Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು: ಯತ್ನಾಳ್

Districts

ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು: ಯತ್ನಾಳ್

Public TV
Last updated: November 4, 2024 10:09 pm
Public TV
Share
3 Min Read
Basanagouda Patil Yatnal
SHARE

– ದೇಶದಲ್ಲಿ ವಕ್ಫ್ ವಿರುದ್ಧ ಹೋರಾಟ ಆರಂಭವಾಗಿದ್ದೇ ವಿಜಯಪುರದಿಂದ
– ಎಲ್ಲರೂ ಗಟ್ಟಿಯಾದರೆ ರೈತರ, ಮಠಗಳ ಆಸ್ತಿ ಉಳಿಯುತ್ತೆ

ವಿಜಯಪುರ: ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು. ಆದರೆ ನಮ್ಮ ಸ್ವಾಮೀಜಿಗಳು ಹೋರಾಟ ಮಾಡುತ್ತಿಲ್ಲ. ವಕ್ಫ್ ವಿರುದ್ಧ ದೊಡ್ಡ ಹೋರಾಟ ನಡೆಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಹೋರಾಟದಲ್ಲಿ ಕನ್ಹೇರಿ ಸ್ವಾಮಿಜಿ ಮುಂಚೂಣಿ ವಹಿಸಿಕೊಂಡಿದ್ದರೆ, ಇತರೆ ಸ್ವಾಮೀಜಿಗಳು ಕೊಂಕು ಹೇಳುತ್ತಿದ್ದಾರೆ. ಮಠಗಳಿಗೆ ದಾನ ನೀಡುವವರು ಹಿಂದೂಗಳು, ಮುಸ್ಲಿಂರಲ್ಲ. ಮುಸ್ಲಿಂರೆಲ್ಲ ಸ್ವಾಮೀಜಿಗಳಿಗೆ ನಮಸ್ಕಾರ ಮಾಡಲ್ಲ ಎಂದರು.

ಕೇಂದ್ರ ಸಚಿವೆ ಕರಂದ್ಲಾಜೆ (Shobha Karandlaje), ನಾನು ಇತರರು ಸೇರಿ ಅಹೋರಾತ್ರಿ ಹೋರಾಟ ಮಾಡುತ್ತೇವೆ. ವಕ್ಫ್ ಹೋಗುವವರೆಗೂ ಹೋರಾಟ ನಿಲ್ಲಲ್ಲ, ಇದು ಕೂಡ ಚರ್ಚೆಗೆ ಗ್ರಾಸವಾಗಲಿದೆ. ಮುಂದೆ ರಾಜ್ಯದಲ್ಲಿ ನಮ್ಮದೇ ಕಾಂಬಿನೇಷನ್ ನಾಯಕತ್ವ ಎಂದರು.ಇದನ್ನೂ ಓದಿ: ಮೈಸೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ – ಕೇಸ್ ದಾಖಲು

ದೇಶದಲ್ಲಿ ವಕ್ಫ್ ವಿರುದ್ಧ ಹೋರಾಟ ಆರಂಭವಾಗಿದ್ದೇ ವಿಜಯಪುರದ (Vijayapura) ಪವಿತ್ರ ಭೂಮಿಯಿಂದ. ವಕ್ಫ್ ಕರಾಳ ಶಾಸನದ ಅನುಭವ ಆಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟದ ಅವಶ್ಯಕತೆಯಿದೆ. ಎಲ್ಲರೂ ಗಟ್ಟಿಯಾದರೆ ರೈತರ ಜಮೀನು, ಮಠಗಳು ಉಳಿಯುತ್ತವೆ. ಯಾರ ಪಹಣಿಯೂ ಸಿಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಇದರಿಂದ ಸರ್ಕಾರವೇ ಡೌನ್ ಆಗಲಿದೆ. ಜನರೇ ಬುತ್ತಿ ಕಟ್ಟಿಕೊಂಡು ಹೋರಾಟ ಮಾಡೋಣ. ಮುಂದೆ ಧರ್ಮಯುದ್ಧ ಆಗುತ್ತದೆ. ಎಲ್ಲರೂ ಹೋರಾಟದಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು.

ನಮ್ಮ ದೇವರ ಕೈಯಲ್ಲಿ ಅಸ್ತ್ರಗಳು ಇವೆ. ಶಿವನ ಕೈಯ್ಯಲ್ಲಿ ಏನಿದೆ? ಚಾಮುಂಡಿ ಕೈಯ್ಯಲ್ಲಿ ಏನಿದೆ? ಬಾಂಗ್ಲಾದಲ್ಲಿ ಹಿಂದೂ ಸರ್ಕಾರಿ ನೌಕರರು ರಾಜೀನಾಮೆ ತೆಗೆದುಕೊಳ್ಳುತ್ತಿದ್ದಾರೆ. ನ.3 ರಂದು ದೆಹಲಿಯಲ್ಲಿ ಮುಸ್ಲಿಂ ಮೌಲ್ವಿಗಳು ಸಭೆ ನಡೆಸಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ. ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರಿಗೂ ಮೋದಿ ಅವರು ಜಾರಿಗೆ ತರುವ ಕಾಯ್ದೆಯನ್ನು ಬೆಂಬಲಿಸಬಾರದು. ಆಂಧ್ರದಲ್ಲಿ ಐದು ಲಕ್ಷ ಜನರು ಸೇರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಪಾರ್ಟಿಷನ್ ಆಫ್ ಪಾಕಿಸ್ತಾನ ಎಂಬ ಪುಸ್ತಕ ಅಂಬೇಡ್ಕರ್ ಬರೆದಿದ್ದರು. ಭಾರತ ಪಾಕಿಸ್ತಾನ ವಿಭಜನೆ ಬೇಡ ಎಂದಿದ್ದರು. ವಿಭಜನೆ ಮಾಡಿದರೆ ಪಾಕಿಸ್ತಾನದ ಹಿಂದೂಗಳನ್ನು ಇಲ್ಲಿಗೆ ಇಲ್ಲಿರುವ ಮುಸ್ಲಿಂಮರನ್ನು ಪಾಕಿಸ್ತಾನಕ್ಕೆ ರವಾನೆ ಮಾಡಬೇಕೆಂದು ಹೇಳಿದ್ದರು ಎಂದು ತಿಳಿಸಿದರು.

Waqf Protest

ಜಮೀರ್ ಖಬರಸ್ಥಾನ್ ಹರಾ ರಂಗ್ ಎನ್ನುತ್ತಾರೆ ಎಂದು ಜಮೀರ್ ಮಾತನಾಡುವ ರೀತಿಯನ್ನು ಮಿಮಿಕ್ರಿ ಮಾಡಿದರು. ಸಿಎಂ ಭೇಟಿಗೆ ಹೋಗಿದ್ದಾಗ ಜಮೀರ್ ಮತ್ತು ನನ್ನ ಮಧ್ಯೆ ವಾಗ್ವಾದ ಆಯ್ತು. ಖಬರಸ್ಥಾನ್‌ಗೆ ಹಸಿರು ಬಣ್ಣ ಹಾಕಬೇಕೆಂದು ಜಮೀರ್ ಹೇಳ್ತಾರೆ. ಸೈತಾನ್‌ಗೆ ಅದು ಕಾಣಿಸಬೇಕೆಂದು ಹೇಳುತ್ತಾರೆ. ಖಾವಿ ಹಾಕಿದವರು ನಾವೇ ಸೈತಾನಗಳಾ? ರಾಜ್ಯದಲ್ಲಿ ಒಂದು ಲಕ್ಷ ಎಕರೆ ಭೂಮಿ ಮಾತ್ರ ಇದೆ ಎನ್ನುತ್ತಾರೆ. ಆದರೆ ಜಮೀರ್ ಐದು ಲಕ್ಷಕ್ಕೂ ಅಧಿಕ ಜಮೀನು ಕಬಳಿಸಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಜನ್ನತ್ ಕುರಿತು ಮುಸ್ಲಿಂ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ದೇಶ, ಧರ್ಮ ದೊಡ್ಡದು ನಂತರ ನಮ್ಮ ಪಾರ್ಟಿ. ದೇಶ ಉಳಿದರೆ ಎಲ್ಲ ಉಳಿದಂತೆ. ದೇಶಕ್ಕಿಂತ ಕುರಾನ್ ದೊಡ್ಡದು ಎಂದು ಮುಸ್ಲಿಂಮರು ಹೇಳುತ್ತಾರೆ. ಆದರೆ ನಾವು ಸಂವಿಧಾನ ದೊಡ್ಡದು ಎನ್ನುತ್ತೇವೆ. ನಮ್ಮ ಜಿಲ್ಲೆಯಲ್ಲಿ ಶಂಶುದ್ದೀನ್ ಪಟೇಲ್ ಎಂಬ ಮಂತ್ರಿ ಇದ್ದಾನೆ. ಹಾವೇರಿಯಲ್ಲಿ ಮುಗ್ದ ಮುಸ್ಲಿಂ ಮೇಲೆ ಹಿಂದೂಗಳು ಹಲ್ಲೆ ಮಾಡಿದರು ಎಂದು ಹೇಳಿದ್ದಾನೆ ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಉತ್ತಮ ಗಾಳಿ ಇರುವ ಟಾಪ್ 10 ಸಿಟಿಗಳಲ್ಲಿ ಚನ್ನರಾಯಪಟ್ಟಣ ನಂ.1!

TAGGED:Basanagouda Patil Yatnalbjpshobha karandlajevijayapuraWaqf Boardಬಸನಗೌಡ ಪಾಟೀಲ್ ಯತ್ನಾಳಬಿಜೆಪಿವಕ್ಫ್ ಬೋರ್ಡ್ವಿಜಯಪುರಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
42 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?