Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ – ಡಿಕೆಶಿ ಖಡಕ್‌ ವಾರ್ನಿಂಗ್‌

Public TV
Last updated: October 23, 2024 10:19 pm
Public TV
Share
2 Min Read
DK Shivakumar 6
SHARE

ಬೆಂಗಳೂರು: ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ (Rajkaluve Encroachment) ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೇ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

DK Shivakumar 2 3

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿ ಪಡಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ. ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶ ನೀಡಿದ್ದೇನೆಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಸಾವು ಪ್ರಕರಣ – ಎಇಇ ಅಮಾನತು

ಯಲಹಂಕದ ಕೇಂದ್ರಿಯ ವಿಹಾರದಲ್ಲಿ 8 ಬ್ಲಾಕ್ ಗಳಿದ್ದು ಸುಮಾರು 600ಕ್ಕೂ ಹೆಚ್ಚು ಫ್ಲಾಟ್‌ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯಕ್ಕಾಗಿ ಸುಪರ್ಧಿಗೆ ತೆಗೆದುಕೊಂಡಿದೆ. ಶೇ.95 ರಷ್ಟು ನಿವಾಸಿಗಳು ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎಂದು ಹೇಳಿದ್ದಾರೆ. ಅವರನ್ನು ಇಲ್ಲಿಯೇ ಬಿಡಲು ಆಗುವುದಿಲ್ಲ. ಏಕೆಂದರೆ ಕುಡಿಯಲು ನೀರಿಲ್ಲ, ತಿನ್ನಲು ಆಹಾರವಿಲ್ಲ ಹೀಗಿದ್ದಾಗ ಏನಾದರೂ ತೊಂದರೆ ಆದರೆ ನಾವು ಜವಾಬ್ದಾರರಾಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ʻದಂಗಲ್‌ʼ ಸಿನಿಮಾ ಗಳಿಸಿದ್ದು 2,000 ಕೋಟಿ, ನಮಗೆ ಸಿಕ್ಕಿದ್ದು ಕೇವಲ 1 ಕೋಟಿ: ಬಬಿತಾ ಫೋಗಟ್‌

ಅನೇಕರು ವಯಸ್ಸಾದವರು ಮನೆ ಬಿಟ್ಟು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಬಗ್ಗೆ ಭಾವನಾತ್ಮಕವಾಗಿ ಯೋಚನೆ ಮಾಡುತ್ತಿದ್ದಾರೆ. ಅಂತಹವರಿಗೆ ಒಂದು ವಾರದ ಮಟ್ಟಿಗೆ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ಇದು ನಮ್ಮ ಜವಾಬ್ದಾರಿ. ಇಲ್ಲಿನ ನಿವಾಸಿಗಳ ಸಂಘದವರೂ ಸಹಕಾರ ನೀಡುತ್ತಿದ್ದಾರೆ. ತೊಂದರೆಗೆ ಒಳಗಾದವರಿಗೆ ಅವರ ಮನೆಯಂತೆಯೇ ಸೌಲಭ್ಯ ಕಲ್ಪಿಸಿಕೊಡಲಾಗುವುದು. ನಿವಾಸಿಗಳು ಮುಜುಗರಕ್ಕೆ ಒಳಗಾಗದೇ ಅಧಿಕಾರಿಗಳ ಬಳಿ ಕೇಳಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಳೆ ನೀರು ತುಂಬಿಕೊಂಡಿರುವುದಕ್ಕೆ ಭವಿಷ್ಯದಲ್ಲಿ ಪರಿಹಾರವೇನು ಎಂದು ಕೇಳಿದಾಗ, ಬೆಂಗಳೂರಿನ ಹಾಗೂ ಯಲಹಂಕ ಇತಿಹಾಸದಲ್ಲಿಯೇ 115- 120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ನಮಗೆ ಇಷ್ಟು ಜಾಸ್ತಿ ಮಳೆ ಬರುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುವುದಕ್ಕೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಅಮರಾವತಿ ಡ್ರೋನ್ ಸಮ್ಮೇಳನ 2024 | ಆಕಾಶವನ್ನೇ ಬೆಳಗಿದ 5,500 ಡ್ರೋನ್, 5 ಗಿನ್ನಿಸ್ ರೆಕಾರ್ಡ್

ಅಕ್ಕಪಕ್ಕದಲ್ಲಿ ಕೆರೆಗಳ ಪಕ್ಕ ನೀರು ಹರಿಯಲು ಮತ್ತು ನಿಂತುಕೊಳ್ಳಲು ಜಾಗವಿತ್ತು, ಈಗ ಜಾಗ ಕಡಿಮೆಯಾಗಿದೆ, ಅದಕ್ಕಾಗಿ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗುವುದು. ಈ ರೀತಿಯ ಅವಘಡ ನಮ್ಮಲ್ಲಿ ಮಾತ್ರವಲ್ಲ, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಆಗಿದೆ. ಇತ್ತೀಚೆಗೆ ಫ್ರಾನ್ಸ್‌ನಲ್ಲಿಯೂ ತೊಂದರೆ ಆಗಿದೆ. ನಾವು ಶೀಘ್ರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

TAGGED:bengaluruBengaluru RainsDK SivakumarKendriya Vihar ApartmentRajkaluve Occupyಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ಡಿ.ಕೆ.ಶಿವಕುಮಾರ್ಬೆಂಗಳೂರುಮಳೆರಾಜಕಾಲುವೆ ಒತ್ತುವರಿ
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
55 minutes ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
1 hour ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
1 hour ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
2 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
2 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?