ಬೆಳಗಾವಿ: ಟ್ರ್ಯಾಕ್ಟರ್ಗಳಲ್ಲಿ (Tractor) ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು (Belagavi Police) ಬಿಸಿ ಮುಟ್ಟಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ (Sugar Factory) ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್ಗಳಲ್ಲಿ ಚಾಲಕರು ವಿಪರೀತ ಸೌಂಡ್ ಬಳಸ್ತಿದ್ದಾರೆ. ಜಾನಪದ ಹಾಡುಗಳನ್ನು ಹಚ್ಚಿ ಅಧಿಕ ಸೌಂಡ್ನೊಂದಿಗೆ ಚಾಲಕರು ಕಬ್ಬು ಒಯ್ಯುತ್ತಿದ್ದಾರೆ.
ಮುನವಳ್ಳಿ ಪಟ್ಟಣದಲ್ಲಿ ಟ್ರ್ಯಾಕ್ಟರ್ಗಳ ಮೇಲೆ ಸವದತ್ತಿ ಪೊಲೀಸರು ದಾಳಿ ನಡೆಸಿದ್ದಾರೆ. ಟೇಪ್ಗಳನ್ನು ಟ್ರ್ಯಾಕ್ಟರ್ ಚಕ್ರಕ್ಕೆ ಇಟ್ಟು ಹಾನಿಗೊಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ಒಕ್ಕಲಿಗರ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿ ಮುಜುಗರಕ್ಕೀಡಾದ ಜಾರ್ಜ್