Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ

Bengaluru City

ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ

Public TV
Last updated: October 21, 2024 11:43 am
Public TV
Share
4 Min Read
Sudeep Mother
SHARE

ತಾಯಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ನಟ ಸುದೀಪ್ (Actor Sudeep) ತಾಯಿಯ ಕುರಿತು ಸುದೀರ್ಘವಾದ ಭಾವುಕ ಟ್ವೀಟ್‌ವೊಂದನ್ನು (Tweet) ಹಂಚಿಕೊಂಡಿದ್ದಾರೆ.

ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ ಎಂದು ಬರೆದುಕೊಂಡಿದ್ದಾರೆ.

ನಟ ಸುದೀಪ್ ತಾಯಿ ಸರೋಜ ಅವರು ಅ.20ರಂದು ಬೆಳಗ್ಗೆ ಇಹಲೋಕ ತ್ಯಜಿಸಿದರು. ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅ.20ರಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.ಇದನ್ನೂ ಓದಿ: ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

ಪೋಸ್ಟ್‌ನಲ್ಲಿ ಏನಿದೆ?
ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ.

ನನಗೆ ಹಬ್ಬ ಎಂದರೆ ಅದು ನನ್ನ ತಾಯಿ. ನನ್ನ ಮೊದಲ ಅಭಿಮಾನಿ, ಹಿತೈಷಿ ಎಲ್ಲವೂ ಅವರಾಗಿದ್ದರು. ಕೆಟ್ಟ ಕೆಲಸವನ್ನೂ ಇಷ್ಟಪಟ್ಟವರು, ಒಳ್ಳೆಯ ಕೆಲಸ ಮಾಡಿದಾಗಲಂತೂ ಬೆನ್ನು ತಟ್ಟಿ ಸಂಭ್ರಮಿಸಿದವರು. ಈಗ ಆ ಎಲ್ಲ ಸುಂದರ ಘಳಿಗೆಗಳು ನೆನಪು ಮಾತ್ರ.

ನಾನೀಗ ಅನುಭವಿಸುತ್ತಿರುವ ಸಂಕಟವನ್ನು ಹಂಚಿಕೊಳ್ಳಲು ನನ್ನಲ್ಲಿ ಪದಗಳಿಲ್ಲ. ಅವರಿಲ್ಲದ ಶೂನ್ಯವನ್ನು ಒಪ್ಪಿಕೊಳ್ಳಲು ನನ್ನಿಂದ ಆಗುತ್ತಿಲ್ಲ. ಕೇವಲ 24 ಗಂಟೆಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು.

My mother , the most unbiased, loving, forgiving, caring, and giving, in my life was valued , celebrated, and will always be cherished.
*Valued… because she was my true god next to me in the form of a human.
*Celeberated… because she was my festival. My teacher. My true… pic.twitter.com/UTU9mEq944

— Kichcha Sudeepa (@KicchaSudeep) October 21, 2024

ಪ್ರತಿನಿತ್ಯವೂ ನನ್ನ ಮೊಬೈಲ್‌ಗೆ ಬೆಳಗ್ಗೆ 5.30ಕ್ಕೆ ಮೊದಲ ಮೆಸೇಜ್ ಬರುವುದು ಅದು ನನ್ನ ತಾಯಿಯಿಂದಲೇ. `ಗುಡ್ ಮಾರ್ನಿಂಗ್ ಕಂದ’ ಎಂಬ ಸಂದೇಶ ಬರುತ್ತಿತ್ತು. ಅಮ್ಮನಿಂದ ನನಗೆ ಕೊನೆಯ ಸಲ ಸಂದೇಶ ಬಂದಿದ್ದು, ಅಕ್ಟೋಬರ್ 18ರಂದು. ಮಾರನೇ ದಿನ ಬೆಳಗ್ಗೆ ನಾನು ಬಿಗ್‌ಬಾಸ್ ಮನೆಯ ಸೆಟ್‌ನಲ್ಲಿದ್ದೆ. ಅಂದು ಅಮ್ಮನ ಸಂದೇಶ ನನಗೆ ತಲುಪಲೇ ಇಲ್ಲ. ಕಳೆದ ಹಲವು ವರ್ಷಗಳಿಂದ ನಾನು ಯಾವತ್ತೂ ಸಂದೇಶವನ್ನು ಮಿಸ್ ಮಾಡಿಕೊಂಡವನು ಅಲ್ಲ. ಇದೇ ಮೊದಲ ಬಾರಿಗೆ ಅಮ್ಮ ಸಂದೇಶ ಕಳುಹಿಸಲಿಲ್ಲ.

ನಾನೇ ಅಮ್ಮನ ಮೊಬೈಲ್‌ಗೆ ಸಂದೇಶ ಕಳುಹಿಸಿದೆ. ಕರೆ ಮಾಡಿ ಈ ಕುರಿತು ವಿಚಾರಿಸೋಣವೆಂದರೆ, ಬಿಗ್‌ಬಾಸ್ ಚಿತ್ರೀಕರಣದ ಒತ್ತಡದಲ್ಲಿದ್ದೆ. ಹಾಗಾಗಿ ಸಾಧ್ಯವಾಗಲಿಲ್ಲ. ಶನಿವಾರದ ಬಿಗ್‌ಬಾಸ್ ಎಪಿಸೋಡ್ ಚಿತ್ರೀಕರಣಕ್ಕಾಗಿ ಇನ್ನೇನು ವೇದಿಕೆಯ ಮೇಲೆ ಹತ್ತಬೇಕು ಎನ್ನುವಷ್ಟರಲ್ಲಿ ಅಮ್ಮನಿಗೆ ಹುಷಾರಿಲ್ಲದ, ಅವರು ಆಸ್ಪತ್ರೆಗೆ ದಾಖಲಾಗಿರುವ ಸಂದೇಶ ಬಂತು. ಕೂಡಲೇ ಸಹೋದರಿಗೆ ಕರೆ ಮಾಡಿ, ಡಾಕ್ಟರ್ ಜೊತೆ ಮಾತನಾಡಿ ನಾನು ಸ್ಟೇಜ್ ಮೇಲೆ ಹತ್ತಿದೆ.

ನಾನು ಚಿತ್ರೀಕರಣದಲ್ಲಿ ಇರುವಾಗಲೇ ಅಮ್ಮನ ಆರೋಗ್ಯ ಸ್ಥಿತಿ ಗಂಭೀರ ಅಂತ ನನ್ನ ತಂಡದವರು ತಿಳಿಸಿದರು. ಎಂತಹ ಅಸಹಾಯಕ ಸ್ಥಿತಿ ನನ್ನದು. ಮೊದಲ ಬಾರಿಗೆ ಇಂಥದ್ದೊಂದು ಸನ್ನಿವೇಶ ನನಗೆ ಎದುರಾಗಿದ್ದು. ಶೂಟಿಂಗ್ ಮಾಡುತ್ತಿರುವಾಗಲೇ ನನ್ನ ತಲೆಯಲ್ಲಿ ಹಲವಾರು ವಿಷಯಗಳು ಚಲಿಸುತ್ತಿದ್ದವು. ಸಾಕಷ್ಟು ಭಯವಿತ್ತು. ಶನಿವಾರದ ಎಪಿಸೋಡ್ ಮುಗಿಸಲೇಬೇಕು ಎನ್ನುವ ಒತ್ತಡವೂ ಇತ್ತು. ಎಲ್ಲವನ್ನೂ ನಿಭಾಯಿಸಬೇಕಿತ್ತು. ಮನಸ್ಸನ್ನು ಶಾಂತಚಿತ್ತಕ್ಕೆ ತಂದು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟೆ. ಇದೆಲ್ಲವೂ ಸಾಧ್ಯವಾಗಿದ್ದು, ನನ್ನ ತಾಯಿ ಹೇಳಿಕೊಟ್ಟ ಪಾಠದಿಂದ.

ಎಲ್ಲ ಒತ್ತಡವನ್ನೂ ನಿಭಾಯಿಸಿಕೊಂಡು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟು ಕೂಡಲೇ ಆಸ್ಪತ್ರೆಯತ್ತ ಧಾವಿಸಿದೆ. ನಾನು ಆಸ್ಪತ್ರೆ ತಲುಪುವ ಮುನ್ನವೇ ಅಮ್ಮನನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರು. ಅತ್ಯಂತ ನೋವಿನ ಸಂಗತಿ ಅಂದರೆ, ನನ್ನ ತಾಯಿ ಪ್ರಜ್ಞೆಯಲ್ಲಿರುವಾಗ ಕೊನೆಯ ಬಾರಿಗೆ ಅವರನ್ನು ನೋಡಲು ಆಗಲೇ ಇಲ್ಲ. ಅವರು ಕೊನೆಯುಸಿರು ಎಳೆಯುವ ಮುನ್ನ ಅಮ್ಮ ನೋವಿನಲ್ಲೇ ಸಾಕಷ್ಟು ಹೋರಾಡಿದ್ದಳು. ಕೆಲವೇ ಕೆಲವು ಗಂಟೆಗಳಲ್ಲಿ ಏನೆಲ್ಲ ಬದಲಾವಣೆ ಆಗಿದ್ದವು.

ಅಮ್ಮ ಇಲ್ಲ ಅನ್ನುವುದು ಸತ್ಯ. ಆದರೆ, ವಾಸ್ತವವನ್ನು ಹೇಗೆ ಸ್ವೀಕರಿಸಬೇಕು ಅನ್ನೋದು ಗೊತ್ತಾಗಲಿಲ್ಲ. ಮೊನ್ನೆಯಷ್ಟೇ ಚಿತ್ರೀಕರಣಕ್ಕೆ ಹೊರಡುವ ಮುನ್ನ ಬಿಸಿ ಅಪ್ಪುಗೆಯೊಂದನ್ನು ಕೊಟ್ಟು ಕಳುಹಿಸಿದ್ದರು. ಕೆಲವೇ ಕೆಲವು ಗಂಟೆಗಳಲ್ಲಿ ಇಲ್ಲವಾಗಿ ಹೋದರು. ನಾನು ನನ್ನ ತಾಯಿಯನ್ನು ಕಳೆದುಕೊಂಡಿದ್ದೇನೆ. ಈ ಮಂಗಳಕರ ದಿನವು ಪ್ರಕೃತಿಯು ಈ ಭೂಮಿಯಿಂದ ತಾಯಿಯನ್ನು ಕರೆದುಕೊಂಡು ಹೋಗಿದೆ ಎಂದು ಸಮಾಧಾನಿಸಿಕೊಳ್ಳುವೆ. ನನ್ನ ಬದುಕಿನ ಅತ್ಯಂತ ಬೆಲೆಬಾಳುವ ಮುತ್ತೊಂದು ನನ್ನಿಂದ ಜಾರಿಹೋಗಿದೆ. ನನ್ನ ತಾಯಿ ಶಾಂತಿಯಿಂದಲೇ ತುಂಬಿರೋ ಮಡಿಲನ್ನು ಸೇರಿದ್ದಾರೆ ಎಂದು ಖಾತ್ರಿಯಿದೆ.

ಅಮ್ಮನಿಗೆ ಗೌರವ ಸಲ್ಲಿಸಲು ಆಗಮಿಸಿದ್ದ ಪ್ರತಿಯೊಬ್ಬರಿಗೂ ನಾನು ಋಣಿ ಮತ್ತು ಧನ್ಯವಾದಗಳನ್ನು ತಿಳಿಸುತ್ತೇನೆ. ಇದು ನಿಜವಾಗಿಯೂ ನಿಮ್ಮೆಲ್ಲರ ಕರುಣೆಯಾಗಿತ್ತು. ನನ್ನ ತಾಯಿ ಆತ್ಮಕ್ಕೆ ಶಾಂತಿ ಕೋರಿದ ಎಲ್ಲರಿಗೂ ಧನ್ಯವಾದಗಳು

ಅಮ್ಮಾ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ
ನಾನು ನಿಮ್ಮನ್ನು ಸದಾ ಪ್ರೀತಿಸುತ್ತೇನೆ ಮತ್ತು ಅಮೂಲ್ಯವಾದದ್ದನ್ನು ಕಳೆದುಕೊಂಡಿದ್ದೇನೆ.
-ದೀಪು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಬ್ರ್ಯಾಂಡ್‌ ಬೆಂಗಳೂರಿಗೆ ಮುಜುಗರ – ಕ್ರೀಡಾಂಗಣದ ಆವರಣಕ್ಕೆ ನೀರು, ಏಷ್ಯನ್‌ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಗಳು ಮುಂದೂಡಿಕೆ

TAGGED:actor sudeepsandalwoodSarojatweetಕಿಚ್ಚ ಸುದೀಪ್ನಟ ಸುದೀಪ್ಸರೋಜಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
2 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
3 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
3 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
4 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
4 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?