Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ| ಒಂದೇ ದಿನ ಸಿಸೇರಿಯನ್‌ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ| ಒಂದೇ ದಿನ ಸಿಸೇರಿಯನ್‌ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ

Bellary

ಬಳ್ಳಾರಿ| ಒಂದೇ ದಿನ ಸಿಸೇರಿಯನ್‌ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ

Public TV
Last updated: November 16, 2024 3:43 pm
Public TV
Share
2 Min Read
Three Women Die At Ballari District Hospital 1
SHARE

– ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ
– ಮೂವರ ಸಾವಿಗೆ IV Fluid ಔಷಧಿಯೇ ಕಾರಣ?
– ಇನ್ನೂ ಬಳ್ಳಾರಿಗೆ ಭೇಟಿ ನೀಡಿಲ್ಲ ಜಮೀರ್‌ ಅಹ್ಮದ್‌

ಬಳ್ಳಾರಿ: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನ. 9 ರಂದು ಸಿಸೇರಿಯನ್ (Cesarean) ಒಳಗಾಗಿದ್ದ ಮೂವರು ಬಾಣಂತಿಯರು ಏಕಾಏಕಿ ಸಾವನ್ನಪ್ಪಿದ ಪ್ರಕರಣ ಈಗ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ನ.9 ರಂದು ಹೆರಿಗೆಗೆ ಬಂದಿದ್ದ ಏಳು ಗರ್ಭಿಣಿಯರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (Ballari District Hospital) ಸಿಸೇರಿಯನ್‌ಗೆ ಒಳಗಾಗಿದ್ದರು. ನ.10 ರಂದು ನಂದಿನಿ ಮತ್ತು ಲಲಿತಮ್ಮ ಸಾವನ್ನಪ್ಪಿದ್ದರೆ ನ.13 ರಂದು ರೋಜಮ್ಮ ಮೃತಪಟ್ಟಿದ್ದರು. ಉಳಿದ ನಾಲ್ವರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾವಿಗೆ ಕಾರಣ ಏನು?
ಮೂವರು ತಾಯಂದಿರ ಸಾವಿಗೆ ಅಸಲಿ ಕಾರಣ ಇನ್ನೂ ತಿಳಿದು ಬಾರದೇ ಇದ್ದರೂ ಮೇಲ್ನೋಟಕ್ಕೆ ಇದು ಮೆಡಿಕಲ್ ರಿಯಾಕ್ಷನ್ ಎನ್ನುವ ಅನುಮಾನ ಶುರುವಾಗಿದೆ. ಮೂವರ ಸಾವಿಗೆ IV Fluid ಔಷಧಿಯೇ ಕಾರಣ  ಎಂಬ ಸಂಶಯ ವ್ಯಕ್ತವಾಗುತ್ತಿದೆ. ಯಾಕೆಂದರೆ ಸಿಸೇರಿಯನ್ ಬಳಿಕ ವೈದ್ಯರು ಐವಿ ಫ್ಲೂಯಿಡ್ ಹಾಗೂ ಎನ್‌ಎಸ್‌ಎಲ್‌ ಗ್ಲುಕೋಸ್‌ ಹಾಕಿದ್ದರು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ(KSMSCL) ಕಳುಹಿಸಿದ್ದ ಗ್ಲುಕೋಸ್‌ಗಳನ್ನು ನ. 9 ರಂದು ಹಾಕಲಾಗಿತ್ತು. ಆ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿ ನ.10 ರಂದು ನಂದಿನಿ ಹಾಗೂ ಲಲಿತಮ್ಮ ಮೃತಪಟ್ಟಿದ್ದರು. ಕೂಡಲೇ ಇನ್ನುಳಿದ ಐದು ಬಾಣಂತಿಯರನ್ನು ಬಿಮ್ಸ್‌ಗೆ ರವಾನೆ ಮಾಡಲಾಗಿತ್ತು. ಇದನ್ನೂ ಓದಿ: ಬಿಪಿಎಲ್, ಎಪಿಎಲ್‌ ಕಾರ್ಡ್‌ದಾರರಿಗೆ ಬಿಗ್‌ ಶಾಕ್!

 

KSMSCL ಕಳುಹಿಸಿದ್ದ ಗ್ಲುಕೋಸ್‌ಗಳೇ ಇದಕ್ಕೆಲ್ಲಾ ಕಾರಣ ಎಂಬ ಬಲವಾದ ಅನುಮಾನ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳ ಮೂಲದ ಒಂದು ಖಾಸಗಿ ಮೆಡಿಕಲ್ ಸಪ್ಲೈ ಕಂಪನಿಯಿಂದ ಈ ಗ್ಲುಕೋಸ್‌ ಖರೀದಿಸಲಾಗಿದೆ. ಈ ಹಿಂದೆ ಈ ಕಂಪನಿಯನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕಲಾಗಿತ್ತು ಎನ್ನಲಾಗುತ್ತಿದೆ. ಇದೇ ಕಂಪನಿ ನೀಡಿದ ಮೆಡಿಸಿನ್ ಪಡೆದು ತುಮಕೂರಿನಲ್ಲೂ ಹಲವರು ಸಾವಿಗೀಡಾಗಿದ್ದರು. ಈಗ ಅದೇ ಕಂಪನಿಯ ಔಷಧಿಯಿಂದಲೇ ಬಳ್ಳಾರಿಯ ಬಾಣಂತಿಯರ ಸಾವಾಗಿರಬಹುದು ಎನ್ನುವ ಶಂಕೆ ಇದೆ.

ಆರೋಗ್ಯವಾಗಿವೆ ಶಿಶುಗಳು:
ಮೂವರು ಬಾಣಂತಿಯರಿಗೆ ಜನಿಸಿರುವ ಶಿಶುಗಳು ಆರೋಗ್ಯದಿಂದ ಇವೆಯಾದರೂ ಮೃತ ಬಾಣಂತಿಯರ ಕುಟುಂಬಸ್ಥರು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಏನೂ ಅರಿಯದ ಹಸುಳೆಗಳನ್ನ ಕಂಡು ಮಮ್ಮಲ ಮರುಗುತ್ತಿದ್ದಾರೆ.

ರೋಜಾಮ್ಮ ಅವರ ಗಂಡ ರಾಜಾ ಹೆಂಡತಿಯ ಸಾವನ್ನು ಅರಗಿಸಿಕೊಳ್ಳಲಾಗದೇ ಶುಕ್ರವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಪ್ಪಳದ ಗಂಗಾವತಿಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Three Women Die At Ballari District Hospital 2

ಇಡೀ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತನಿಖಾ ತಂಡವನ್ನು ರಚಿಸಿದೆ. ಇದರ ನಡುವೆ ಸಂಸದ ಈ ತುಕಾರಾಂ, ಶಾಸಕ ನಾರಾ ಭರತ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ಜಮೀರ್‌ ಬ್ಯುಸಿ:
ಇಷ್ಟೊಂದು ದೊಡ್ಡ ಘಟನೆ ಸಂಭವಿಸಿದರೂ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಇನ್ನೂ ಬಳ್ಳಾರಿಗೆ ಬಂದಿಲ್ಲ. ಕರ್ನಾಟಕ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಜಮೀರ್‌ ಮುಂದೆ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

 

TAGGED:BIMSPregnancyzameer ahmedಗರ್ಭಿಣಿಜಮೀರ್ ಅಹ್ಮದ್ಬಳ್ಳಾರಿಬಿಮ್ಸ್
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
3 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
14 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
41 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
2 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?