Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

Ind vs Nz Test | ಸೋಲಿನ ಸಂಪೂರ್ಣ ಹೊಣೆ ನನ್ನದೆ – ರೋಹಿತ್‌ ಶರ್ಮಾ ಬೇಸರ

Public TV
Last updated: November 3, 2024 4:01 pm
Public TV
Share
3 Min Read
Rohit Sharma
SHARE

ಮುಂಬೈ: ವಿಶ್ವಟೆಸ್ಟ್ ಚಾಂಪಿಯನ್‌ ಶಿಪ್ (WTC) ‌ಭಾಗವಾಗಿ ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಕ್ರಿಕೆಟ್‌ ತಂಡ ಹೀನಾಯ ಸೋಲು ಕಂಡಿದೆ. ಈ ಕುರಿತು ಮಾತನಾಡಿರುವ ನಾಯಕ ರೋಹಿತ್‌ ಶರ್ಮಾ (Rohit Sharma), ಸೋಲಿನ ಸಂಪೂರ್ಣ ಹೊಣೆಯನ್ನು ತಾನೆ ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ.

ಕಿವೀಸ್‌ ವಿರುದ್ಧ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ರೋಹಿತ್‌ ಶರ್ಮಾ, ಈ ಸರಣಿಯ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಏಕೆಂದರೆ ನಾನು ಉತ್ತಮವಾಗಿ ಬ್ಯಾಟ್‌ ಮಾಡಲಿಲ್ಲ, ಕೆಟ್ಟದಾಗಿ ಬ್ಯಾಟಿಂಗ್‌ ಮಾಡಿದೆ. ಬ್ಯಾಟರ್ ಮತ್ತು ನಾಯಕನಾಗಿ ನಾನು ನನ್ನ ಅತ್ಯುತ್ತಮ ಸ್ಥಿತಿಯಲ್ಲಿರಲಿಲ್ಲ. ನಾಯಕನಾಗಿ ತಂಡವನ್ನು ಮುನ್ನಡೆಸದ ಕಾರಣ ನಮ್ಮ ತಂಡ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

Team India

ನ್ಯೂಜಿಲೆಂಡ್ ನಮಗಿಂತ ಉತ್ತಮ ಆಟ ಆಡಿದರು. ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಒಳ್ಳೆಯ ಹಿಡಿತ ಸಾಧಿಸಿದರು. ಇದು ನಮಗೆ ಕಠಿಣ ಸವಾಲು ಆಗಿತ್ತು. ನಾನು ಈ ಸರಣಿಯಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡದೇ ಇರಬಹುದು. ಆದ್ರೆ ನನ್ನ ರಕ್ಷಣಾತ್ಮಕ ಆಟವನ್ನು ಕಳೆದುಕೊಂಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: WTC Points Table | ಹೀನಾಯ ಸೋಲಿನ ಬೆನ್ನಲ್ಲೇ ನಂ.1 ಪಟ್ಟ ಕಳೆದುಕೊಂಡ ಭಾರತ – ಆಸೀಸ್‌ಗೆ ಅಗ್ರಸ್ಥಾನ

24 ವರ್ಷಗಳ ಬಳಿಕ ತವರಿನಲ್ಲಿ ವೈಟ್‌ವಾಶ್‌:
ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಅಪಖ್ಯಾತಿಯನ್ನು ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಶ್‌ ಆಗಿತ್ತು.

Ind vs ZZ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ ಭಾರತದ ವಿರುದ್ಧ 26 ರನ್‌ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು ವೈಟ್‌ವಾಶ್‌ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

147 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಹಿನ್ನಡೆ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪಮೊತ್ತಕ್ಕೆ ಔಟಾಗಿದ್ದು ತಂಡಕ್ಕೆ ಭಾರಿ ಆಘಾತ ನೀಡಿತು. ಇದನ್ನೂ ಓದಿ: 24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

Rohit Sharma

ಪಂತ್‌ ಬಳಿಕ ಟೀಂ ಇಂಡಿಯಾ ಪಥನ:
ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರಿಷಭ್‌ ಪಂತ್‌ ಆಸರೆಯಾದರು. ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಪಂತ್‌ 57 ಎಸೆತಗಳಲ್ಲಿ 64 ರನ್‌ (9 ಬೌಂಡರಿ, 1 ಸಿಕ್ಸರ್‌) ಗಳಿಸಿದ್ದರು. ಈ ವೇಳೆ ಸುಲಭವಾಗಿ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಪಂತ್‌ ಔಟಾದ ಬೆನ್ನಲ್ಲೇ ಅಶ್ವಿನ್‌, ಆಕಾಶ್‌ ದೀಪ್‌, ವಾಷಿಂಗ್ಟನ್‌ ಸುಂದರ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಟೀಂ ಇಂಡಿಯಾ 121 ರನ್‌ಗಳಿಗೆ ಸರ್ವಪತನ ಕಂಡಿತು.

147 ರನ್‌ ಗುರಿ ನೀಡಿದ್ದ ಕಿವೀಸ್‌:
2ನೇ ದಿನದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕಿವೀಸ್‌ 9 ವಿಕೆಟ್‌ಗೆ 171 ರನ್‌ಗಳಿಸಿತ್ತು. 3ನೇ ದಿನ 143 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ್ದ ನ್ಯೂಜಿಲೆಂಡ್‌ 2ನೇ ಇನ್ನಿಂಗ್ಸ್‌ನಲ್ಲಿ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಭಾರತಕ್ಕೆ 147 ರನ್‌ಗಳ ಗುರಿ ನೀಡಿತ್ತು. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

TAGGED:australiaIND vs NZRohit SharmaTeam indiaWTC Politsಆಸ್ಟ್ರೇಲಿಯಾನ್ಯೂಜಿಲೆಂಡ್ಭಾರತರೋಹಿತ್ ಶರ್ಮಾವಿಶ್ವ ಟೆಸ್ಟ್ ಚಾಂಪಿಯನ್ ಶಿಪ್
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
3 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
11 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

RAJAPPA CHIKKAMAGALURU
Chikkamagaluru

ಚಿಕ್ಕಮಗಳೂರು | ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ವೀರ ಯೋಧನಿಗೆ ಸನ್ಮಾನ

Public TV
By Public TV
4 minutes ago
B.S Yediyurappa
Districts

ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿಎಸ್‍ವೈ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

Public TV
By Public TV
19 minutes ago
Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
28 minutes ago
Sunil Kumar
Bengaluru City

10 ವರ್ಷ ಸುಳ್ಳು ಜಾತಿಗಣತಿ ದತ್ತಾಂಶದ ಬಗ್ಗೆ ಹೇಳಿದ ಸಿಎಂ ರಾಜೀನಾಮೆ ಕೊಡಲಿ – ಸುನಿಲ್ ಕುಮಾರ್ ಒತ್ತಾಯ

Public TV
By Public TV
33 minutes ago
air conditioner
Latest

ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

Public TV
By Public TV
38 minutes ago
19 Year Old Dies of Heart Attack in Bengaluru
Bengaluru City

ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?