರುವ ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ ಎಂದು ಗುಡುಗಿದರು. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

ಜಾತಿ ಗಣತಿಯ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ನಾನು ಪರಿಷತ್ತಿನಲ್ಲಿ ಇದ್ದಾಗಲೇ ಕಾಂತರಾಜ್ ವರದಿಯನ್ನ ಬಿಡುಗಡೆ ಮಾಡಬೇಕು ಅಂತ ಹೇಳಿದ್ದೆ. ಆಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಇದ್ದರು. ಈ ಸರ್ಕಾರದಲ್ಲಿ ಬಿಡುಗಡೆ ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು. ಈಗಿನಂತೆ ಆಗಲು ಸಿದ್ದರಾಮಯ್ಯ ಉತ್ತರ ಕುಮಾರನ ಪೌರುಷ ತೋರಿದ್ದರು ಎಂದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ಜಾರಿಗೆ ತಂದೆ ತರುತ್ತೇವೆ ಅಂತ ಹೇಳಿದ್ದಾರೆ. ಈಗ ಮತ್ತೆ ಅನಿವಾರ್ಯ ಕಾರಣಗಳಿಂದ 25ನೇ ತಾರೀಕು ಅಂತ ಮುಂದೆ ಹಾಕುತ್ತಿದ್ದಾರೆ. ಇವರಿಗೆ ಹಿಂದುಳಿದವರು ಬಗ್ಗೆ ಯಾವುದೇ ಕಳಕಳಿ ಇಲ್ಲ. ಅಹಿಂದ ಪದ ಬಳಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಯಾವುದನ್ನು ಮಾಡಲ್ಲ. ಇದು ನನಗೆ ಗೊತ್ತು ಆದರೂ ಜಾತಿ ವಿಚಾರದಲ್ಲಿ ಸ್ವಲ್ಪ ಆಸೆ ಇದೆ ಎಂದು ಹೇಳಿದರು.

Siddaramaiah Valmiki Jayanthi

ಕಾಂಗ್ರೆಸ್‌ ಪಕ್ಷದಲ್ಲೇ ಕೆಲವರು ಮುಖ್ಯಮಂತ್ರಿ ಸ್ಥಾನ ಹೋದರೂ ಪರವಾಗಿಲ್ಲ ಜಾತಿಗಣತಿಯನ್ನ ಜಾರಿಗೆ ತನ್ನಿ ಎಂದು ಹೇಳುತ್ತಿದ್ದಾರೆ. ಆದರೆ ನಾನು ಸಿದ್ದರಾಮಯ್ಯನವರ (Siddaramaiah) ಸಿಎಂ ಸ್ಥಾನ ಹೋಗಲಿ ಎನ್ನುವ ಅಪೇಕ್ಷೆ ಪಡಲ್ಲ. ಮುಡಾ ಪ್ರಕರಣದಲ್ಲಿ ಅವರು ರಾಜೀನಾಮೆ ಕೊಟ್ಟು ಮತ್ತೆ ಕ್ಲೀನ್ ಚಿಟ್ ತೆಗೆದುಕೊಂಡು ಬರಲಿ ಅಂತ ಆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಆದರೆ ಅವರು ಅಹಿಂದ ಜನರನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿರುವುದು ನನಗೆ ಇಷ್ಟವಿಲ್ಲ ಎಂದು ತಿಳಿಸಿದರು.

ಇದೆ ವೇಳೆ ಒಳ ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಸಿ, ಸುಪ್ರೀಂ ಕೋರ್ಟ್ ಆದೇಶಕ್ಕೆ ಯಾರು ಅಡ್ಡಿ ಬರಲು ಸಾಧ್ಯವಿಲ್ಲ. ನ್ಯಾಯಾಲಯದ ಆದೇಶದ ಪ್ರಕಾರ ಒಳ ಮೀಸಲಾತಿ ಜಾರಿಗೆ ತಂದೇ ತರಬೇಕು. ತಮಗೆ ಅನುಕೂಲ ಆದಾಗ ಸತ್ಯಮೇವ ಜಯತೆ ಅಂದ್ರೆ ಅದು ನಡೆಯಲ್ಲ ಎಂದು ಸಿಟ್ಟು ಹೊರಹಾಕಿದರು. ಇದನ್ನೂ ಓದಿ: Russia – Ukraine War | ರಷ್ಯಾ ಪರ 12,000 ಸೈನಿಕರನ್ನು ಕಳುಹಿಸಿದ ಉತ್ತರ ಕೊರಿಯಾ

ಮುಡಾ ಕೇಸ್ ವಿಚಾರದಲ್ಲಿ ಕೋರ್ಟ್ ತಮ್ಮ ಪರ್ವಾಗಿಲ್ಲ ಅಂದಾಗ, ಬಿಜೆಪಿಯ ಕೆಲ ನಾಯಕರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಅಂತಾರೆ. ಆದ್ರೆ ಸಿಎಂ ರೇಸ್ ನಲ್ಲಿರುವ ಸಂಪುಟದ ಸದಸ್ಯರೇ ಅವರಿಗೆ ಹಿಂದಿನಿಂದ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿಎಂ ರೇಸ್‌ಲ್ಲಿರುವ ಸಚಿವರ ವಿರುದ್ಧ ಕುಟುಕಿದರು.

ಬಾಗಲಕೋಟೆಯಲ್ಲಿ 20 ರಂದು ನಡೆಯುವ ಬ್ರಿಗೆಡ್ ಸಭೆಯ ಬಗ್ಗೆ ಮಾತನಾಡಿ, ಈ ಸಭೆಯಲ್ಲಿ ಅನೇಕ ಧಾರ್ಮಿಕ ಮುಖಂಡರು, ಸ್ವಾಮೀಜಿಗಳು, ಮಠಾಧೀಶರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ ಗಣ್ಯರು ಹಾಗೂ ಹಿಂದುಳಿದ ದಲಿತ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲಿಯೇ ಇದರ ಬಗ್ಗೆ ಚರ್ಚೆ ಮಾಡಿ ಸಂಘಟನೆಗೆ ಒಂದು ಹೆಸರಿಡುತ್ತೇವೆ ಎಂದು ತಿಳಿಸಿದರು.

 

TAGGED:congresseshwarappaRayanna Brigadeಅಮಿತ್ ಶಾಈಶ್ವರಪ್ಪಕಾಂಗ್ರೆಸ್ಜಾತಿ ಗಣತಿರಾಯಣ್ಣ ಬ್ರಿಗೇಡ್
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
6 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
7 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
7 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
7 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
7 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?