Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚನ್ನಪಟ್ಟಣ ಉಪಚುನಾವಣೆ| ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ – ಹೆಚ್‌ಡಿಕೆ ಆರೋಪ

Public TV
Last updated: October 26, 2024 4:21 pm
Public TV
Share
3 Min Read
mysuru HD kumaraswamy
SHARE

– ಸಿಎಂ ಎಂದಿಗೂ ಜನರೆದುರು ಕಣ್ಣೀರು ಹಾಕಿಲ್ವಾ?- ಸಿಎಂಗೆ ಹೆಚ್‌ಡಿಕೆ ತಿರುಗೇಟು

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (  Channapatna By Election) ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhilkumaraswamy) ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎನ್‌ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದು ದೂರಿದರು. ಇದನ್ನೂ ಓದಿ: ಶಿಗ್ಗಾಂವಿ ಕಾಂಗ್ರೆಸ್‌ ಬಂಡಾಯ ಶಮನ – ಅಜ್ಜಂಪೀರ್‌ ಮನವೊಲಿಸುವಲ್ಲಿ ಸಿಎಂ ಯಶಸ್ವಿ

ಈ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲಾ ಕೇಸ್ ಹಾಕಿಕೊಂಡು ಇವರು ಚುನಾವಣೆ ನಡೆಸಲು ಹೊರಟಿದ್ದಾರೆ. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೊಟೀಸ್ ಕೊಟ್ಟಿದ್ದಾರೆ. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ. ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆ ಎಂದು ಗುಡುಗಿದರು. ಇದನ್ನೂ ಓದಿ: ದೀಪಾವಳಿ ಪ್ರಯುಕ್ತ 2,000 ವಿಶೇಷ ಬಸ್‌; ಎಲ್ಲಿಗೆ? ಯಾವಾಗ? – ಇಲ್ಲಿದೆ ಫುಲ್‌ ಡಿಟೇಲ್ಸ್‌

ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲಾರೂ ಚನ್ನಪಟ್ಟಣಕ್ಕೆ ಹೀಗಿದ್ದರಲ್ಲವೇ? ಹಾಗಿದ್ದರೆ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದರು.

ಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗುತ್ತಿದ್ದಾರೆ ಇವರು? ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೋಟಿಸ್ ಕೊಟ್ಟಿದ್ದಾರೆ. ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೋಗುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡುತ್ತಿದೆ ಸರ್ಕಾರ. ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು ಎಂದು ಕಿಡಿಕಾರಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ| ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ – ಹೆಚ್‌ಡಿಕೆ ಆರೋಪ

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ (Shiggoan) ಸೇರಿದಂತೆ ಮೂರೂ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಮೂರೂ ಕ್ಷೇತ್ರ ಗೆದ್ದಾಗಿದೆ ಎಂದು ಸಿಎಂ ಹೇಳುತ್ತಿದ್ದಾರೆ. ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಅಂದಿದ್ದಾರೆ. ಪಾಪ.. ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ. ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೋರ್ಟ್ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ – ಹೆಚ್‌ಎಂಟಿ ಭೂಮಿ ವಶಕ್ಕೆ ಹೆಚ್‌ಡಿಕೆ ಕಿಡಿ

ನಾನು ಇಡೀ ದೇಶಕ್ಕೆ ಕೆಲಸ ಮಾಡುತ್ತಿದ್ದೇನೆ:
ಕುಮಾರಸ್ವಾಮಿ ಮಂಡ್ಯಕ್ಕೆ ಮಾತ್ರ ಸೀಮಿತಾರಾಗಿದ್ದಾರೆ ಎಂಬ ಸಿಎಂ ( Siddaramaiah) ಹೇಳಿಕೆಗೆ ಹೆಚ್ಡಿಕೆ ತಿರುಗೇಟು ಕೊಟ್ಟರಲ್ಲದೆ, ಕಳೆದ ನಾಲ್ಕು ತಿಂಗಳ ನನ್ನ ಟಿಪಿ ನೋಡಿದ್ದಾರಾ ಅವರು? ನನ್ನ ಇಲಾಖೆಗೆ ಸಂಬಂಧಿಸಿ ಹಲವು ರಾಜ್ಯಗಳಿಗೆ ಹೋಗಿದ್ದೇನೆ. ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸಗಢ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿಗೆ ಹೋಗಿ ಬಂದಿದ್ದೇನೆ. ನಾನು ಎಷ್ಟು ರಾಜ್ಯಗಳಿಗೆ ಹೋಗಿದ್ದೇನೆ ಗೊತ್ತಿದೆಯಾ ಅವರಿಗೆ? ದೆಹಲಿಯಲ್ಲಿ ಸಮಯ ವ್ಯರ್ಥ ಮಾಡದೇ ಕೆಲಸ ಮಾಡುತ್ತಿದ್ದೇನೆ. ಇವರಿಂದ ನಾನು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅಗತ್ಯ ಇಲ್ಲ. ಹಾಗಾದರೆ, ಕರ್ನಾಟಕಕ್ಕೆ ಬರಲೇಬಾರದಾ ನಾನು? ನನ್ನನ್ನು ಗೆಲ್ಲಿಸಿದ ಜನರ ಕಷ್ಟ ಕೇಳಲು ಬರಲೇಬಾರದಾ? ನಾನು ಕರ್ನಾಟಕಕ್ಕೆ ಬಂದರೆ ಇವರು ನಿದ್ದೆಗೆಡುತ್ತಾರೆ ಎಂದು ಅವರು ಕಿಡಿಕಾರಿದರು. ಇದನ್ನೂ ಓದಿ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ – ದಾಖಲೆ ಪರಿಶೀಲನೆ ಬಳಿಕ ಕ್ರಮ: ಪರಮೇಶ್ವರ್

TAGGED:bengaluruChannapatna By Electioncongresshd kumaraswamysiddaramaiahಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆಬೆಂಗಳೂರುಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Lakshmi Hebbalkar 4
Bengaluru City

ಗೃಹ ಲಕ್ಷ್ಮಿ ಹಣ ಮೇ ತಿಂಗಳದ್ದು ಮಾತ್ರ ಬಾಕಿಯಿದೆ: ಹೆಬ್ಬಾಳ್ಕರ್

Public TV
By Public TV
4 minutes ago
Ajay Rao
Bengaluru City

ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್

Public TV
By Public TV
14 minutes ago
Ramalinga Reddy
Bengaluru City

ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ರಾಮಲಿಂಗಾರೆಡ್ಡಿ

Public TV
By Public TV
15 minutes ago
Donald Trump Asim Munir Dinner Meeting
Latest

ಮುನೀರ್‌ಗೆ ಟ್ರಂಪ್‌ ಡಿನ್ನರ್‌ – ಪಾಕ್‌ ನೆಲದಿಂದ ಅಮೆರಿಕ ಇರಾನ್‌ ಮೇಲೆ ದಾಳಿ ಮಾಡುತ್ತಾ?

Public TV
By Public TV
27 minutes ago
male mahadeshwar hills hundi counting
Chamarajanagar

ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

Public TV
By Public TV
30 minutes ago
RAMALINGA REDDY
Bengaluru City

ನಮ್ಮ ಮೆಟ್ರೋದಲ್ಲಿ ನಂದಿನಿಗೆ ಮೊದಲ ಆದ್ಯತೆ ಕೊಡಬೇಕು: ರಾಮಲಿಂಗಾ ರೆಡ್ಡಿ

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?