ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಹಿರಿಯ ನಟಿ ಹೇಮಾ ಚೌಧರಿ(Hema Chaudhary), ಎಂ.ಎಸ್ ನರಸಿಂಹಮೂರ್ತಿಗೆ (M.S Narasimhamurthy) ನ.1ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ:ಮಗಳ ಜೊತೆ ದೀಪಾವಳಿ ಆಚರಿಸಿದ ಅದಿತಿ ಪ್ರಭುದೇವ
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಿರಿಯ ನಟಿ ಹೇಮಾ ಚೌಧರಿ, ಎಂ.ಎಸ್ ನರಸಿಂಹಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪುರಸ್ಕೃತರಿಗೆ ಶಾಲಿನ ಜೊತೆ ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.
ಅಂದಹಾಗೆ, ಹೇಮಾ ಚೌಧರಿ ಅವರು ತೆಲುಗಿನ ಸ್ಟಾರ್ ನಟ ಎನ್ಟಿ ರಾಮರಾವ್, ವರನಟ ರಾಜ್ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್, ಶಂಕರ್ ನಾಗ್ ಸೇರಿದಂತೆ ಅನೇಕರ ಜೊತೆ ತೆರೆಹಂಚಿಕೊಂಡಿದ್ದಾರೆ. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಅಮೃತವರ್ಷಿಣಿ ಸೇರಿದಂತೆ ಹಲವು ಸೀರಿಯಲ್ಗಳಲ್ಲಿ ನಟಿಸಿದ್ದಾರೆ.
ಇನ್ನೂ ನಟ, ಬರಹಗಾರರಾಗಿ ಗುರುತಿಸಿಕೊಂಡಿರುವ ಎಂ.ಎಸ್ ನರಸಿಂಹಮೂರ್ತಿ ಅವರು ಸಿಲ್ಲಿ ಲಲ್ಲಿ, ಪಾಪ ಪಾಂಡು ಸೀರಿಯಲ್ಗೆ 12 ಸಾವಿರ ಎಪಿಸೋಡ್ಗಳನ್ನು ಬರೆದಿದ್ದರು.