Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಗಾರಿಕೋದ್ಯಮಕ್ಕೆ ಕರ್ನಾಟಕ ಸರ್ಕಾರ ಹೆಚ್ಚಿನ ಅವಕಾಶ ನೀಡಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈಗಾರಿಕೋದ್ಯಮಕ್ಕೆ ಕರ್ನಾಟಕ ಸರ್ಕಾರ ಹೆಚ್ಚಿನ ಅವಕಾಶ ನೀಡಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Bengaluru City

ಕೈಗಾರಿಕೋದ್ಯಮಕ್ಕೆ ಕರ್ನಾಟಕ ಸರ್ಕಾರ ಹೆಚ್ಚಿನ ಅವಕಾಶ ನೀಡಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Public TV
Last updated: November 20, 2024 4:10 pm
Public TV
Share
3 Min Read
DK Shivakumar 5
SHARE

ಬೆಂಗಳೂರು: ಕರ್ನಾಟಕ ಸುಸ್ಥಿರ ಆಡಳಿತ, ಜಲಸಂಪನ್ಮೂಲ, ಮಾನವ ಸಂಪನ್ಮೂಲ, ಇಂಧನ, ತಂತ್ರಜ್ಞಾನ ಸೇರಿದಂತೆ ಕೈಗಾರಿಕೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯವನ್ನು ಹೊಂದಿದ್ದು, ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಅವಕಾಶವಿದೆ. ನಮ್ಮ ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸಿ ನೀವು ನಮಗೆ ಶಕ್ತಿ ತುಂಬಿದರೆ, ನಾವು ಕೂಡ ನಿಮಗೆ ಅಗತ್ಯ ಬಲ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಇಲ್ಲಿನ ಜಿಕೆವಿಕೆ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಭಾರತೀಯ ಲೋಹಗಳ ಸಂಸ್ಥೆ (IIM) ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿ, ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ದೇಶದಲ್ಲಿ ತೆರಿಗೆ ಪಾವತಿಯಲ್ಲಿ 2ನೇ ಸ್ಥಾನದಲ್ಲಿದೆ. ಭೂ ವಿಸ್ತೀರ್ಣದಲ್ಲಿ 3ನೇ ಅತಿ ದೊಡ್ಡ ರಾಜ್ಯವಾಗಿದೆ. ಐಟಿ ಬಿಟಿ ಮಾತ್ರವಲ್ಲದೇ ನೀವೆಲ್ಲರೂ ನಿಮ್ಮ ಇತರೇ ಕ್ಷೇತ್ರಗಳಲ್ಲಿಯೂ ನಮಗೆ ಮಾರ್ಗದರ್ಶನ ನೀಡಬೇಕು. ನಮ್ಮ ರಾಜ್ಯದಲ್ಲಿ ಕೈಗಾರಿಕೆಗೆ ಅನೇಕ ಅವಕಾಶಗಳನ್ನು ಒದಗಿಸಿಕೊಡಲಾಗಿದೆ. ರಾಜ್ಯದಲ್ಲಿ ಸುಸ್ಥಿರ ಆಡಳಿತ ಹಾಗೂ ಜಲಸಂಪನ್ಮೂಲ ಹೊಂದಿದ್ದೇವೆ. ಇಂಧನ ಕ್ಷೇತ್ರದಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮತ್ತಷ್ಟು ಪ್ರಗತಿ ಸಾಧಿಸಲು ಅವಕಾಶವಿದೆ. ಸಿದ್ದರಾಮಯ್ಯ ಅವರ ಕಳೆದ ಅವಧಿಯ ಸರ್ಕಾರದಲ್ಲಿ 18 ಸಾವಿರ ಮೆಗಾವ್ಯಾಟ್‌ನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಅವಧಿಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್ ಅವರು ಬೃಹತ್ ಕೈಗಾರಿಕಾ ಕ್ಷೇತ್ರವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದಾರೆ. ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಲು ಬದ್ಧವಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಸುಮಾರು 250ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿವೆ. ಪ್ರತಿಭಾವಂತ ಮಾನವ ಸಂಪನ್ಮೂಲಗಳನ್ನು ತಯಾರು ಮಾಡುತ್ತಿರುವ ರಾಜ್ಯವಾಗಿದೆ. ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳಿದ್ದು, ಅತಿ ಹೆಚ್ಚು ವೈದ್ಯರು ಹೊರ ಬರುತ್ತಿದ್ದಾರೆ. ಅನೇಕ ಮ್ಯಾನೇಜ್‌ಮೆಂಟ್‌ ಕಾಲೇಜುಗಳಿವೆ ಎಂದು ವಿವರಿಸಿದರು.

ಸಜ್ಜನ್ ಜಿಂದಾಲ್ ಅವರು ಎಂ.ಎಸ್ ರಾಮಯ್ಯ ಕಾಲೇಜಿನಲ್ಲೇ ಓದಿದ್ದು, ಅವರಿಗೆ ಬೆಂಗಳೂರಿನ ಬೀದಿ ಬೀದಿಗಳ ಪರಿಚಯವಿದೆ. ಅವರು ಬೆಂಗಳೂರಿನಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದಾರೆ. ಅನೇಕ ಸಿಎಸ್ಆರ್ ಯೋಜನೆ ಹಮ್ಮಿಕೊಂಡಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ರತನ್ ಟಾಟಾ ಅವರ ಭಾವಚಿತ್ರವಿಟ್ಟು ಗೌರವ ಸಲ್ಲಿಸಿರುವುದನ್ನು ನೋಡಿ ನನಗೆ ಸಂತೋಷವಾಯಿತು. 25 ವರ್ಷಗಳ ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಅವರನ್ನು ಭೇಟಿ ಮಾಡಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಮಾಡಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಆಹ್ವಾನ ನೀಡಿದ್ದೆ. ಆದರೆ ಬೇರೆ ವಿಚಾರಗಳಿಂದ ಅವರು ಇದನ್ನು ನಿರಾಕರಿಸಿದ್ದರು.

ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಬೇಕು. ನೀವು ದೂರ ಸಾಗಬೇಕಾದರೆ ಎಲ್ಲರೊಂದಿಗೆ ಒಟ್ಟಾಗಿ ಸಾಗಬೇಕು ಎಂಬ ನಾಣ್ಣುಡಿ ಇದೆ. ಇಂದು ನೀವೆಲ್ಲರೂ ಜತೆಗೂಡಿ ಈ ಕಾರ್ಯಕ್ರಮ ಮಾಡುತ್ತಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ಅದೇ ರೀತಿ ನೀವು ಜತೆಗೂಡಿ ಚರ್ಚೆ ಮಾಡಿ ಈ ಕ್ಷೇತ್ರದ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತಿದ್ದೀರಿ. ಸಜ್ಜನ್ ಜಿಂದಾಲ್ ಅವರ ನೇತೃತ್ವದಲ್ಲಿ ಈ ಸಂಸ್ಥೆ ನೀತಿ ನಿರೂಪಕರು, ಕೈಗಾರಿಕೋದ್ಯಮಿಗಳು ಏನೇನು ಮಾಡಬೇಕು ಎಂದು ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

ಐಐಎಂ ಸಂಸ್ಥೆ ತನ್ನದೇ ಆದ ಇತಿಹಾಸ ಹೊಂದಿದೆ. ಈ ಸಂಸ್ಥೆ ಕೈಗಾರಿಕೋದ್ಯಮದ ಅಡಿಪಾಯವಾಗಿದೆ. ದೇಶದ ಗಣಿಗಾರಿಗೆಯಲ್ಲಿ ಕರ್ನಾಟಕ ಕೇಂದ್ರ ಸ್ಥಾನ. 200 ವರ್ಷಗಳ ಹಿಂದೆ ಕೆಜಿಎಫ್‌ನಲ್ಲಿ ಚಿನ್ನದ ಅದಿರು ತೆಗೆಯಲು ಪ್ರಾರಂಭಿಸಲಾಯಿತು. ನಮ್ಮದು ದೊಡ್ಡ ಕಬ್ಬಿಣದ ಅದಿರು ಹೊಂದಿರುವ ರಾಜ್ಯವಾಗಿದೆ. ಈ ಕ್ಷೇತ್ರದಲ್ಲಿ ಸಜ್ಜನ್ ಜಿಂದಾಲ್ ಅವರ ಸಂಸ್ಥೆ ಮುಂದಾಳತ್ವ ವಹಿಸಿದೆ.

ಅನೇಕ ವಿಚಾರಗಳಿಂದಾಗಿ ಇಡೀ ವಿಶ್ವ ನಮ್ಮ ರಾಜ್ಯದತ್ತ ಮುಖಮಾಡಿದೆ. ಎಸ್.ಎಂ ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿಗೆ ಬಂದಿದ್ದಾಗ ಒಂದು ಮಾತು ಹೇಳಿದ್ದರು. ಇಷ್ಟು ದಿನ ವಿಶ್ವ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ತೆರಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಬಣ್ಣಿಸಿದ್ದರು ಎಂದು ತಿಳಿಸಿದರು.

ನಮ್ಮ ಸರ್ಕಾರ ಸದಾ ನಿಮ್ಮ ಬೆಂಬಲಕ್ಕೆ ಇದೆ. ನಾವೆಲ್ಲರೂ ಒಟ್ಟಾಗಿ ಈ ರಾಜ್ಯದ ಅಭಿವೃದ್ಧಿಯ ಹಾದಿಯಲ್ಲಿ ಹೆಜ್ಜೆ ಹಾಕೋಣ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ನಿಮಗೆ ನೆರವಾಗಲು ನಾವು ಬದ್ಧರಾಗಿದ್ದೇವೆ. ನೀವು ನಿಮ್ಮ ಮನಸ್ಸು ಬಿಚ್ಚಿ ಈ ವೇದಿಕೆ ಮೂಲಕ ನಿಮ್ಮ ವಿಚಾರವನ್ನು ಚರ್ಚೆ ಮಾಡಿ. ನೀವು ನಮ್ಮ ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡಿದಷ್ಟು ನಾವು ನಿಮಗೆ ಎಲ್ಲಾ ರೀತಿ ಶಕ್ತಿ ತುಂಬಲು ಮುಂದಾಗುತ್ತೇವೆ ಎಂದು ತಿಳಿಸಿದರು.

TAGGED:bengalurud k shivakumarGKVKಡಿ.ಕೆ.ಶಿವಕುಮಾರ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
9 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
9 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
29 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
54 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
1 hour ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?