Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Latest

ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Public TV
Last updated: November 15, 2024 10:41 am
Public TV
Share
3 Min Read
karwar checkpost
SHARE

– ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಪೊಲೀಸರು ಸಿದ್ಧತೆ

ಕಾರವಾರ: ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ತಣ್ಣಗಾಗುವುದರೊಳಗೆ ಕರ್ನಾಟಕ-ಗೋವಾ ಗಡಿಯಲ್ಲಿ ಜಂಟಿ ಕಾರ್ಯಾಚರಣೆ, ತಪಾಸಣೆ ಮಾಡುತ್ತಿದ್ದ ಪೊಲೀಸ್ ಇಲಾಖೆ ಪ್ರತ್ಯೇಕ ಚೆಕ್‌ಪೋಸ್ಟ್ ತೆರೆಯಲು ಮುಂದಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿಯಲ್ಲಿರುವ ಅಬಕಾರಿ ಇಲಾಖೆಯ ನೇತೃತ್ವದ, ಜಿಲ್ಲೆಯ ಎರಡು ಸಂಯುಕ್ತ ತನಿಖಾ ಠಾಣೆಗಳಿಂದ ಪೊಲೀಸ್ ಇಲಾಖೆ ಬೇರ್ಪಟ್ಟಿದೆ. ಒಂದೆಡೆ ರಾಜ್ಯದಲ್ಲಿ ಅಬಕಾರಿ ಕಿಕ್‌ಬ್ಯಾಕ್ ಗಲಾಟೆ ಎದ್ದಿದೆ. ಕಾಕತಾಳೀಯ ಎಂಬಂತೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅಬಕಾರಿ, ಪೊಲೀಸ್ ನಡುವೆ ವೈಮನಸ್ಸು ಮೂಡಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ತಾಲೂಕಿನ ಮಾಜಾಳಿ, ರಾಷ್ಟ್ರೀಯ ಹೆದ್ದಾರಿ-4ಎ, ಅನಮೋಡದಲ್ಲಿ ಅಬಕಾರಿ ಸಂಯುಕ್ತ ತನಿಖಾ ಠಾಣೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಸ್ಥಗಿತ ಮಾಡಿದೆ. ಗೋವಾ ಗಡಿಯ ಮಾಜಾಳಿ ಹಾಗೂ ರಾಮನಗರದ ಅನಮೋಡದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಹೆಚ್ಚಾಗಿದೆ. ಅಬಕಾರಿ ಸಿಬ್ಬಂದಿ ಮಾಡುವ ತಪ್ಪುಗಳು ಪೊಲೀಸ್ ಇಲಾಖೆ ಮೇಲೂ ಬರುತ್ತಿದೆ. ಮಾದಕ ವಸ್ತುಗಳ ಬಗ್ಗೆ ಹಾಗೂ ಅಪರಾಧಿಗಳ ವಾಹನ ಟ್ರಾö್ಯಕಿಂಗ್‌ಗೂ ಅಬಕಾರಿ ಇಲಾಖೆಯನ್ನು ಆಶ್ರಯಿಸಬೇಕಿದೆ. ಈ ಕಾರಣ ಹೆಚ್ಚಿನ ತಪಾಸಣೆ ನಿಗಾ ಇಡಲು, ಪೊಲೀಸ್ ಇಲಾಖೆ ಈಗಿರುವ ಚೆಕ್‌ಪೋಸ್ಟ್ನಿಂದ ಪ್ರತ್ತೇಕವಾಗಿ ಇನ್ನೊಂದು ತಿಂಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಪ್ರತ್ಯೇಕ ತನಿಖೆ ಮತ್ತು ತಪಾಸಣೆ ಕೈಗೊಳ್ಳಲಿದೆ.

ಕೆಲ ದಿನಗಳ ಹಿಂದೆ ಮಾಜಾಳಿಯ ತನಿಖಾ ಠಾಣೆಯಲ್ಲಿ ಅಕ್ರಮ ಮದ್ಯ ತಪಾಸಣೆಯ ನೆಪದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿತ್ತು. ಅಬಕಾರಿ ಇನ್‌ಸ್ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯ ಲಾರಿ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಈ ಘಟನೆಯ ನಂತರ ಮಾಜಾಳಿಯಲ್ಲಿ ಅಬಕಾರಿ, ಪೊಲೀಸರ ನಡುವೆ ವೈಮನಸ್ಸು ಮೂಡಿತ್ತು.

ದೇಶದ ಇತರ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಗೋವಾದಲ್ಲಿ ಮದ್ಯದ ಮೇಲಿನ ಸುಂಕ ಅತಿ ಕಡಿಮೆ ಇದೆ. ಇದರಿಂದ ಗೋವಾದಿಂದ ರಸ್ತೆ, ರೈಲು ಹಾಗೂ ಜಲ ಮಾರ್ಗವಾಗಿ ದೊಡ್ಡ ಪ್ರಮಾಣದಲ್ಲಿ ಮದ್ಯ ಕರ್ನಾಟಕ ಸೇರಿ ಬೇರೆ ರಾಜ್ಯಗಳಿಗೆ ಸಾಗಣೆಯಾಗುತ್ತವೆ. ಪರಿಣಾಮ ಕರ್ನಾಟಕದ ಮದ್ಯದ ಆದಾಯದ ಮೇಲೆ ಭಾರಿ ಹೊಡೆತ ಬೀಳುತ್ತಿರುವ ಆರೋಪವಿದೆ. ಇದರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಸಭೆ ನಡೆಸಿ ಅಕ್ರಮ ತಡೆಗೆ ಕಟ್ಟುನಿಟ್ಟಿನ ಸೂಚನೆಯನ್ನು ಅಬಕಾರಿ ಅಧಿಕಾರಿಗಳಿಗೆ ನೀಡಿದ್ದರು. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-66 ಹಾಗೂ 4-ಎದಲ್ಲಿರುವ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಗಳಲ್ಲಿ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ, ಬಸ್‌ಗಳು, ದುಬಾರಿ ಕಾರುಗಳು ಸಿಕ್ಕಿ ಹಾಕಿಕೊಳ್ಳುತ್ತವೆ. ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮದ್ಯ ತಡೆಯುವ ನೆಪದಲ್ಲಿ ಕ್ಯಾಮೆರಾ ಕಣ್ಣು ತಪ್ಪಿಸಿ, ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ತನಿಖಾ ಠಾಣೆಗಳು ಚಿನ್ನದ ಮೊಟ್ಟೆ ಇಡುವ ಕೋಳಿ ಎಂಬ ಸುದ್ದಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ವಲಯದಲ್ಲಿದೆ. ಇಲ್ಲಿಗೆ ಕರ್ತವ್ಯಕ್ಕೆ ನೇಮಕ ಮಾಡಿಸಿಕೊಳ್ಳಲು ಎರಡೂ ಇಲಾಖೆಯಲ್ಲಿ ಭಾರಿ ಪೈಪೋಟಿ ನಡೆಯುತ್ತಿತ್ತು. ಆದರೆ, ಇದೀಗ ಈ ಎಲ್ಲಾ ಕಾರಣಗಳು ಅಬಕಾರಿ ಇಲಾಖೆಯಿಂದ ಪೊಲೀಸ್ ಇಲಾಖೆ ಬೇರ್ಪಡಲು ಪ್ರಮುಖ ಕಾರಣವಾಗಿದೆ.

ಕಳೆದ 10 ದಿನಗಳಿಂದ ಮಾಜಾಳಿ ಹಾಗೂ ಅನಮೋಡ ತನಿಖಾ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಪೊಲೀಸ್ ಇಲಾಖೆ ನಿಯೋಜಿಸಿಲ್ಲ. ಕಳೆದ ಐದು ವರ್ಷದ ಹಿಂದೆ ಚೆಕ್‌ಪೋಸ್ಟ್ನಲ್ಲಿ ಲಕ್ಷಾಂತರ ಹಣ ವ್ಯಯಿಸಿ, ನವೀಕರಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಅಬಕಾರಿ, ಅರಣ್ಯ, ಪೊಲೀಸ್, ಗಣಿ ಇಲಾಖೆ ಒಟ್ಟಾಗಿ ಹಿಂದಿನಿಂದ ಇಲ್ಲಿ ಕೆಲಸ ಮಾಡುತ್ತಾ ಬಂದಿವೆ. ಹೀಗಿರುವಾಗ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಪೊಲೀಸ್ ಇಲಾಖೆ ತನ್ನದೇ ಪ್ರತ್ಯೇಕ ತನಿಖಾ ಠಾಣೆ ನಿರ್ಮಿಸಲು ಮುಂದಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

TAGGED:excise departmentKarnataka-Goa Borderkarwarpolice departmentಅಬಕಾರಿ ಇಲಾಖೆಕರ್ನಾಟಕ-ಗೋವಾ ಗಡಿಕಾರವಾರಪೊಲೀಸ್ ಇಲಾಖೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
44 minutes ago
car catches fire in bagepalli chikkaballapura 70 year old man burnt alive
Chikkaballapur

ಬಾಗೇಪಲ್ಲಿ | ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ

Public TV
By Public TV
1 hour ago
Gautam Gambhir Suryakumar Yadav Jay Shah
Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
By Public TV
2 hours ago
Ishan Kishan
Cricket

ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

Public TV
By Public TV
2 hours ago
Ballari Student Crime
Bellary

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

Public TV
By Public TV
2 hours ago
Mojtaba Khamenei 1
Latest

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?