Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Latest

ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Public TV
Last updated: November 15, 2024 10:41 am
Public TV
Share
3 Min Read
karwar checkpost
SHARE

– ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಪೊಲೀಸರು ಸಿದ್ಧತೆ

ಕಾರವಾರ: ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ತಣ್ಣಗಾಗುವುದರೊಳಗೆ ಕರ್ನಾಟಕ-ಗೋವಾ ಗಡಿಯಲ್ಲಿ ಜಂಟಿ ಕಾರ್ಯಾಚರಣೆ, ತಪಾಸಣೆ ಮಾಡುತ್ತಿದ್ದ ಪೊಲೀಸ್ ಇಲಾಖೆ ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಮುಂದಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿಯಲ್ಲಿರುವ ಅಬಕಾರಿ ಇಲಾಖೆಯ ನೇತೃತ್ವದ, ಜಿಲ್ಲೆಯ ಎರಡು ಸಂಯುಕ್ತ ತನಿಖಾ ಠಾಣೆಗಳಿಂದ ಪೊಲೀಸ್ ಇಲಾಖೆ ಬೇರ್ಪಟ್ಟಿದೆ. ಒಂದೆಡೆ ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ಎದ್ದಿದೆ. ಕಾಕತಾಳೀಯ ಎಂಬಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬಕಾರಿ, ಪೊಲೀಸ್ ನಡುವೆ ವೈಮನಸ್ಸು ಮೂಡಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ತಾಲೂಕಿನ ಮಾಜಾಳಿ, ರಾಷ್ಟ್ರೀಯ ಹೆದ್ದಾರಿ-4ಎ, ಅನಮೋಡದಲ್ಲಿ ಅಬಕಾರಿ ಸಂಯುಕ್ತ ತನಿಖಾ ಠಾಣೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಸ್ಥಗಿತ ಮಾಡಿದೆ. ಗೋವಾ ಗಡಿಯ ಮಾಜಾಳಿ ಹಾಗೂ ರಾಮನಗರದ ಅನಮೋಡದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಹೆಚ್ಚಾಗಿದೆ. ಅಬಕಾರಿ ಸಿಬ್ಬಂದಿ ಮಾಡುವ ತಪ್ಪುಗಳು ಪೊಲೀಸ್ ಇಲಾಖೆ ಮೇಲೂ ಬರುತ್ತಿದೆ. ಮಾದಕ ವಸ್ತುಗಳ ಬಗ್ಗೆ ಹಾಗೂ ಅಪರಾಧಿಗಳ ವಾಹನ ಟ್ರಾö್ಯಕಿಂಗ್‌ಗೂ ಅಬಕಾರಿ ಇಲಾಖೆಯನ್ನು ಆಶ್ರಯಿಸಬೇಕಿದೆ. ಈ ಕಾರಣ ಹೆಚ್ಚಿನ ತಪಾಸಣೆ ನಿಗಾ ಇಡಲು, ಪೊಲೀಸ್ ಇಲಾಖೆ ಈಗಿರುವ ಚೆಕ್‌ಪೋಸ್ಟ್ನಿಂದ ಪ್ರತ್ತೇಕವಾಗಿ ಇನ್ನೊಂದು ತಿಂಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಪ್ರತ್ಯೇಕ ತನಿಖೆ ಮತ್ತು ತಪಾಸಣೆ ಕೈಗೊಳ್ಳಲಿದೆ.

ಕೆಲ ದಿನಗಳ ಹಿಂದೆ ಮಾಜಾಳಿಯ ತನಿಖಾ ಠಾಣೆಯಲ್ಲಿ ಅಕ್ರಮ ಮದ್ಯ ತಪಾಸಣೆಯ ನೆಪದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿತ್ತು. ಅಬಕಾರಿ ಇನ್‌ಸ್ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯ ಲಾರಿ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಈ ಘಟನೆಯ ನಂತರ ಮಾಜಾಳಿಯಲ್ಲಿ ಅಬಕಾರಿ, ಪೊಲೀಸರ ನಡುವೆ ವೈಮನಸ್ಸು ಮೂಡಿತ್ತು.

ದೇಶದ ಇತರ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಗೋವಾದಲ್ಲಿ ಮದ್ಯದ ಮೇಲಿನ ಸುಂಕ ಅತಿ ಕಡಿಮೆ ಇದೆ. ಇದರಿಂದ ಗೋವಾದಿಂದ ರಸ್ತೆ, ರೈಲು ಹಾಗೂ ಜಲ ಮಾರ್ಗವಾಗಿ ದೊಡ್ಡ ಪ್ರಮಾಣದಲ್ಲಿ ಮದ್ಯ ಕರ್ನಾಟಕ ಸೇರಿ ಬೇರೆ ರಾಜ್ಯಗಳಿಗೆ ಸಾಗಣೆಯಾಗುತ್ತವೆ. ಪರಿಣಾಮ ಕರ್ನಾಟಕದ ಮದ್ಯದ ಆದಾಯದ ಮೇಲೆ ಭಾರಿ ಹೊಡೆತ ಬೀಳುತ್ತಿರುವ ಆರೋಪವಿದೆ. ಇದರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಸಭೆ ನಡೆಸಿ ಅಕ್ರಮ ತಡೆಗೆ ಕಟ್ಟುನಿಟ್ಟಿನ ಸೂಚನೆಯನ್ನು ಅಬಕಾರಿ ಅಧಿಕಾರಿಗಳಿಗೆ ನೀಡಿದ್ದರು. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-66 ಹಾಗೂ 4-ಎದಲ್ಲಿರುವ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಗಳಲ್ಲಿ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ, ಬಸ್‌ಗಳು, ದುಬಾರಿ ಕಾರುಗಳು ಸಿಕ್ಕಿ ಹಾಕಿಕೊಳ್ಳುತ್ತವೆ. ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮದ್ಯ ತಡೆಯುವ ನೆಪದಲ್ಲಿ ಕ್ಯಾಮೆರಾ ಕಣ್ಣು ತಪ್ಪಿಸಿ, ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ತನಿಖಾ ಠಾಣೆಗಳು ಚಿನ್ನದ ಮೊಟ್ಟೆ ಇಡುವ ಕೋಳಿ ಎಂಬ ಸುದ್ದಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ವಲಯದಲ್ಲಿದೆ. ಇಲ್ಲಿಗೆ ಕರ್ತವ್ಯಕ್ಕೆ ನೇಮಕ ಮಾಡಿಸಿಕೊಳ್ಳಲು ಎರಡೂ ಇಲಾಖೆಯಲ್ಲಿ ಭಾರಿ ಪೈಪೋಟಿ ನಡೆಯುತ್ತಿತ್ತು. ಆದರೆ, ಇದೀಗ ಈ ಎಲ್ಲಾ ಕಾರಣಗಳು ಅಬಕಾರಿ ಇಲಾಖೆಯಿಂದ ಪೊಲೀಸ್ ಇಲಾಖೆ ಬೇರ್ಪಡಲು ಪ್ರಮುಖ ಕಾರಣವಾಗಿದೆ.

ಕಳೆದ 10 ದಿನಗಳಿಂದ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಪೊಲೀಸ್ ಇಲಾಖೆ ನಿಯೋಜಿಸಿಲ್ಲ. ಕಳೆದ ಐದು ವರ್ಷದ ಹಿಂದೆ ಚೆಕ್‌ಪೋಸ್ಟ್ನಲ್ಲಿ ಲಕ್ಷಾಂತರ ಹಣ ವ್ಯಯಿಸಿ, ನವೀಕರಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಅಬಕಾರಿ, ಅರಣ್ಯ, ಪೊಲೀಸ್, ಗಣಿ ಇಲಾಖೆ ಒಟ್ಟಾಗಿ ಹಿಂದಿನಿಂದ ಇಲ್ಲಿ ಕೆಲಸ ಮಾಡುತ್ತಾ ಬಂದಿವೆ. ಹೀಗಿರುವಾಗ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಪೊಲೀಸ್ ಇಲಾಖೆ ತನ್ನದೇ ಪ್ರತ್ಯೇಕ ತನಿಖಾ ಠಾಣೆ ನಿರ್ಮಿಸಲು ಮುಂದಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

TAGGED:excise departmentKarnataka-Goa Borderkarwarpolice departmentಅಬಕಾರಿ ಇಲಾಖೆಕರ್ನಾಟಕ-ಗೋವಾ ಗಡಿಕಾರವಾರಪೊಲೀಸ್ ಇಲಾಖೆ
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

Fertilizer
Latest

ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ

Public TV
By Public TV
5 minutes ago
Congress MLA Sivaganga Basavaraj
Bengaluru City

2028ರ ತನಕ ಸಿದ್ದರಾಮಯ್ಯ ಸಿಎಂ ಅಂತ ಹೇಳೋಕೆ ರಾಯರೆಡ್ಡಿ ಯಾರು? – ಶಿವಗಂಗಾ ಬಸವರಾಜ ಕಿಡಿ

Public TV
By Public TV
30 minutes ago
Krishna Byre Gowda
Latest

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!

Public TV
By Public TV
31 minutes ago
Congress JDS
Bengaluru City

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ `ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್ – ಜೆಡಿಎಸ್ ವಿರುದ್ಧ ಕಾಂಗ್ರೆಸ್ ಟ್ವೀಟ್ ಲೇವಡಿ

Public TV
By Public TV
51 minutes ago
Sushma
Crime

ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Public TV
By Public TV
1 hour ago
g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?