Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ – ಸಿಎಂ ಏಕನಾಥ್ ಶಿಂಧೆ ಸೇರಿ ಪ್ರಮುಖ ನಾಯಕರಿಂದ ನಾಮಪತ್ರ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ – ಸಿಎಂ ಏಕನಾಥ್ ಶಿಂಧೆ ಸೇರಿ ಪ್ರಮುಖ ನಾಯಕರಿಂದ ನಾಮಪತ್ರ ಸಲ್ಲಿಕೆ

Latest

ಮಹರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ – ಸಿಎಂ ಏಕನಾಥ್ ಶಿಂಧೆ ಸೇರಿ ಪ್ರಮುಖ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
Last updated: October 28, 2024 10:48 pm
Public TV
Share
3 Min Read
Eknath Shinde Nomination
SHARE

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ (Eknath Shinde) ಅವರು ಥಾಣೆಯ (Thane) ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ (Nomination Paper) ಸಲ್ಲಿಸಿದ್ದಾರೆ.

ಶಿಂಧೆ ಥಾಣೆಯ ಪ್ರಬಲ ನಾಯಕ ದಿವಂಗತ ಆನಂದ್ ದಿಘೆ ಅವರ ಸೋದರಳಿಯ ಶಿವಸೇನಾ (UBT) ಅಭ್ಯರ್ಥಿ ಕೇದಾರ್ ದಿಘೆ ಅವರನ್ನು ಎದುರಿಸಲಿದ್ದಾರೆ. 2009ರಲ್ಲಿ ಕ್ಷೇತ್ರ ರಚನೆಯಾದಾಗಿನಿಂದ ಶಿಂಧೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಏಕನಾಥ್ ಶಿಂಧೆ ಸಂತ ಏಕನಾಥ ಮಹಾರಾಜರ ವಂಶದ ಯೋಗಿರಾಜ್ ಮಹಾರಾಜ್ ಗೋಸ್ವಾಮಿಯವರಿಂದ ಆಶೀರ್ವಾದ ಪಡೆದರು. ಬಳಿಕ ರೋಡ್ ಶೋ ನಡೆಸಿದರು. ಅಲಂಕೃತ ರಥದಂತಹ ವಾಹನವನ್ನು ಏರಿ ನೂರಾರು ಬೆಂಬಲಿಗರು ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಲು ತೆರಳಿದರು. ಇದನ್ನೂ ಓದಿ: ನಾವು ಅಲ್ಲಾನ ವಿರೋಧಿಗಳಲ್ಲಾ- ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿ: ಜೋಶಿ ಕಿಡಿ

Eknath Shinde Road Show 1

ಏಕನಾಥ್ ಶಿಂಧೆ ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ರಾಮದಾಸ್ ಅಠವಳೆ ಸೇರಿದಂತೆ ಶಿವಸೇನೆ ಮತ್ತು ಎನ್‌ಸಿಪಿಯ, ಆರ್‌ಪಿಐ (ಎ) ಯ ಪ್ರಮುಖ ನಾಯಕರು ಭಾಗಿಯಾಗಿದ್ದರು. 2019ರ ಚುನಾವಣೆಯಲ್ಲಿ, ಶಿವಸೇನೆ ವಿಭಜನೆಯ ಮೊದಲು ಏಕನಾಥ್ ಶಿಂಧೆ ಕೊಪ್ರಿ-ಪಚ್ಪಖಾಡಿ ಸ್ಥಾನವನ್ನು 65% ಕ್ಕಿಂತ ಹೆಚ್ಚು ಮತಗಳೊಂದಿಗೆ ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಸಂಜಯ್ ಘಡಿಗಾಂವ್ಕರ್ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಭ್ಯರ್ಥಿ ಮಹೇಶ್ ಪರಶುರಾಮ್ ಕದಂ ತಲಾ 13 ಪ್ರತಿಶತದಷ್ಟು ಮತ ಗಳಿಸಿದ್ದರು. ಇದನ್ನೂ ಓದಿ: ದೀಪಾವಳಿ ಹಬ್ಬ – ಬೆಂಗಳೂರಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

Ajit Pawar Nomination

ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಕೂಡ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಎನ್‌ಸಿಪಿ-ಎಸ್‌ಪಿ ಅಭ್ಯರ್ಥಿಯಾಗಿ ಅಜಿತ್ ಪವಾರ್ ಅವರ ಸೋದರಳಿಯ ಮತ್ತು ಶರದ್ ಪವಾರ್ ಅವರ ಮೊಮ್ಮಗ ಯುಗೇಂದ್ರ ಪವಾರ್ ಕ್ಷೇತ್ರದಿಂದ ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವ್ಹಾಣ್ ಅವರು ಕರಡ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚಿಖಾಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ವೇತಾ ಮಹಾಲೆ ಪಾಟೀಲ್ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಕಂಕಾವಲಿಯಿಂದ ಬಿಜೆಪಿ ಅಭ್ಯರ್ಥಿ ನಿತೇಶ್ ರಾಣೆ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಜಾರ್ಖಂಡ್‌ನಲ್ಲಿ ಜಮ್ತಾರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀತಾ ಸೊರೇನ್ ಅವರು ನಾಮಪತ್ರ ಸಲ್ಲಿಸಿದರು. ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಧನ್ವಾರ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

Priyanka Gandhi Road Show Wayanad

ವಯನಾಡ್ ಲೋಕಸಭೆ ಉಪ ಚುನಾವಣೆಗೆ ಪ್ರಿಯಾಂಕ್ ಗಾಂಧಿ ಸಲ್ಲಿಸಿದ ನಾಮಪತ್ರ ಸ್ವೀಕೃತಗೊಂಡಿದೆ. ಈ ಬೆನ್ನಲ್ಲೇ ವಯನಾಡ್‌ನ ಮೂರು ಪ್ರದೇಶಗಳಲ್ಲಿ ಪ್ರಿಯಾಂಕ ಗಾಂಧಿ ರೋಡ್ ಶೋ ನಡೆಸಿದರು. ಇಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕ್ಷೇತ್ರಕ್ಕೆ ಸಮಯ ನೀಡಲ್ಲ ಎನ್ನುವ ಆರೋಪಕ್ಕೆ ಉತ್ತರ ನೀಡಿದರು. ನಾನು ಒಮ್ಮೆ ಆಯ್ಕೆಯಾಗಬೇಕು. ಆ ಬಳಿಕ ಎಷ್ಟು ಸಮಯ ನೀಡುವೆ ನೀವೆ ನೋಡುತ್ತಿರಿ. ಆಯ್ಕೆಯಾಗದೇ ಇದಕ್ಕೆ ಹೇಗೆ ಉತ್ತರಿಸಲಿ ಎಂದರು. ದೇಶದಲ್ಲಿ ನಿರುದ್ಯೋಗ ಸಮಸ್ಯೆಯು ಸಾರ್ವಕಾಲಿಕ ಉತ್ತುಂಗದಲ್ಲಿದೆ. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ನಿಮ್ಮ ಸೌಲಭ್ಯಗಳು ಸಾಕಷ್ಟು ಉತ್ತಮವಾಗಿಲ್ಲ. ಕಠಿಣ ತರಬೇತಿ ನೀಡುವ ಮತ್ತು ಕೆಲಸ ಮಾಡುವ ಎಲ್ಲಾ ಹುಡುಗರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್‌ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್‌

TAGGED:Jharkhand Assembly ElectionmaharashtraMaharashtra Assembly Electionnominationಏಕನಾಥ್ ಶಿಂಧೆಜಾರ್ಖಂಡ್ನಾಮಪತ್ರಮಹಾರಾಷ್ಟ್ರವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

Wild elephant captured in Sakleshpur Hassan
Districts

ಸಕಲೇಶಪುರ | ಮಹಿಳೆಯನ್ನು ಕೊಂದಿದ್ದ ಪುಂಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
9 minutes ago
daily horoscope dina bhavishya
Latest

ದಿನ ಭವಿಷ್ಯ 17-01-2026

Public TV
By Public TV
49 minutes ago
RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
8 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
8 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
9 hours ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?