Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

Latest

ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

Public TV
Last updated: October 27, 2024 1:36 pm
Public TV
Share
3 Min Read
nikhil kumaraswamy
SHARE

 ರಾಮಮನಗರ: ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ ಎಂದು ಚಿನ್ನಪಟ್ಟಣ ಕ್ಷೇತ್ರದ ಜನತೆ ಮುಂದೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಡಿಕೊಂಡರು.

ಉಪಚುನಾವಣೆ ಹಿನ್ನೆಲೆ ಮಾಕಳಿ ಗ್ರಾಮದ ಪ್ರಚಾರದಲ್ಲಿ ನಿಖಿಲ್, ಕುಮಾರಣ್ಣನ ನಾಯಕತ್ವಕ್ಕೆ ಇದು ಅಗ್ನಿ ಪರೀಕ್ಷೆ. ಇಲ್ಲಿ ನಿಖಿಲ್ ಪ್ರಶ್ನೆ ಅಲ್ಲ. ಎಲ್ಲವೂ ನಿಮ್ಮ ಕೈಯಲ್ಲಿದೆ. ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ. ದೇವೇಗೌಡರು, ಕುಮಾರಣ್ಣ ಅವ್ರು ಕೆಲಸ ಮಾಡಿದ್ದಾರೆ. ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ. ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಈ ಜಿಲ್ಲೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋದ್ರೆ ಎಲ್ಲಿ ಕೆರೆಗೆ ನೀರು ತುಂಬಿಸುತ್ತಿದ್ದರು? ಗೋಲಿಬಾರ್ ಆಗಿ ಇಬ್ರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ಪಾಠ ಮಾಡಿದ್ದಾರೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ

Nikhil Kumaraswamy NDA Candidate

ಕುಮಾರಸ್ವಾಮಿ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವ್ರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿನ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡ್ರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದು ಜನತೆಯಲ್ಲಿ ಕೇಳಿಕೊಂಡರು.

ಕುಮಾರಸ್ವಾಮಿ ಅವ್ರನ್ನ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಕುಮಾರಣ್ಣ ಅವ್ರು ಬಡವರ, ದಲಿತರ, ಯುವಕರು, ರೈತರ ಪರವಾಗಿ ಕೆಲಸ ಮಾಡಿದ್ದಾರೆ. ಕುಮಾರಣ್ಣರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಚನ್ನಪಟ್ಟಣ ಜನತೆಗೆ ಸೇರಬೇಕು. ಮಂಡ್ಯದಲ್ಲಿ ಕುಮಾರಣ್ಣ ಲೋಕಸಭೆ ಗೆದ್ದಮೇಲೆ ತೆರವಾಗಿದೆ. ನಿನ್ನೆ ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಈಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವ ವ್ಯಕ್ತಿ, ಚುನಾವಣೆಯಲ್ಲಿ ನಿಲ್ಲಬೇಕು ಅಂತಾ ಕೇಳಿದ್ರು. ಆಗ ಕುಮಾರಣ್ಣ, ಮೊದಲು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ರಾಷ್ಟ್ರೀಯ ನಾಯಕರ ಜೊತೆ ಹೋಗಿ ಮಾತಾಡೋಣ ಅಂದಿದ್ರು. ಅದಾದ ನಂತರ ಬೆಳವಣಿಗೆ ನೀವೆ ನೋಡಿದ್ದೀರಿ. ಬೆಂಗಳೂರು ಖಾಸಗಿ ಹೋಟೆಲ್‌ನಲ್ಲಿ ಅವರ ಜೊತೆ ಚರ್ಚೆ ಮಾಡಿದ್ವಿ. ಜೆಡಿಎಸ್ ಸಾಂಪ್ರದಾಯಿಕ ಮತಗಳಿವೆ, ಜೆಡಿಎಸ್‌ನಿಂದ ನಿಂತ್ಕೊಳ್ಳಿ ಅಂತಾ ನಮ್ಮ ನಾಯಕರು ಹೇಳಿದ್ರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇದ್ರೂ ನಮ್ಮ ನಾಯಕರು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಅಂತಾ ಕೇಳಿದ್ರು. ಆದಾದ ಮೇಲೆ ಏನೆಲ್ಲ ಮಾತಾಡಿದ್ರು ನೋಡಿದ್ದೀರಿ. ಏನೇ ನೋವಿದ್ರು ಸಹಿಸ್ಕೊಂಡ್ವಿ. ತರಾತರಿಯಲ್ಲಿ ರಾಜೀನಾಮೆ ಕೊಟ್ಟು ಹೋಗಿ ಕಾಂಗ್ರೆಸ್ ಸೇರಿಕೊಂಡರು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ

ಬಿಜೆಪಿ ಅಷ್ಟೆಲ್ಲ ಸ್ಥಾನ ಕೊಟ್ಟಿದ್ರು ಹೋದ್ರು. ಅವ್ರು ಯಾವ ಪಕ್ಷದಲ್ಲೂ ಉಳಿದುಕೊಳ್ಳಲ್ಲ. ಡಿ.ಕೆ.ಶಿವಕುಮಾರ್ ಮಾತು ಬಹಳ ಬೇಸರ ಆಗಿದೆ. ಹಿಂದೆ ದೇವೇಗೌಡರಿಗೆ ಮೋಸಮಾಡಿ ನಮ್ಮ ಪಕ್ಷದ ಕಾರ್ಯಕರ್ತರು ನಿಮ್ಮನ್ನ ಸಂಸದರಾಗಿ ಮಾಡಿದ್ರು. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊAಡಿರಲಿಲ್ಲ. ರಾಜ್ಯದಲ್ಲಿ ಸಭೆ ಮಾಡಿ ಸಂಘಟನೆ ಮಾಡ್ತಿದ್ದೆ. ಈಗ ಒಬ್ಬ ವ್ಯಕ್ತಿ ತೆಗೆದುಕೊಂಡ ತೀರ್ಮಾನ, ಇಡಿ ಸಚಿವ ಸಂಪುಟ ಇಲ್ಲಿ ಬೀಡು ಬಿಟ್ಟಿದ್ದರಿಂದ ಕಾರ್ಯಕರ್ತ ಒತ್ತಾಯ ಮಾಡಿದ್ರು. ರಾಮನಗರ, ಮಂಡ್ಯ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ರಾಮನಗರದಲ್ಲಿ ಕೂಪನ್ ಕಾರ್ಡ್ ಕೊಟ್ಟಿದ್ರು. ಅದಕ್ಕೆ ಉತ್ತರ ಕೊಡಬೇಕಲ್ವಾ? ನಾವು ಕುತಂತ್ರ ಮಾಡಿ ರಾಜಕಾರಣ ಮಾಡಿದವರಲ್ಲ ಎಂದು ಮಾತನಾಡಿದರು.

TAGGED:Channapatna Bypolljdsnikhil kumaraswamyramanagaraಚನ್ನಪಟ್ಟಣ ಉಪಚುನಾವಣೆನಿಖಿಲ್ ಕುಮಾರಸ್ವಾಮಿರಾಮನಗರ
Share This Article
Facebook Whatsapp Whatsapp Telegram

Cinema news

Kantara Chapter 1 2
ಐತಿಹಾಸಿಕ ಕ್ಷಣ – ಆಸ್ಕರ್ ವೇದಿಕೆ ಪ್ರವೇಶಿಸಿದ ʻಕಾಂತಾರ: ಚಾಪ್ಟರ್ 1ʼ
Cinema Latest Main Post Sandalwood
jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories

You Might Also Like

Hubballi Keshwapur
Dharwad

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ – ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್‌ ವರ್ಗಾವಣೆ

Public TV
By Public TV
2 hours ago
Vijayapura 3
Districts

PUBLiC TV Impact | 4 ದಶಕಗಳ ಕನಸು ನನಸು – ವಿಜಯಪುರದ ಸೈಕ್ಲಿಂಗ್ ಪಥ ಲೋಕಾರ್ಪಣೆಗೆ ಸಿದ್ಧ

Public TV
By Public TV
2 hours ago
Teacher
Crime

ಕೆಲಸ ಗಿಟ್ಟಿಸಿಕೊಳ್ಳಲು ಪಾಕ್‌ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಶಿಕ್ಷಕಿ ವಿರುದ್ಧ FIR

Public TV
By Public TV
2 hours ago
Internet shutdown in Iran Massive protest at Khameneis hometown Mashhad
Latest

ಇರಾನ್‌ನಲ್ಲಿ ಇಂಟರ್‌ನೆಟ್‌ ಬಂದ್‌ – ಖಮೇನಿ ತವರಿನಲ್ಲೇ ಭಾರೀ ಪ್ರತಿಭಟನೆ

Public TV
By Public TV
2 hours ago
Sujata Handi
Dharwad

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣದಲ್ಲಿ ಟ್ವಿಸ್ಟ್‌ – ʻಹನಿಟ್ರ್ಯಾಪ್ʼ ಲೇಡಿ ಸುಜಾತಾ ಹಂಡಿಯ ಅಸಲಿ ಮುಖ ಅನಾವರಣ!

Public TV
By Public TV
2 hours ago
RCB 3
Cricket

ಆರ್‌ಸಿಬಿ ತವರಿನ ಪಂದ್ಯಗಳು ರಾಯ್‌ಪುರ ಅಥವಾ ಇಂದೋರ್‌ಗೆ ಶಿಫ್ಟ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?