ಚಿಕ್ಕೋಡಿ: ಉತ್ತರ ಭಾರತದಲ್ಲಿ ನದಿಗಳಿಗೆ ಗಂಗಾರತಿ (Ganga Aarti) ಮಾಡುವ ಮಾದರಿಯಲ್ಲೆ ಹೀರಣ್ಯಕೇಶಿ ನದಿಗೆ ಗಂಗಾರತಿ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಸುಪ್ರಸಿದ್ಧ ಹೊಳೆಮ್ಮ ದೇವಸ್ಥಾನ ಪಕ್ಕದ ಹೀರಣ್ಯಕೇಶಿ (Hiranyakeshi) ನದಿಗೆ ಗಂಗಾರತಿ ಜರುಗಿತು. ಕಳೆದ ನಾಲ್ಕು ವರ್ಷಗಳಿಂದ ಕಾರ್ತಿಕ ಮಾಸದಲ್ಲಿ ಹೀರಣ್ಯಕೇಶಿ ನದಿಗೆ ಗಂಗಾರತಿ ಕಾರ್ಯಕ್ರಮವನ್ನ ಹುಕ್ಕೇರಿ ಹಿರೇಮಠದಿಂದ ಆಯೋಜನೆ ಮಾಡಲಾಗುತ್ತಿದೆ.
ಕಾಶಿ ಗಂಗಾರತಿ ಮಾದರಿಯಲ್ಲೇ ಮಂತ್ರ ಜಪಿಸಿ ನದಿಗೆ ಪೂಜೆ ಸಲ್ಲಿಸಿ ಗಂಗಾರತಿ ಮಾಡುವುದು ವಿಶೇಷವಾಗಿತ್ತು. ನದಿಗಳನ್ನು ಸ್ವಚ್ಛಂದವಾಗಿಟ್ಟುಕೊಳ್ಳಲು ಗಂಗಾರತಿಯನ್ನು ಆಯೋಜಿಸಲಾಗುತ್ತಿರುವುದು ವಿಶೇಷ. ಇದನ್ನೂ ಓದಿ: ಕಡೆಯ ಕಾರ್ತಿಕ ಸೋಮವಾರ – ಕೋಲಾರದ ಅಂತರಗಂಗೆಗೆ ಭಕ್ತರ ದಂಡು
ಗಂಗಾರತಿ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಗಂಗಾರತಿಯನ್ನ ಕಣ್ಣು ತುಂಬಿಕೊಂಡರು. ಗಂಗಾರತಿ ಬಳಿಕ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.