Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

Bengaluru City

‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

Public TV
Last updated: November 14, 2024 8:13 pm
Public TV
Share
3 Min Read
DINESH GUNDURAO
SHARE

– ಸೆಪ್ಟೆಂಬರ್‌ವರೆಗಿನ ವೇತನವನ್ನ ಏಜನ್ಸಿಯವರು ಪಾವತಿಸಿದ್ದಾರೆ ಎಂದ ಸಚಿವ

ಬೆಂಗಳೂರು: 108 ಆರೋಗ್ಯ ಕವಚದ ಅಂಬುಲೆನ್ಸ್ (108 Ambulence) ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ (Salary) ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಂಬುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತಾ ಬಂದಿದೆ. ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇ.ಎಂ.ಆರ್ ಏಜನ್ಸಿಯವರಿಗೂ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ವೇತನವನ್ನ ಏಜನ್ಸಿಯವರು ಚಾಲಕರಿಗೆ ಪಾವತಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಪಹಣಿಯಲ್ಲಿ ‘ವಕ್ಫ್’ ಬೋರ್ಡ್ ಹೆಸರು ರದ್ದು- ನಿರಾಳರಾದ ರೈತರು

108 Ambulance
ಸಾಂದರ್ಭಿಕ ಚಿತ್ರ

ವಿಪಕ್ಷ ನಾಯಕರಾದ ಆರ್. ಅಶೋಕ್ ಅರೆಬರೆ ಮಾಹಿತಿ ಪಡೆದು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಒಬ್ಬ ವಿಪಕ್ಷ ನಾಯಕರಾಗಿ ವಾಸ್ತವಾಂಶಗಳನ್ನ ಅರಿತು ಮಾತನಾಡಬೇಕು. 108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನು ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ 45% ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಆನೇಕಲ್| ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ಚಾಲಕ ಪಾರು

ಇದೀಗ 108 ಸಿಬ್ಬಂದಿ 45% ರಷ್ಟು ವೇತನ ಹೆಚ್ಚಳ ಮಾಡಿರುವುದನ್ನು ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ. ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನ ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಅಂಬುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ 45% ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿ ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 2024-25ನೇ ಸಾಲಿನಲ್ಲಿ 108 ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ 260.33 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ 162.40 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತಿದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್.ಐ ಗ್ರೀನ್ ಹೆಲ್ತ್ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ಪ್ರತಿ ತ್ರೈಮಾಸಿಕಕ್ಕೆ 40.60 ಕೋಟಿಗಳಂತೆ ವಾರ್ಷಿಕ 162.40 ಕೋಟಿ ರೂ. ಅನುದಾನವನ್ನು ಕಾಲ ಕಾಲಕ್ಕೆ ಬಿಡುಗಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಾವೇರಿ | ಯತ್ನಳ್ಳಿ ಬಳಿ 10 ಬ್ಯಾಲೇಟ್ ಬಾಕ್ಸ್ ಪತ್ತೆ!

ಈ ಬಗ್ಗೆ 108 ಸಿಬ್ಬಂದಿಯನ್ನ ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ನ್ಯಾಯಯುತ ಕನಿಷ್ಠ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ. ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನ ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನ ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮಾನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ ಲೋಪಗಳನ್ನ ಸರಿಪಡಿಸುತ್ತಿರುವಾಗ ಸಿಬ್ಬಂದಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ, ನಿಮ್ಮ ಜೊತೆ ಶಾಶ್ವತವಾಗಿ ಇರ್ತೇನೆ: ನಿಖಿಲ್ ಭರವಸೆ

TAGGED:108 Ambulence108 ಅಂಬುಲೆನ್ಸ್bengalurudinesh gundu raoDriversSalarayಚಾಲಕದಿನೇಶ್ ಗುಂಡೂರಾವ್ಬೆಂಗಳೂರುವೇತನ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
7 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
14 minutes ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
1 hour ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
1 hour ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
1 hour ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?