[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Public TV
Last updated: November 14, 2024 4:27 pm
Public TV
3 Min Read

– ಸಿದ್ದರಾಮಯ್ಯರನ್ನು ಯಾರಾದ್ರೂ ಮುಟ್ಟೋಕೆ ಆಗುತ್ತಾ?

ಬೆಳಗಾವಿ: ಬೆಂಗಳೂರಿಗೆ ನೀಡಿದಷ್ಟು ಬೆಳಗಾವಿಗೂ (Belagavi) ಹೆಚ್ಚಿನ ಆದ್ಯತೆ ಕೊಡುತ್ತೇವೆ. ಬೆಳಗಾವಿ ಸೇರಿ ರಾಜ್ಯಾದ್ಯಂತ 39 ಸಾವಿರ ಕೋಟಿ ರೂ. ಅನುದಾನದಲ್ಲಿ ರೈಲ್ವೆ ಕಾಮಗಾರಿಗಳ (Railway Works) ಕೆಲಸ ಆರಂಭಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ (Somanna) ತಿಳಿಸಿದರು.

ಬೆಳಗಾವಿ-ಧಾರವಾಡ (Belagavi-Dharawada) ನೇರ ರೈಲ್ವೆ ಮಾರ್ಗ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ದಿ. ಸುರೇಶ್‌ ಅಂಗಡಿ (Suresh Angadi) ಅವರ ಕನಸಾಗಿದೆ. ರೈಲು ಹಳಿ ನಿರ್ಮಾಣಕ್ಕೆ ಒಟ್ಟು 888 ಎಕರೆ ಜಮೀನು ಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 660 ಎಕರೆ, ಧಾರವಾಡದಲ್ಲಿ 228 ಎಕರೆ ಜಮೀನು ಬೇಕು. 446 ಎಕರೆ ಜಮೀನನ್ನು ಮುಂದಿನ ತಿಂಗಳು ಹಸ್ತಾಂತರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ‌ ಮಾರ್ಗ ಸುಮಾರು 73 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಧಾರವಾಡದ ಕ್ಯಾರಕೊಪ್ಪದಿಂದ ಬೆಳಗಾವಿ ದೇಸೂರದವರೆಗೆ ರೈಲು ಹಳಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಮಾಡಬಹುದು. ಜಿಲ್ಲಾಧಿಕಾರಿಗಳು ಒಂದು ವರ್ಷದ ಕೆಲಸವನ್ನು ಒಂದು ತಿಂಗಳಲ್ಲಿ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

ಜನವರಿ, ಫೆಬ್ರುವರಿಯಲ್ಲಿ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸುತ್ತೇವೆ. ಬೆಳಗಾವಿ ಧಾರವಾಡ ರೈಲು ಮಾರ್ಗವನ್ನು 18 ರಿಂದ 20 ತಿಂಗಳಲ್ಲಿ ಕೆಲಸ ಮುಗಿಸಲಾಗುವುದು. ಜಿಲ್ಲಾಧಿಕಾರಿಗಳು ಜೊತೆ ಸೇರಿಕೊಂಡು ಕೆಲಸ ಮಾಡುವಂತೆ ನಮ್ಮ ಅಧಿಕಾರಿಗಳಿಗೆ ತಿಳಿಸುತ್ತೇನೆ. ಇನ್ನು ರಾಜ್ಯದಲ್ಲಿ 11 ಯೋಜನೆಗಳು ಬಾಕಿ ಇದ್ದವು. ಅದರಲ್ಲಿ 9 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. 39 ಸಾವಿರ ಕೋಟಿ ಅನುದಾನ ಒದಗಿಸಿದ್ದೇವೆ. ಐವತ್ತು ವರ್ಷದಲ್ಲಿ ಆಗದೇ ಇರುವ ಕೆಲಸಗಳು ಈ ಹತ್ತು ವರ್ಷದಲ್ಲಿ ಮಾಡಿದ್ದೇವೆ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜೊತೆಗೂ ಮಾತಾಡಿದ್ದೇನೆ. 950 ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಜಂಟಿ ಸರ್ವೇ, ಗಡಿ ನಿಗದಿಯಾಗಿದೆ. ಸ್ಟೇಶನ್ ಗಳನ್ನು ಎಲ್ಲೆಲ್ಲಿ ನಿರ್ಮಿಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ. ಬೆಳಗಾವಿಯ ತಾಲೂಕಿನ ಕೆಕೆಕೊಪ್ಪ, ಬಡಾಲ ಅಂಕಲಗಿ, ನಾಗೇನಟ್ಟಿ, ನಂದಿಹಳ್ಳಿ, ಗರ್ಲಗುಂಜಿ ಸೇರಿ ಮತ್ತಿತರ ಗ್ರಾಮಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ತೆಗೆದುಕೊಳ್ಳುವ ಕೆಲಸ‌ ಡಿಸಿ ಮಾಡಿದ್ದಾರೆ. ಅಲ್ಲದೇ ಬೆಳಗಾವಿ ಹೃದಯ ಭಾಗದಲ್ಲಿ 11ನೇ ಕ್ರಾಸ್ ನಲ್ಲಿ‌ 6 ಆರ್‌.ಒ.ಬಿ ಮತ್ತು ಆರ್.ಯು.ಬಿ. ತೆರೆಯಲು ನಿರ್ಧರಿಸಲಾಗಿದ್ದು, ಒಟ್ಟಾರೆ ಬೆಳಗಾವಿಗೆ ಪ್ರಧಾನಿ ಮೋದಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

 

ರಾಯಚೂರು, ಯಾದಗಿರಿ, ಕುಡಚಿ ಸೇರಿ ಹಲವು ಕಡೆ ಕೆಲಸ ಆರಂಭಿಸಿದ್ದೇವೆ‌. ಯೋಜನೆಗಳನ್ನು ರೂಪಿಸಲು ಜಾಗ ಬೇಕು. ನೀವು ಜಾಗ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ. ಜಾಗ ಸಿಗಲಿಲ್ಲ ಎಂದರೆ ಯೋಜನೆ ಯೋಜನಗೆಳಾಗಿ ಉಳಿಯುತ್ತವೆ. ಅವಶ್ಯಕತೆ ಇರುವ ಕೆಲಸಗಳಿಗೆ ಆದ್ಯತೆ ಕೊಡುತ್ತೇನೆ. ಲೋಕಾಪೂರ ರಾಮದುರ್ಗ ರೈಲು, ಸವದತ್ತಿ ಯಲ್ಲಮ್ಮಗುಡ್ಡ ರೈಲು ಯೋಜನೆ ಕುರಿತು ಪರಿಶೀಲಿಸುತ್ತೇವೆ ಎಂದರು.

ಮುಟ್ಟೋಕೆ ಆಗುತ್ತಾ?
ಸಿದ್ದರಾಮಯ್ಯರನ್ನು (Siddaramaiah) ಯಾರಾದ್ರೂ ಮುಟ್ಟೋಕೆ ಆಗುತ್ತಾ? ಯಾರಾದ್ರು ಸಿಎಂ ಅವರನ್ನು ಮುಟ್ಟಿದ್ರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ವ್ಯಂಗ್ಯವಾಡಿದರು. ನನನ್ನು ಮುಟ್ಟಿದ್ರೆ ರಾಜ್ಯದ ಜನ ಸುಮ್ನೆ ಬಿಡಲ್ಲ ಎಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನ್ ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಅವರನ್ನು ಯಾರು ಮುಟ್ಟುವುದು ಬೇಡ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರದ ಕಾರ್ಯ ವೈಖರಿ ಸರಿಯಿಲ್ಲ ಎಂದು ದೂರಿದರು.

 

TAGGED:Belagavi-DharawadakarnatakaSomannasuresh angadiಕರ್ನಾಟಕಧಾರವಾಡಬೆಳಗಾವಿಸುರೇಶ್ ಅಂಗಡಿಸೋಮಣ್ಣ

You Might Also Like

Cinema

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

Public TV
By Public TV
3 hours ago
Cinema

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

Public TV
By Public TV
3 hours ago
Districts

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
4 hours ago
Dharwad

ಧಾರವಾಡದಲ್ಲೊಂದು ಅಚ್ಚರಿ ಪಕ್ರರಣ – ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ

Public TV
By Public TV
4 hours ago
Chikkaballapur

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

Public TV
By Public TV
5 hours ago
Bagalkot

2021ನೇ ಸಾಲಿನ ಪ್ರಶಸ್ತಿ ಘೋಷಣೆ – ಚಾರ್ಲಿ 777 ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account