Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ: ಹೆಚ್‌ಡಿಕೆ

Public TV
Last updated: October 19, 2024 3:45 pm
Public TV
Share
3 Min Read
HD Kumaraswamy 4
SHARE

ಮಂಡ್ಯ: 2028ರ ವರೆಗೆ ಈ ಸರ್ಕಾರ (Congress Government) ನಡೆಯಲ್ಲ, ಮತ್ತೆ ನಾನೇ ಸಿಎಂ ಆಗ್ತೀನಿ. ಜನರು ಒಂದು ಅವಕಾಶ ಕೊಡ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಆಗಿರುವ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಭವಿಷ್ಯ ನುಡಿದರು.

ನಗರದಲ್ಲಿ ʻಮಂಡ್ಯ ಟು ಇಂಡಿಯಾʼ (Mandya To India) ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದ ಅವರು, 2028ರ ವರೆಗೆ ಈ ಸರ್ಕಾರ ನಡೆಯಲ್ಲ. ಅಷ್ಟರೊಳಗೆ ನನಗೆ ಅವಕಾಶ ಬರುತ್ತೆ, ಮತ್ತೆ ನಾನೇ ಸಿಎಂ ಆಗ್ತೀನಿ ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್: ಛಲವಾದಿ ನಾರಾಯಣಸ್ವಾಮಿ

ನಾನು ಜ್ಯೋತಿಷಿ ಅಲ್ಲ ಆದ್ರೂ ಹೇಳ್ತಿದ್ದಿನಿ. ಮತ್ತೆ ಸಿಎಂ ಆಗುವ ವಿಚಾರ ಜನ ತೀರ್ಮಾನ ಮಾಡ್ತಾರೆ ಅನ್ನೋ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು? 5 ವರ್ಷ ಸರ್ಕಾರ ನಡೆಸಲು ನನಗೆ ಅವಕಾಶ ಮಾಡಿಕೊಡಿ ಅಂತ ಜನರಿಗೆ ಈಗಲೂ ಮನವಿ ಮಾಡ್ತೀನಿ. ಹಿಂದಿನ ಅವಧಿಯಲ್ಲಿ ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಈಗಿನ ಸಂಪೂರ್ಣ ಬಹುಮತದ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದ್ದಾರೆ. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಕಾರ್ಯಕ್ರಮ ಜನರ ಮನಸ್ಸಿನಲ್ಲಿ ಉಳಿದಿದೆ. 5 ವರ್ಷಗಳ ಸರ್ಕಾರ ನನಗೆ ಒಂದು ಬಾರಿ ಸಿಕ್ಕಿದ್ರೆ, ನನಗೆ ಆಗಿರುವ ಅನುಭವದಲ್ಲಿ ಉತ್ತಮ ಕೆಲಸ ಮಾಡ್ತೇನೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಮೃದ್ಧಿಯ ನಾಡು, ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಆದ್ರೆ ಇವತ್ತು ಹಣ ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗ್ತಿದೆ. ಇದಕ್ಕೆ ಕಡಿವಾಣ ಹಾಕಿದ್ರೆ. ಇವರು ಕೊಡುವ 2,000 ರೂ. ಅಲ್ಲ ಕನಿಷ್ಠ 10 ಸಾವಿರ ರೂ. ಸಂಪಾದನೆ ಮಾಡುವ ಕಾರ್ಯಕ್ರಮಗಳು ಇವೆ. ಜನರು ಒಂದು ಅವಕಾಶ ನೀಡ್ತಾರೆ ಅನ್ನೋ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ನನಗೆ ಬರುತ್ತೆ ಎಂದು ತಿಳಿಸಿದರು.

ಇಂದಿನ ಸರ್ಕಾರದ ನಡವಳಿಕೆಗಳಿಂದ ಜನರು ಬೇಸತ್ತಿದ್ದಾರೆ. ಜನರಲ್ಲಿ ಸರ್ಕಾರದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಜನರೇ ಈ ಸರ್ಕಾರವನ್ನು ತೆಗೆಯುತ್ತಾರೆ. ನಾವು ತೆಗೆಯಲು ಸಾಧ್ಯವಿಲ್ಲ ಜನರೇ ತೀರ್ಮಾನ ಮಾಡಬೇಕು. ಈ ಪರಿಸ್ಥಿತಿಯಲ್ಲಿ ಜನರೇ ತೀರ್ಮಾನ ಮಾಡ್ತಾರೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಇಸ್ರೇಲ್‌ ಅಧ್ಯಕ್ಷ ನೆತನ್ಯಾಹು ನಿವಾಸದ ಮೇಲೆ ಹಿಜ್ಬುಲ್ಲಾ ಡ್ರೋನ್‌ ದಾಳಿ

ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಸ್ಫೋಟ ಆಗಿದೆ. ಅವಗ ಸ್ಪೋಟ ಆಗುತ್ತೆ ಕಾದು ನೋಡೋಣಾ? ನಾವು ಅವರ ಸರ್ಕಾರ ಅಲ್ಲಾಡಿಸುತ್ತಿವಿ ಅಂತ ಹೇಳಿಲ್ಲ. ಸರ್ಕಾರದ ನಿಷ್ಕ್ರಿಯತೆ ಶಾಸಕರು ಹಳ್ಳಿಗೆ ಹೋಗಿ ಜನರನ್ನ ಭೇಟಿ ಮಾಡದ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ಅಸಮಾಧಾನ ಇದೆ ಸ್ಫೋಟವಾಗುತ್ತೆ ಎಂದು ನುಡಿದರು.

ಶಿರೂರು ಗುಡ್ಡಕುಸಿತ ಸಂತ್ರಸ್ತ ಕುಟುಂಬಕ್ಕೆ ಉದ್ಯೋಗ:
ಇದೇ ವೇಳೆ ನಿರುದ್ಯೋಗ ಸಮಸ್ಯೆ ಕುರಿತು ಮಾತನಾಡಿದ ಅವರು, ಇಂದು 800ಕ್ಕೂ ಹೆಚ್ಚು ಯುವಜನರು ಉದ್ಯೋಗಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಅಂಧ ಯುವಕರಿಗೆ ಒಂದು ಕಂಪನಿ ಕೆಲಸ ಕೊಟ್ಟಿದೆ. ಅದೇ ಕಂಪನಿಯವರು ಸುಮಾರು 700 ಜನಕ್ಕೆ ಆಫರ್ ಕೊಟ್ಟಿದ್ದಾರೆ. ಉದ್ಯೋಗದ ಸಮಸ್ಯೆಯನ್ನು ಸರಿಪಡಿಸುವ ಕೆಲಸ ಖಂಡಿತಾ ಆಗುತ್ತದೆ. ನಾನು ಪ್ರಾಮಾಣಿಕವಾಗಿ ಉದ್ಯೋಗ ಕೊಡಿಸುತ್ತೇನೆ. ಶಿರೂರು ಗುಡ್ಡ ಕುಸಿತದಿಂದ ಅವರ ತಂದೆ ಸಾವನ್ನಪ್ಪಿದರು. ಅವರ ಕುಟುಂಬಕ್ಕೆ ಕೆಲಸ ಕೊಡಿಸುವ ಭರವಸೆ ಕೊಟ್ಟಿದ್ದೆ, ಅದರಂತೆ ಕೆಲಸ ಕೊಡಿಸಿದ್ದೇನೆ. ಇನ್ನೊಬ್ಬರ ಮೆಚ್ಚಿಸಲು ನಾನು ಮಾಡಲ್ಲ, ಜನ ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡ್ತಿದ್ದೇನೆ ಎಂದು ಭಾವುಕರಾದರು.

2018 ಸಿಎಂ ಆಗಿದ್ದಾಗ 50,000 ಉದ್ಯೋಗ ಸೃಷ್ಟಿಸಲು ಡಿಸ್ನಿಲ್ಯಾಂಡ್ ಪ್ಲಾನ್ ಆಗಿತ್ತು. ಕಾವೇರಿ ಪ್ರತಿಮೆ ಅಂತ ಅದು ಅಲ್ಲಿಗೆ ಸ್ಟಾಪ್ ಆಯಿತು. ಇವರು ಏನು ಮಾಡ್ತಾರೆ ನೋಡೋಣ. ರೈತ ವಿರೋಧಿ ನೀತಿ ಅನುಸರಿಸಿ ಯಾವುದೇ ಕಾರ್ಯಕ್ರಮ ಆಗಬಾರದು ಎಂದರು. ಇದನ್ನೂ ಓದಿ: ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

TAGGED:Congress Governmenthd kumaraswamymandyasiddaramaiahಕಾಂಗ್ರೆಸ್ ಸರ್ಕಾರಮಂಡ್ಯಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
7 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
8 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
9 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
9 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
10 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?