‘ಪಬ್ಲಿಕ್‌ ಟಿವಿ’ ಹಿರಿಯ ವರದಿಗಾರ ಸುಖ್‌ಪಾಲ್‌ ಪೊಳಲಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Public TV
0 Min Read
sukhpal polali

ಮಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಪಬ್ಲಿಕ್‌ ಟಿವಿ’ಯ ಮಂಗಳೂರಿನ ಹಿರಿಯ ವರದಿಗಾರರಾದ ಸುಖ್‌ಪಾಲ್ ಪೊಳಲಿ ಭಾಜನರಾಗಿದ್ದಾರೆ.

ನ.1 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

sukhpal polali 1

ಸುಖ್‌ಪಾಲ್‌ ಪೊಳಲಿ ಅವರು ‘ಪಬ್ಲಿಕ್‌ ಟಿವಿ’ಯಲ್ಲಿ ಮಂಗಳೂರಿನ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಸಂಘ ಸಂಸ್ಥೆಗಳು ಹಾಗೂ ವಿವಿಧ ಕ್ಷೇತ್ರಗಳ 56 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

Share This Article