Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Public TV
Last updated: October 27, 2024 7:28 pm
Public TV
Share
3 Min Read
CM Siddaramaiah And DK Shivakumar
SHARE

– 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಲು ಕೂಡಲೇ ಕ್ರಮ ಕೈಗೊಳ್ಳುತ್ತೇನೆಂದ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ಕೊಟ್ಟಿದೆ. ಈ ಮೀಸಲಾತಿಗೆ ನೀವು ಬಂದರೆ ನಿಮಗೂ ಈ ಸೌಲಭ್ಯ ಸಿಗುತ್ತದೆ. ಇಲ್ಲದಿದ್ದರೇ ಜಾತಿಗಣತಿ ವರದಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದರು.

ನಗರದ ಮೈಸೂರು ರಸ್ತೆಯ (Mysuru Road) ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಹಳ್ಳಿ ಕಾರ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಭಾಗವಹಿಸಿದ್ದರು. ಸಮಾವೇಶದಲ್ಲಿ ಹಳ್ಳಿಕಾರ್ ಸಮುದಾಯದ ಮುಖಂಡರು ತಮ್ಮ ಸಮುದಾಯವನ್ನು 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಸಿಎಂ, ಡಿಸಿಎಂ ಸ್ಪಂದಿಸಿದರು.ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

ಬಳಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, 1931ರ ಬಳಿಕ ನಾನು ಜಾತಿಗಣತಿ ವರದಿಗೆ ಆದೇಶ ಮಾಡಿದ್ದೆ. ನಿಮಗೆ ನಾವು ಜಾತಿಗಣತಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ. ನಿಮ್ಮನ್ನ 3ಎಗೆ ಸೇರಿಸುವುದು ಸಮಂಜಸವಲ್ಲ. ಕೇವಲ 65 ಸಾವಿರ ಜನರು ಇರುವ ಹಳ್ಳಿ ಕಾರ್ ಸಮುದಾಯದಲ್ಲಿ ಒಬ್ಬರೇ ಒಬ್ಬರು ಐಎಎಸ್, ಐಪಿಎಸ್ ಅಧಿಕಾರಿಗಳಿಲ್ಲ. ಹೀಗಾಗಿ ನಾನು ನಿಮ್ಮ ಪರವಾಗಿ ಸಹಾನುಭೂತಿಯಿಂದ ಇದ್ದೇನೆ. ಸಾಮಾಜಿಕ ನ್ಯಾಯದಿಂದ ನಾವು ಹಿಂದೆ ಬೀಳಲ್ಲ ಎಂದು ಮನವಿಗೆ ಪ್ರತಿಕ್ರಿಯಿಸಿದರು.

ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ… pic.twitter.com/YrOdjitaHp

— Siddaramaiah (@siddaramaiah) October 27, 2024

ಹಳ್ಳಿಕಾರ್ ಸಮುದಾಯ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದೆ. ಪಶುಸಂಗೋಪನೆ ಈ ಸಮುದಾಯದ ಮೂಲ ಕುಲಕಸುಬಾಗಿದೆ. ಸಮುದಾಯಗಳಿಗೆ ವಿದ್ಯೆ, ಶಿಕ್ಷಣ ಪರಿಣಾಮಕಾರಿಯಾದ ಅಸ್ತ್ರ. ಶಿಕ್ಷಿತರಾದಾಗ ಮಾತ್ರ ತಮ್ಮ ಪಾಲನ್ನು ಪಡೆಯಲು ಸಾಧ್ಯ. ಹಳ್ಳಿಕಾರ್ ಸಮುದಾಯದಲ್ಲಿ ಐಎಎಸ್, ಐಪಿಎಸ್ ಆದವರೂ ಯಾರೂ ಇಲ್ಲ. ಇದನ್ನು ನೋಡಿದಾಗ ಶೈಕ್ಷಣಿಕವಾಗಿ ಸಮುದಾಯ ತೀರಾ ಹಿಂದುಳಿದಿದೆ. ಶೂದ್ರ ಜನಾಂಗ ಶತ ಶತಮಾನಗಳ ಕಾಲ ಅಕ್ಷರ ಸಂಸ್ಕೃತಿಯಿಂದ ಹಿಂದುಳಿದಿವೆ ಎಂದರು.

3ಎ ನಲ್ಲಿರುವ ಜನಾಂಗವನ್ನು ಪ್ರವರ್ಗ ಒಂದಕ್ಕೆ ಸೇರಿಸುವ ಪ್ರಸ್ತಾಪವಿದೆ. ಇವತ್ತು ಜಾತಿ ಜನಗಣತಿ (Caste Census) ಮಾಡುವ ಅಗತ್ಯವಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜನಗಣತಿ ಮಾಡಿಸಿದ್ದೆ. ಅವರು ಇತ್ತೀಚೆಗೆ ವರದಿ ಕೊಟ್ಟಿದ್ದಾರೆ. ಆ ವರದಿಯನ್ನು ಇನ್ನೂ ನಾನು ನೋಡಿಲ್ಲ. ಆ ವರದಿ ನೋಡಿದರೆ ಮಾತ್ರ ಯಾವ ಜನಾಂಗ ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್’ನಲ್ಲಿ ಇಂದು ಹಮ್ಮಿಕೊಂಡಿದ್ದ ಹಳ್ಳಿಕಾರ ಸಮುದಾಯದ ಬೃಹತ್ ಸಮಾವೇಶ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ, ಮಾತನಾಡಿದೆ.

ಹಳ್ಳಿಕಾರ ಸಮುದಾಯ ಗ್ರಾಮೀಣ ಪ್ರದೇಶ ಅದರಲ್ಲೂ ದನ-ಕರುಗಳೊಂದಿಗೆ ಬದುಕು ಬೆಸೆದುಕೊಂಡಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಸಮುದಾಯವು ಸಮಾಜಕ್ಕೆ ತನ್ನದೇ ಕೊಡುಗೆ… pic.twitter.com/tkofO1rVk2

— DK Shivakumar (@DKShivakumar) October 27, 2024

ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಕೆ.ನಾಗರಾಜ್ ಹಳ್ಳಿಕಾರ್ ಸಮುದಾಯದ ಅಧ್ಯಕ್ಷರಲ್ಲ. ಬೆಂಗಳೂರಿನ ಅನೇಕ ನಾಯಕರನ್ನು ತಯಾರು ಮಾಡಿದ್ದಾರೆ. ಅವರನ್ನು ನಾವು ಎಂಎಲ್‌ಸಿಯಾಗಿ ಮಾಡಿದ್ದೇವು. ಆಗ ನನಗೆ ಬೇಡ ಎಂದು ಅಧಿಕಾರ ತ್ಯಾಗ ಮಾಡಿದರು. 80 ವರ್ಷ ಆದಮೇಲೆ ಈ ಸಮಾವೇಶ ನಡೆಯುತ್ತಿದೆ. ಹಳ್ಳಿಕಾರರು ಕೃಷ್ಣ ಕುಲಕ್ಕೆ ಸೇರಿದವರು. ಸಿಎಂ ನಿಮ್ಮಲ್ಲರ ಪರವಾಗಿರುವ ನಾಯಕ. ಸಮುದಾಯದ ಬೇಡಿಕೆಯ ಕುರಿತು ಪರಿಶೀಲನೆ ನಡೆಸುತ್ತೇವೆ. ನಿಮ್ಮ ಶ್ರಮ, ಸಮಾಜದ ಫಲ ಯಶಸ್ಸು ಕಾಣಬೇಕಾದರೆ ಧರ್ಮರಾಯನ ರೀತಿ ಧರ್ಮವಿರಬೇಕು. ಕೃಷ್ಣನ ರೀತಿ ತಂತ್ರವಿರಬೇಕು ಆಗ ಯಶಸ್ಸು ಗಳಿಸಲು ಸಾಧ್ಯ. ಕೃಷಿಕ, ಕಾರ್ಮಿಕ, ಶಿಕ್ಷಕ, ಸೈನಿಕ ಸಮಾಜದಲ್ಲಿ ನಾಲ್ಕು ವರ್ಗವಿದೆ. ಹಳ್ಳಿಕಾರ ಸಮುದಾಯ ಕುಲದ ಜೊತೆಗೆ ಈ ಸರ್ಕಾರವಿದೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

TAGGED:bengaluruCaste Censuscm siddaramaiahDCM DK ShivakumarHallikarಜಾತಿ ಜನಗಣತಿಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರುಸಿಎಂ ಸಿದ್ದರಾಮಯ್ಯಹಳ್ಳಿಕಾರ್‌
Share This Article
Facebook Whatsapp Whatsapp Telegram

Cinema News

Daali Dhananjaya
ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!
Cinema Latest Sandalwood Top Stories
mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories

You Might Also Like

supreme Court 1
Court

ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

Public TV
By Public TV
15 minutes ago
Mandya Mask Man
Districts

Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಮಾಸ್ಕ್‌ ಮ್ಯಾನ್‌ ಊರು ಯಾವ್ದು? ಓದಿದ್ದೇನು?

Public TV
By Public TV
15 minutes ago
Mahesh Shetty Thimarodi 2
Dakshina Kannada

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

Public TV
By Public TV
53 minutes ago
Bomb Threat 1
Crime

ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ – 4 ದಿನಗಳಿಂದ 3 ಬಾರಿ ಬೆದರಿಕೆ

Public TV
By Public TV
57 minutes ago
Mahesh Shetty Thimarodi
Dakshina Kannada

ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

Public TV
By Public TV
1 hour ago
Chikkodi Flooded
Belgaum

`ಮಹಾ’ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ತುಂಬು ಗರ್ಭಿಣಿ ಸೇರಿ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?