Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಲಿವ್‌-ಇನ್‌ ಗೆಳತಿಯನ್ನ ಸುಟ್ಟು ಕೊಂದು ಬೆಂಕಿ ಅವಘಡ ಅಂತ ನಾಟಕವಾಡಿದ್ದ ಉದ್ಯಮಿ ಅಂದರ್‌

Public TV
Last updated: November 25, 2024 8:35 am
Public TV
Share
2 Min Read
LOVERS 1
SHARE

ಚಂಡೀಗಢ: ವಿವಾಹಿತ ಉದ್ಯಮಿಯೊಬ್ಬ (Businessman) ತನ್ನ ಲಿವ್‌-ಇನ್‌ ಗೆಳತಿಯನ್ನು ಚಾಕುವಿನಿಂದ ಇರಿದು ಕೊಂದು, ದೇಹವನ್ನು ಸುಟ್ಟುಹಾಕಿರುವ ಘಟನೆ ಹರಿಯಾಣದ ಸೋನಿಪತ್‌ನಲ್ಲಿ (Haryana’s Sonipat) ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಕೊಲೆಯಾದ ಮಹಿಳೆಯನ್ನು (Women) ಸರಿತಾ ಹಾಗೂ ಕೊಲೆ ಆರೋಪಿಯನ್ನ ಸಿವಿಲ್ ಲೈನ್ಸ್ ಪ್ರದೇಶದ ರಿಷಿ ಕಾಲೋನಿಯಲ್ಲಿ ಉಪಕಾರ್ ಎಂದು ಗುರುತಿಸಲಾಗಿದೆ. ಪಂಜಾಬ್‌ನ (Punjab) ಜಿರಾಕ್‌ಪುರ ನಿವಾಸಿಯಾಗಿರುವ ಸರಿತಾ ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದಳು. ಈಕೆ ಪತಿಯಿಂದ ಬೇರ್ಪಟ್ಟು 6 ವರ್ಷಗಳಿಂದ ಉದ್ಯಮಿಯೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು

crime 1

ಅಲ್ಲದೇ ಉಪಕಾರ್‌ ಲಿವಿ-ಇನ್‌ ಸಂಬಂಧ (live In Relationship) ಬಗ್ಗೆ ಆತನ ಪತ್ನಿಗೆ ತಿಳಿದಿತ್ತು. ಸರಿತಾ ಕೂಡ 2004ರಲ್ಲೇ ತನ್ನ ಪತಿಗೆ ವಿಚ್ಛೇದನ ನೀಡಿದ್ದಳು. ಇಬ್ಬರೂ ಕಳೆದ 6 ವರ್ಷಗಳಿಂದ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ಮನೀಶ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ – ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಕಾರು ಬಿದ್ದು 3 ಸಾವು

ಅಕ್ಟೋಬರ್‌ 25ರಂದು ಸರಿತಾಳನ್ನ ಕೊಂದಿರುವ ಉಪಕಾರ್‌ ಆಕೆಯ ದೇಹದೊಂದಿಗೆ ಇಡೀ ಮನೆಯನ್ನೇ ಸುಟ್ಟುಹಾಕಿದ್ದಾನೆ. ನಂತರ ಇದೊಂದು ಆಕಸ್ಮಿಕ ಬೆಂಕಿ ಅವಘಡ ಎನ್ನುವಂತೆ ಬಿಂಬಿಸಿದ್ದಾನೆ. ಆದ್ರೆ ವಿಧಿವಿಜ್ಞಾನ ಪ್ರಯೋಗಾಲಯ ಪರೀಕ್ಷೆ ಬಳಿಕ ಸುಟ್ಟ ಗಾಯಕ್ಕೂ ಮುನ್ನ ಚೂರಿ ಇರಿದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಉಪಕಾರ್‌ನನ್ನ ಬಂಧಿಸಲಾಗಿದೆ. ಸದ್ಯ ನ್ಯಾಯಾಲಯವು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Lovers

ಗೊತ್ತಾಗಿದ್ದು ಹೇಗೆ?
ಪಂಜಾಬ್‌ನಲ್ಲಿರುವ ಸರಿತಾ ಸಹೋದರಿ ತ್ರಿಶ್ಲಾ ಸೋನಿಪತ್‌ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಒಂದೊಂದೇ ಸತ್ಯಗಳು ಬೆಳಕಿಗೆ ಬಂದಿದೆ. ಇದನ್ನೂ ಓದಿ:  ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ – ಇಂದಿನಿಂದ ವಕ್ಫ್‌ ವಿರುದ್ಧ ಬಿಜೆಪಿ ರೆಬಲ್ಸ್‌ ಟೀಂ ಹೋರಾಟ ಶುರು

ಸರಿತಾ ತನ್ನ ಪತಿ ಕಪಿಲ್‌ಗೆ ವಿಚ್ಛೇದನ ನೀಡಿ, 2018 ರಿಂದ ಸೋನಿಪತ್‌ನಲ್ಲಿ ಉಪಕಾರ್‌ನೊಂದಿಗೆ ವಾಸಿಸಲು ಪ್ರಾರಂಭಿಸಿದಳು. ಆಗಲೇ ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅ.20ರಂದು ಉಪಕಾರ್‌ ತನಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎಂದು ಸರಿತಾ ನನ್ನ ಬಳಿ ಕೇಳಿಕೊಂಡಿದ್ದಳು. ಅ.25ರಂದು ತನಗೆ ಕರೆ ಮಾಡಿ ಉಪಕಾರ್‌ ನನ್ನನ್ನ ಸಾಯಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳಿದ್ದಳು. ಈ ಕರೆ ಕಟ್ಟಾದ ಕೆಲವೇ ಕ್ಷಣಗಳಲ್ಲಿ ಫೋನ್‌ ಸ್ವಿಚ್‌ ಆಫ್‌ ಆಗಿತ್ತು. ಅದೇ ದಿನ ರಾತ್ರಿ ಸರಿತಾ ಇದ್ದ ಮನೆಗೆ ಬೆಂಕಿ ತಗುಲಿ ಆಕೆ ಬೆಂಕಿಗೆ ಆಹುತಿಯಾದಳು ಎಂಬ ಮಾಹಿತಿ ತ್ರಿಶಲಾಗೆ ಸಿಕ್ಕಿತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಳು. ವಿಧಿವಿಜ್ಞಾನ ಪ್ರಯೋಗಾಲಯ ಪರೀಕ್ಷಾ ವರದಿ ಬಂದ ಬಳಿಕ ಸತ್ಯ ಬಯಲಾಗಿದೆ.

TAGGED:businessmanHaryanaLive In PartnermarriageSonipatSonipat Policeಮದುವೆಮಹಿಳೆಲಿವ್‌ ಇನ್‌ ಪಾಟ್ನರ್‌ಹರಿಯಾಣ
Share This Article
Facebook Whatsapp Whatsapp Telegram

You Might Also Like

WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
50 seconds ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
4 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
32 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
33 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?