Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್‌ ಏನೇನು ಕಾರ್ಯತಂತ್ರ ಮಾಡಿತ್ತು?

Public TV
Last updated: November 23, 2024 5:34 pm
Public TV
Share
4 Min Read
BJP RSS 1
SHARE

– ಹರ್ ಘರ್ ಸಂವಿಧಾನ ಅಭಿಯಾನ
– ಸಣ್ಣ ಪುಟ್ಟ ಜಾತಿಗಳನ್ನು ಒಗ್ಗೂಡಿಸಿದ್ದ ಆರ್‌ಎಸ್‌ಎಸ್‌
– 60 ಸಾವಿರ+ ಸಭೆ, ದಲಿತರ ಮನೆ ಮನೆ ಭೇಟಿ

ಮುಂಬೈ: ಲೋಕಸಭಾ ಚುನಾವಣೆಯಲ್ಲಿ (Lok Sabah Election) ಮಹಾರಾಷ್ಟ್ರದಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ INDIA ಒಕ್ಕೂಟವನ್ನು ಧ್ವಂಸ ಮಾಡಿದೆ. ಬಿಜೆಪಿ 100ಕ್ಕೂ ಹೆಚ್ಚು ಸ್ಥಾನ ಗೆದ್ದು ಮಹಾರಾಷ್ಟ್ರದಲ್ಲಿ ಇತಿಹಾಸ ನಿರ್ಮಿಸಿದೆ. ಬಿಜೆಪಿಯ ಇತಿಹಾಸ ನಿರ್ಮಾಣ ಮಾಡಿದ್ದರೂ ಈ ಅತ್ಯುತ್ತಮ ಕೆಲಸದ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೆಲಸ ಈಗ ಮುನ್ನೆಲೆಗೆ ಬರುತ್ತಿದೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬೆಂಬಲ ಅಗತ್ಯವಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹೇಳಿದ್ದರು. ನಡ್ಡಾ ಹೇಳಿಕೆ ಪಕ್ಷದ ಒಳಗಡೆಯೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಜೆಪಿ ನಡ್ಡಾ ಹೇಳಿಕೆ, ತಾನು ಶಿಫಾರಸು ಮಾಡಿದ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡದಿರುವುದು ಸೇರಿದಂತೆ ಹಲವು ವಿಷಯಗಳಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧ ಹಳಸಿತ್ತು. ಲೋಕಸಭಾ ಚುನಾವಣೆಯಲ್ಲಿ (LokSabha Election) ಬಿಜೆಪಿ ಕಳಪೆ ಸಾಧನೆ ಮಾಡಿದ ಬೆನ್ನಲ್ಲೇ ಆರ್‌ಎಸ್‌ಎಸ್‌ ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು.ಇದರ ಭಾಗವಾಗಿ ಮಹಾರಾಷ್ಟ್ರ ಚುನಾವಣೆಗೂ ಮೊದಲು ಮುಂಬೈನಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರು ಮಹತ್ವದ  ಸಮನ್ವಯ ಸಭೆ ನಡೆಸಿದ್ದರು.

bjp rss

ಸಭೆಯಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು, ಇತರ ಬಿಜೆಪಿ ನಾಯಕರು, ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿಶ್ವ ಹಿಂದೂ ಪರಿಷತ್, ವನವಾಸಿ ಕಲ್ಯಾಣ ಆಶ್ರಮ, ಭಾರತೀಯ ಮಜ್ದೂರ್ ಸಂಘ ಭಾಗಿಯಾಗಿತ್ತು. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ನಾಯಕರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕೆ ಕಳಪೆ ಪ್ರದರ್ಶನ ನೀಡಿತು ಎಂಬುದರ ಕುರಿತು ವಿವರಣೆ ನೀಡಿದ್ದರು. ಬಿಜೆಪಿ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲವಾಗಿದೆ? ನಾವು ಎಲ್ಲಿ ದುರ್ಬಲರಾಗಿದ್ದೇವೆ? ಕ್ಷೇತ್ರಗಳಲ್ಲಿ ಒಳಗೊಂಡಿರುವ ಸಮಸ್ಯೆಗಳು ಮತ್ತು ಅವುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಚರ್ಚೆ ನಡೆಸಲಾಯಿತು. ನಂತರ ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸಕ್ಕೆ ಕೈ ಹಾಕಲಾಯಿತು. 10-12 ಮಂದಿಯ ಗುಂಪು ರಚಿಸಿ ಮನೆಮನೆಗೆ ತೆರಳಿ ವಿಪಕ್ಷಗಳ ಅಪಪ್ರಚಾರದ ಬಗ್ಗೆ ತಿಳಿಸಲು ನಿರ್ಧಾರ ಕೈಗೊಳ್ಳಲಾಯಿತು.

ವಿಪಕ್ಷಗಳು ಹೇಗೆ ಜಾತಿ ಜಾತಿ ಹೆಸರಿನಲ್ಲಿ ಹಿಂದೂಗಳನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುದಕ್ಕೆ ಮನೆ ಮನೆಗೆ ತೆರಳಿ ಕರಪತ್ರವನ್ನು ಹಂಚಲು ಆರಂಭಿಸಿದರು. ಲವ್‌ ಜಿಹಾದ್‌ನಿಂದ ಏನಾಗುತ್ತಿದೆ? ವಕ್ಫ್‌ ಬೋರ್ಡ್‌ ಹೇಗೆ ಜಾಗಗಳನ್ನು ಕಬಳಿಸುತ್ತಿದೆ. ಅನಿಯಂತ್ರಿತ ಅಕ್ರಮ ವಲಸೆಯಿಂದ ಎಷ್ಟು ಸಮಸ್ಯೆ ಆಗುತ್ತಿದೆ ಇತ್ಯಾದಿಗಳ ಬಗ್ಗೆ ವಿವರಗಳನ್ನು ಕರಪತ್ರದಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: 11 ಮುಸ್ಲಿಂ ಸ್ಪರ್ಧಿಗಳನ್ನು ಹಿಂದಿಕ್ಕಿ ಏಕೈಕ ಹಿಂದೂ ಅಭ್ಯರ್ಥಿ ಮುನ್ನಡೆ

Rahul Gandhi 1

ರಾಹುಲ್‌ ಗಾಂಧಿ ಅವರು ತನ್ನ ಚುನಾವಣಾ ಪ್ರಚಾರ ಭಾಷಣದಲ್ಲಿ ಸಂವಿಧಾನ ಪುಸ್ತಕ ಹಿಡಿದುಕೊಂಡು ಬಿಜೆಪಿ ಸಂವಿಧಾನ ಬದಲಾಯಿಸಲು ಹೋಗುತ್ತಿದೆ ಎಂದು ಆರೋಪಿಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಆರ್‌ಎಸ್‌ಎಸ್ ಸಂಘಟನೆಗಳು ‘ಹರ್ ಘರ್ ಸಂವಿಧಾನ’ ಎಂಬ ಅಭಿಯಾನ ಆರಂಭಿಸಿತ್ತು. ದಲಿತರ ಮನೆ ಮನೆಗ ಹೋಗಿ ಕಾಂಗ್ರೆಸ್‌ ಹೇಗೆ ಯಾವ ರೀತಿ ದಲಿತರಿಗೆ ಅನ್ಯಾಯ ಮಾಡುತ್ತಿದೆ? ಅಂಬೇಡ್ಕರ್‌ ಅವರನ್ನು ಯಾವ ರೀತಿ ನಡೆಸಿಕೊಂಡಿತ್ತು ಇತ್ಯಾದಿ ವಿಷಯಗಳ ಇಟ್ಟುಕೊಂಡು ತಳ ಮಟ್ಟದಲ್ಲಿ ಜನರ ಜೊತೆ ಸಭೆ ನಡೆಸತೊಡಗಿತು.

ಲೋಕಸಭಾ ಚುನಾವಣೆಯಲ್ಲಿ ಧುಲೆಯಲ್ಲಿ ಕಾಂಗ್ರೆಸ್‌ 3,800 ಮತಗಳಿಂದ ಗೆಲ್ಲಲು ಮಲೇಗಾವ್‌ ಕ್ಷೇತ್ರದ 1.9 ಲಕ್ಷ ಮತಗಳು ಕಾರಣವಾಗಿತ್ತು. ಬಹುತೇಕ ಮುಸ್ಲಿಮರೇ ಪ್ರಾಬಲ್ಯ ಇರುವ ಈ ಕ್ಷೇತ್ರದಲ್ಲಿ ಹೇಗೆ ಮತ ಒಟ್ಟಾಗಿ ಕಾಂಗ್ರೆಸ್‌ಗೆ ಬಿದ್ದವು ಎನ್ನುವುದು ಈ ವಿಧಾನಸಭಾ ಚುನಾವಣೆಯಲ್ಲಿ ಬಹಳ ಚರ್ಚೆ ಆಗುತ್ತಿತ್ತು.

ಮರಾಠ ನಾಯಕ ಮನೋಜ್ ಜಾರಂಗೆ ಪಾಟೀಲ್ ಅವರ ಮೀಸಲಾತಿ ಹೋರಾಟದಿಂದ ಪಕ್ಷಕ್ಕೆ ಸಮಸ್ಯೆಯಾಗಬಹುದು ಎನ್ನುವುದು ಬಿಜೆಪಿಗೆ ಗೊತ್ತಿತ್ತು. ಈ ಕಾರಣಕ್ಕೆ ಹಲವು ಸಣ್ಣಪುಟ್ಟ ಜಾತಿಗಳನ್ನು ಒಗ್ಗೂಡಿಸಲು ಮುಂದಾಯಿತು. ವರದಿಗಳ ಪ್ರಕಾರ ಸುಮಾರು 8-15 ಮಂದಿ ಭಾಗಿಯಾಗಿರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣ ಸಣ್ಣ ಸಭೆಗಳನ್ನು ಆರ್‌ಎಸ್‌ಎಸ್‌ ಮಾಡಿತ್ತು.

narendra modi yogi adityanath

ಗ್ರಾಮೀಣ ಗ್ರಾಮಗಳಲ್ಲಿ ಪ್ರವಚನ ನೀಡುವವರು, ಆಧ್ಯಾತ್ಮಿಕ ಉಪನ್ಯಾಸಗಳನ್ನು ನೀಡುವವರ ಮೂಲಕ ಹಿಂದೂ ಸಮುದಾಯವನ್ನು ವಿಭಜಿಸಿದರೆ ಅದು ಎಲ್ಲರಿಗೂ ಸಮಸ್ಯೆ ಆಗಬಹುದು ಎಂಬ ಸಂದೇಶವನ್ನು ರವಾನಿಸಲಾಯಿತು. ಆರ್‌ಎಸ್‌ಎಸ್‌ ಈ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಧಾರ್ಮಿಕ ಮುಖಂಡರು ಬಿಜೆಪಿಗೆ ಮತ ಹಾಕುವಂತೆ ಹಲವು ಬಾರಿ ಬಹಿರಂಗವಾಗಿಯೇ ಕರೆ ನೀಡತೊಡಗಿದರು. ಜೈನ ಮುನಿಗಳು ಕೂಡ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಸಮುದಾಯಕ್ಕೆ ಕರೆ ನೀಡಿದ್ದರು.

ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್‌ ಅವರು ತಮ್ಮ ಭಾಷಣದಲ್ಲಿ ಬಟೇಂಗೆ ತೋ ಕಟೇಂಗೆ (ವಿಭಜಿಸಿದರೆ ನಮ್ಮನ್ನು ಕತ್ತರಿಸಲಾಗುತ್ತದೆ) ಎಂದು ಹೇಳಿದರೆ ಪ್ರಧಾನಿ ಮೋದಿ ‘ಏಕ್ ಹೈ ತೋ ಸೇಫ್‌ ಹೈ'(ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ) ಎಂದು ಹೇಳುತ್ತಿದ್ದರು. ಮಹಿಳೆಯರನ್ನು ಗುರಿಯಾಗಿಸಿದ ಜಾರಿಗೆ ತಂದ ಲಾಡ್ಲಿ ಬೆಹೆನಾ, ವಿಪಕ್ಷದ ಒಳಗಿನ ಕಚ್ಚಾಟ ಸೇರಿದಂತೆ ಹಲವು ವಿಷಯಗಳು ಬಿಜೆಪಿ ವರವಾಗಿದ್ದರೂ ತಳಮಟ್ಟದಲ್ಲಿ ಆರ್‌ಎಸ್‌ಎಸ್‌ ಪ್ರಚಾರ ಬಿಜೆಪಿಗೆ ಬಲವನ್ನು ನೀಡಿತು.

ಮುಂಬೈ ದೇಶದ ಆರ್ಥಿಕ ರಾಜಧಾನಿ ಆಗಿರುವ ಕಾರಣ ಕಾಂಗ್ರೆಸ್‌ ಮತ್ತು ಮಿತ್ರ ಪಕ್ಷಗಳು ಕೈಗಾರಿಕೋದ್ಯಮಿಗಳನ್ನು ಹೇಗೆ ನಡೆಸಿಕೊಳ್ಳುತ್ತದೆ? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಇದ್ದಾಗ ಯಾವ ರೀತಿ ಮೂಲಸೌಕರ್ಯಗಳು ಅಭಿವೃದ್ಧಿಯಾದವು. ರಾಷ್ಟ್ರೀಯತೆಯನ್ನು ಬೆಳೆಸದಿದ್ದರೆ ಏನಾಗುತ್ತದೆ? ಬಾಂಗ್ಲಾದೇಶ ಹಿಂದೂಗಳಿಗೆ ಏನಾಗುತ್ತಿದೆ? ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಆರ್‌ಎಸ್‌ಎಸ್‌ ಪ್ರಚಾರ ನಡೆಸುತ್ತಿತ್ತು.

ತಳಮಟ್ಟದಲ್ಲಿ ಆರ್‌ಎಸ್‌ಎಸ್‌ ಉತ್ತಮ ಕೆಲಸ ಮಾಡಿರುವುದು ಬಿಜೆಪಿ ಗೊತ್ತಾಗಿತ್ತು. ಈ ಕಾರಣಕ್ಕೆ ಮಹಾರಾಷ್ಟ್ರದ ಮತದಾನ ನಡೆದ ಕೆಲವೇ ಗಂಟೆಗಳ ನಂತರ ಫಡ್ನವಿಸ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದರು. ಚುನಾವಣಾ ಪ್ರಚಾರದ ಸಮಯದಲ್ಲಿ ಆರ್‌ಎಸ್‌ಎಸ್ ನಿರ್ವಹಿಸಿದ ಪಾತ್ರಕ್ಕೆ ಫಡ್ನವಿಸ್ ಧನ್ಯವಾದ ಅರ್ಪಿಸಲು ತೆರಳಿದ್ದರು ಎಂದು ವರದಿಯಾಗಿತ್ತು.

 

TAGGED:bjpdevendra fadnavismaharashtrarssಆರ್‍ಎಸ್‍ಎಸ್ದೇವೇಂದ್ರ ಫಡ್ನಾವೀಸ್ಬಿಜೆಪಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
22 minutes ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
19 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
21 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago

You Might Also Like

Lover Killed
Bengaluru City

Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್‌ ಪ್ರೇಮಿ

Public TV
By Public TV
6 seconds ago
Parameshwar
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

Public TV
By Public TV
8 minutes ago
container Fire 3
Latest

Kerala | ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿಗೆ ಬೆಂಕಿ

Public TV
By Public TV
19 minutes ago
Trump
Latest

ಏರ್‌ಫೋರ್ಸ್‌ ಒನ್‌ ಮೆಟ್ಟಿಲ ಮೇಲೆ ಎಡವಿ ಬಿದ್ದ ಟ್ರಂಪ್‌ – ಎಲ್ರೂ ಕಾಲೆಳಿತದೆ ಕಾಲ ಎಂದ ನೆಟ್ಟಿಗರು!

Public TV
By Public TV
1 hour ago
Siddaramaiah 2
Districts

ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿದ್ದರಾಮಯ್ಯ

Public TV
By Public TV
2 hours ago
Meghalaya Honeymoon 5
Latest

ಹನಿಮೂನ್‌ ಮರ್ಡರ್‌ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್‌ ತಂದೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?