Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

Public TV
Last updated: October 26, 2024 10:17 pm
Public TV
Share
3 Min Read
CP Yogeshwar 1
SHARE

-ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ
-ದೇವೇಗೌಡರು ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ ಎಂದ ಸಿಪಿವೈ

ರಾಮನಗರ: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ ಎಂದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (CP Yogeshwar) ಹೇಳಿದರು.

ಜಿಲ್ಲೆಯ ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು. ಕುಮಾರಸ್ವಾಮಿ (Kumaraswamy) ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ. ಇವರು `ಒಂದಗೆ ಉಂಡರು ಅವರೇಕಾಳು ತಿನ್ನಬೇಡ’ ಎನ್ನುವಂತಹ ಜನ. ಅವರು, ನಾನು ಪರಸ್ಪರ ವಿರೋಧ ಮಾಡಿಕೊಂಡೆ ಇಲ್ಲಿಯವರೆಗೂ ಬಂದಿದ್ದೀವಿ. ಮೈತ್ರಿಯಾದ ಮೂರ್ನಾಲ್ಕು ತಿಂಗಳಲ್ಲೇ ಅವರ ಸಹವಾಸ ಸಾಕು ಅನ್ನಿಸಿತ್ತು. ಯೋಗೇಶ್ವರ್ ಹಾಗೂ ಡಿಕೆಶಿ ಇಬ್ಬರು ಮೊದಲೇ ಮಾತನಾಡಿಕೊಂಡಿದ್ದರು ಎಂದು ಹೇಳುತ್ತಿದ್ದರು. ಆದರೆ ನಾನು ಕೊನೆ ಕ್ಷಣದವರೆಗೂ ಟಿಕೆಟ್‌ಗಾಗಿ ಕಾದೆ. ಆಗಲಿಲ್ಲ. ಅದಕ್ಕಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾದೆ. ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿಗೆ ನಾನೇ ಕಾರಣನಾಗಿದ್ದೆ. ಈಗ ಅವರು ಎನ್‌ಡಿಎ ಲಾಭ ಪಡೆಯುತ್ತಿದ್ದರೆ ಅದಕ್ಕೆ ನಾನು ಕಾರಣ. ಅವರ ಭಾವ ಸಂಸದರಾಗಲು ನಾನು ಕಾರಣ ಎಂದರು.ಇದನ್ನೂ ಓದಿ: ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದ್ರೂ ಅಭಿವೃದ್ಧಿ ಮಾಡಿಲ್ಲ. ರಾಜಕೀಯ ಸಿದ್ದಾಂತ ಏನೇ ಇರಬಹುದು, ಅಭಿವೃದ್ಧಿ ವಿಚಾರದಲ್ಲಿ ಒಂದೇಯಾಗಿರುತ್ತದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಿಲ್ಲ. ಯಮೋಷನಲ್ ಆಗಿ ಜನರ ಹತ್ತಿರ ಬರುತ್ತಾರೆ. ಕಣ್ಣೀರು ಹಾಕುತ್ತಾರೆ, ಡ್ರಾಮ ಮಾಡುತ್ತಾರೆ. ದೇವೇಗೌಡರು ಬಂದೂ ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ. ಇದಕ್ಕೆಲ್ಲ ಜನರು ಮರುಳಾಗಬಾರದು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ನಾನು ಸೋಲನ್ನು ಅನುಭವಿಸಿದೆ. ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ನಾನು ಹಾಗೂ ಡಿಕೆಶಿ ಒಂದೇ ಜಿಲ್ಲೆಯ ಮಕ್ಕಳು. ನನಗೆ ಹಾಗೂ ಡಿಕೆಶಿ ನಡುವೆ ಸುಧೀರ್ಘವಾದ ಸ್ನೇಹ ಇದೆ. ಹಳೇ ಬೇರು ಹೊಸ ಚಿಗುರು ಎಂಬಂತೆ ಕಾಂಗ್ರೆಸ್‌ಗೂ ನಮಗೂ ಸಂಬಂಧ ಇದೆ. ಇಂದು ಸಭೆಗೆ ಬಂದಿರುವ ಬಹುತೇಕ ಕಾರ್ಯಕರ್ತರ ಹೆಸರು ನನಗೆ ಗೊತ್ತಿದೆ. ರಾಜಕೀಯ ಪಕ್ವತೆ ಬಂದಾಗ ಕೆಲವೊಂದು ಬದಲಾವಣೆ ಆಗುತ್ತದೆ. ನಾವು ಸಾಕಷ್ಟು ಬೆಂದು ಹೋದ ಮೇಲೆ ರಾಜಕೀಯ ಸ್ಥಿರತೆ ಬಂದಿದೆ ಎಂದು ಹೇಳಿದರು.

ನಾನು ಹಾಗೂ ಸುರೇಶ್ ಕೆಲವು ಸಾರಿ ಮಾತನಾಡಿದ್ದೇವು. ಸೋಲು ಗೆಲುವಿನ ಬಗ್ಗೆ ಮಾತನಾಡುತ್ತಿದ್ದೇವು. ಬೂತ್ ಗೆದ್ದರೆ ತಾಲೂಕು ಗೆದ್ದಹಾಗೆಯೇ ಅರ್ಥ. ಇಬ್ಬರೂ ಒಂದಾಗುವ ಮೂಲಕ ತಾಲೂಕಿನ ಜನರ ಮನಸ್ಸು ಗೆಲ್ಲಬೇಕು. ಈ ಚುನಾವಣೆ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಬೇಕು. ಇದು ನನ್ನ 10ನೇ ಚುನಾವಣೆ. ಬೇರೆ ಬೇರೆ ಚುನಾವಣೆಯಲ್ಲಿ, ಬೇರೆ ಬೇರೆ ಪಕ್ಷದಲ್ಲಿ ನಾನು ಗೆದ್ದಿದ್ದೇನೆ. ಕಾಂಗ್ರೆಸ್ ನಿಂದಲೇ ಎರಡು ಬಾರಿ ಗೆದ್ದಿದ್ದೇನೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ. ತಾಲೂಕಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.

ನನಗೂ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಯಾವುದೇ ಕೇಸು, ಪೊಲೀಸು ಎಂದು ಹೋಗಿಲ್ಲ. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರದ ಅಭಿವೃದ್ಧಿ ಕೆಲಸಗಳು ಜನರ ಮನದಲ್ಲಿವೆ. ನಾನು ಗೆದ್ದು ಶಾಸಕನಾದ್ರೆ ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸಬಹುದು. ಹಾಗಾಗಿ ತಾಲೂಕಿನ ಜನ ನನ್ನನ್ನ ಗೆಲ್ಲಿಸಿಕೊಡಿ. ಭಿನ್ನಾಭಿಪ್ರಾಯ ಮರೆತು ಇಬ್ಬರೂ ಕೆಲಸ ಮಾಡೋಣ. ನಾನು ನಿಮ್ಮ ಹಳ್ಳಿ ಹಳ್ಳಿಗೆ ಬಂದು ಮಾತನಾಡ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಕಾರವಾರ | ದೇವಬಾಗ್ ಕಡಲ ತೀರದಲ್ಲಿ ನಟ ರಮೇಶ್ ಅರವಿಂದ್

ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಆಗಿದ್ದಾರೆ. ಅವರೇ ಕಾರ್ಯಕರ್ತರ ಬಳಿ ಒತ್ತಾಯ ಮಾಡಿಸಿ ಟಿಕೆಟ್ ಕೊಟ್ಟಿದ್ದಾರೆ. ಅವರೇ ಬಸ್ ಮಾಡಿ ಕಾರ್ಯಕರ್ತರನ್ನ ಬೆಂಗಳೂರಿಗೆ ಕರೆಸಿ ಕೊಂಡು ನಾಟಕ ಮಾಡುತ್ತಿದ್ದಾರೆ. ಅದಕ್ಕೆ ಬೆಲೆ ಕೊಡಬೇಡಿ ಎಂದು ಹೇಳಿದರು.

TAGGED:channapatna ByElectioncongressCP Yogeshwarhd kumaraswamyramanagarಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
2 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
3 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
3 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
3 hours ago
Narendra Modi Putin
Latest

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ: ರಷ್ಯಾ

Public TV
By Public TV
3 hours ago
Agni 5 Missile
Latest

ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?